ಬ್ರೇಕಿಂಗ್ ನ್ಯೂಸ್
13-09-20 02:51 pm Mangalore Reporter ಕರಾವಳಿ
ಮಂಗಳೂರು, ಸೆಪ್ಟಂಬರ್ 13: ಮಾಜಿ ಸಚಿವ ಜಮೀರ್ ಅಹ್ಮದ್ ಬಗ್ಗೆ ಡ್ರಗ್ಸ್ ಪ್ರಕರಣದಲ್ಲಿ ಕೈವಾಡ ಇದೆಯೆಂದು ಬರ್ತಿರೋದು ಮೀಡಿಯಾದಲ್ಲಿ ಮಾತ್ರ. ರಾಜಕೀಯ ಪ್ರೇರಿತ ಕಾರಣದಿಂದ ಇಂಥ ಸುದ್ದಿ ಹರಡಲಾಗುತ್ತಿದೆ. ಅದಕ್ಕೆ ಬಿಜೆಪಿಯವರು ಬೇಜವಾಬ್ದಾರಿ, ರಾಜಕೀಯ ಪ್ರೇರಿತ ಹೇಳಿಕೆ ನೀಡುತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಹೇಳಿದ್ದಾರೆ.
ಮಂಗಳೂರಿನಲ್ಲಿ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಲೀಂ ಅಹ್ಮದ್, ಡ್ರಗ್ಸ್ ವಿಷಯದಲ್ಲಿ ಯಾರೇ ತಪ್ಪು ಮಾಡಿದ್ರು ಕಾಂಗ್ರೆಸ್ ಪಕ್ಷ ರಕ್ಷಿಸುವ ಪ್ರಶ್ನೆಯೇ ಬರಲ್ಲ. ಎಲ್ಲರಿಗೂ ಕಾನೂನು ಒಂದೇ ಆಗಿದ್ದು ತಪ್ಪು ಮಾಡಿದವರನ್ನು ಶಿಕ್ಷಿಸಲಿ. ಹಾಗೆಂದು ಬಿಜೆಪಿಯವರು ಬೇಜವಾಬ್ದಾರಿ ಹೇಳಿಕೆ ನೀಡೋದು ಸರಿಯಲ್ಲ. ಬಿಜೆಪಿಯ ಎಂಎಲ್ಸಿ ರವಿಕುಮಾರ್ ಒಬ್ಬ ಮುಠ್ಠಾಳ, ಬೇಜವಾಬ್ದಾರಿಯಾಗಿ ಮಾತನಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಡ್ರಗ್ಸ್ ಮಾಫಿಯಾ ಪ್ರಕರಣದ ತನಿಖೆಯಲ್ಲಿ ಸರಕಾರ ಎಡವುತ್ತಿದೆ. ತನಿಖೆಯ ದಿಕ್ಕನ್ನು ನೋಡಿದರೆ ರಾಜಕೀಯ ಪ್ರೇರಿತವಾಗಿ ಸಾಗುತ್ತಿರುವಂತೆ ತೋರುತ್ತಿದೆ ಎಂದು ಹೇಳಿದರು.

ಇನ್ನು ಕುಮಾರಸ್ವಾಮಿ ಜೊತೆ ಜಮೀರ್ ಶ್ರೀಲಂಕಾಗೆ ಹೋಗಿದ್ದು ನಾಲ್ಕು ವರ್ಷ ಹಿಂದಿನ ಕತೆ. ಅಲ್ಲಿ ಏನೇನು ಆಗಿದೆ ಅನ್ನೋದ್ರ ಬಗ್ಗೆ ಜಮೀರ್ ಅವರೇ ಉತ್ತರಿಸಬೇಕು. ಆದರೆ, ಕುಮಾರಸ್ವಾಮಿ ತನ್ನ ಸರಕಾರ ಬೀಳಲು ಡ್ರಗ್ಸ್ ಮಾಫಿಯಾ ಕಾರಣ ಎಂದಿದ್ದರು. ಈ ಹೇಳಿಕೆ ಬಗ್ಗೆ ತನಿಖೆ ಆಗಬೇಕು, ಸತ್ಯ ಹೊರಬರಲಿ ಎಂದರು.
ಹಿರಿಯರನ್ನು ಹೊರಗಿಟ್ಟಿದ್ದಲ್ಲ, ಪುನಾರಚನೆ ಅಷ್ಟೇ
ಇನ್ನು ಎಐಸಿಸಿಯಿಂದ ಹಿರಿಯ ನಾಯಕರನ್ನು ಹೊರಗಿಟ್ಟಿರುವ ಪ್ರಶ್ನೆಗೆ ಉತ್ತರಿಸಿದ ಸಲೀಂ ಅಹ್ಮದ್, ಎಐಸಿಸಿ ಪುನಾರಚನೆ ಅನ್ನುವುದು ಸಾಮಾನ್ಯ ಪ್ರಕ್ರಿಯೆ. ಮೂರು ವರ್ಷಗಳಿಂದ ಪುನಾರಚನೆ ಪ್ರಕ್ರಿಯೆ ಆಗಿರಲಿಲ್ಲ. ಈಗ ಪುನಾರಚನೆ ಆಗಿರುವುದನ್ನು ಬೇರೆ ದೃಷ್ಟಿಯಿಂದ ನೋಡುವುದು ಬೇಡ. ಅದರಲ್ಲಿ ಹೊಸಬರಿಗೆ ಅವಕಾಶ ನೀಡಲಾಗಿದೆ, ಜೊತೆಗೆ ಹಿರಿಯರನ್ನು ಉಳಿಸಿಕೊಳ್ಳಲಾಗಿದೆ. ಇನ್ನು ಕೆಲವು ಹಿರಿಯರಿಗೆ ಬೇರೆಯದ್ದೇ ಜವಾಬ್ದಾರಿ ನೀಡಿ ಪಕ್ಷ ಸಂಘಟನೆಗೆ ಬಳಸಿಕೊಳ್ಳಲಿದೆ ಎಂದು ಹೇಳಿದರು.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am