ಬ್ರೇಕಿಂಗ್ ನ್ಯೂಸ್
26-11-21 09:03 pm HK news Desk ಕರಾವಳಿ
ಮಂಗಳೂರು, ನ.26: ಸಹೋದ್ಯೋಗಿ ಮಹಿಳಾ ಸಿಬಂದಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದಲ್ಲಿ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು , ಆರೋಪಿತ ಅಧಿಕಾರಿ ಡಾ.ರತ್ನಾಕರ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕುಷ್ಠರೋಗ ನಿವಾರಣಾ ಘಟಕದ ಜಿಲ್ಲಾ ಮಟ್ಟದ ಅಧಿಕಾರಿ ಡಾ.ರತ್ನಾಕರ್ ಕಳೆದ ಹಲವಾರು ತಿಂಗಳುಗಳಿಂದ ತನ್ನ ಕಚೇರಿಯಲ್ಲಿ ಕೆಲಸ ಮಾಡುತ್ತಿರುವ ಮಹಿಳಾ ಸಿಬಂದಿಯ ಜೊತೆ ಅನುಚಿತವಾಗಿ ವರ್ತಿಸುತ್ತಿದ್ದ ಬಗ್ಗೆ ಆರೋಪ ಕೇಳಿಬಂದಿತ್ತು. ಈ ಬಗ್ಗೆ ಅಲ್ಲಿನ ಸಿಬಂದಿ ಜಿಲ್ಲಾ ಆರೋಗ್ಯಾಧಿಕಾರಿಗೆ ದೂರನ್ನೂ ನೀಡಿದ್ದರು. ಪ್ರಕರಣ ಸಂಬಂಧಿಸಿ ಆಂತರಿಕ ತನಿಖೆ ನಡೆದು ಜಿಲ್ಲಾಧಿಕಾರಿ ಮೂಲಕ ರಾಜ್ಯ ಆರೋಗ್ಯ ಇಲಾಖೆಗೆ ವರದಿ ಸಲ್ಲಿಸಲಾಗಿತ್ತು. ಕಳೆದ ಆಗಸ್ಟ್ ನಲ್ಲಿ ಸಲ್ಲಿಕೆಯಾಗಿದ್ದ ವರದಿ ಅನುಸರಿಸಿ, ಆರೋಪಿತ ಅಧಿಕಾರಿಯನ್ನು ಅಮಾನತು ಮಾಡಲಾಗಿತ್ತು.
ಆದರೆ, ಈ ನಡುವೆ ಆರೋಪಿತ ಅಧಿಕಾರಿ ಮಹಿಳಾ ಸಿಬಂದಿಯ ಜೊತೆ ಅನುಚಿತವಾಗಿ ನಡೆದುಕೊಳ್ಳುತ್ತಿದ್ದ ವಿಡಿಯೋ ಮತ್ತು ಫೋಟೋಗಳು ಜಾಲತಾಣದಲ್ಲಿ ವೈರಲ್ ಆಗಿದ್ದು, ಮಾಧ್ಯಮದಲ್ಲಿ ಭಾರೀ ಟೀಕೆಗೆ ಕಾರಣವಾಗಿತ್ತು. ಸಾರ್ವಜನಿಕ ವಲಯದಲ್ಲಿಯೂ ಇಂತಹ ಅಧಿಕಾರಿಯ ವಿರುದ್ಧ ಕ್ರಮ ಕೈಗೊಳ್ಳಬೇಕೆಂಬ ಆಗ್ರಹ ಕೇಳಿಬಂದಿತ್ತು. ಈ ಬಗ್ಗೆ ಮಹಿಳಾ ಠಾಣೆ ಇನ್ಸ್ ಪೆಕ್ಟರ್, ಸಂತ್ರಸ್ತ ಮಹಿಳಾ ಸಿಬಂದಿಯಲ್ಲಿ ಪೊಲೀಸ್ ದೂರು ನೀಡುವಂತೆ ಕೇಳಿಕೊಂಡಿದ್ದರು. ಆದರೆ, ಮಹಿಳಾ ಸಿಬಂದಿ ದೂರು ನೀಡಲು ಹಿಂಜರಿದಿದ್ದರು.
ಆಬಳಿಕ ಮಹಿಳಾ ಸಂಘಟನೆಯಲ್ಲಿ ಗುರುತಿಸಿಕೊಂಡಿರುವ ಸ್ಥಳೀಯ ಮಹಿಳೆಯೊಬ್ಬರು ಈ ಬಗ್ಗೆ ಮಹಿಳಾ ಠಾಣೆಗೆ ದೂರು ನೀಡಿದ್ದಾರೆ. ಅದರಂತೆ, ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿತ ಅಧಿಕಾರಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಪೊಲೀಸ್ ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ.
Mangalore govt Doctor pictures of Romancing goes viral arrested after complaint registered at womans police station. A health officer's addiction to sex has become common knowledge now. It is said that the officer has been having fun with nine women employees of his office. He has now been suspended from service. The officer is reportedly seen indulging in unacceptable activities inside his office even during hours.
02-10-25 03:50 pm
Bangalore Correspondent
ಆರ್ ಸಿಬಿ ತಂಡ ಮಾರಾಟಕ್ಕಿಟ್ಟ ಯುನೈಟೆಡ್ ಸ್ಪಿರಿಟ್ಸ್...
02-10-25 02:28 pm
ಹಾಸನದ ನಿಗೂಢ ಸ್ಫೋಟದ ಬೆನ್ನತ್ತಿದ ಪೊಲೀಸರು ; ಸಿಡಿಮ...
01-10-25 10:06 pm
Dharmasthala Case: ಧರ್ಮಸ್ಥಳ ಪ್ರಕರಣ ; ಆದಷ್ಟು ಬ...
30-09-25 07:31 pm
Hassan Blast: ಹಾಸನದಲ್ಲಿ ಅನುಮಾನಾಸ್ಪದ ಸ್ಫೋಟ ; ನ...
30-09-25 04:00 pm
02-10-25 03:45 pm
HK News Desk
ಆರೆಸ್ಸೆಸ್ ಶತಮಾನೋತ್ಸವ ; ಭಾರತ ಮಾತೆಯ ಚಿತ್ರವಿರುವ...
01-10-25 09:44 pm
Cough Syrup Side Effects Suspected, Kidney Fa...
01-10-25 05:32 pm
ಮುಂಬೈ ಉಗ್ರ ದಾಳಿ ; 17 ವರ್ಷಗಳ ಬಳಿಕ ಪಿ. ಚಿದಂಬರಂ...
01-10-25 04:10 pm
ಫಸ್ಟ್ ನೈಟ್ ಅರ್ಜೆಂಟ್ ಮಾಡಂಗಿಲ್ಲ..! ಮದುಮಗಳ ರಾಗಕ್...
30-09-25 04:08 pm
02-10-25 11:05 pm
Mangalore Correspondent
Illegal Slaughterhouse in Mangalore: ಬೆನ್ನು ಬ...
02-10-25 10:43 pm
D.K. Shivakumar, Mangaluru Dasara: ದೇವರೇ ನನ್ನ...
02-10-25 11:43 am
Mangalore, Pilinalike 2025: ಪಿಲಿನಲಿಕೆ ಉತ್ಸವಕ್...
01-10-25 11:00 pm
Jayanth, Chinnayya, Dharmasthala Case: ಚಿನ್ನಯ...
01-10-25 04:45 pm
01-10-25 02:39 pm
Mangalore Correspondent
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm
ವಾಟ್ಸಪ್ ಮೆಸೇಜ್ ನಂಬಿ ಷೇರು ಮಾರುಕಟ್ಟೆ ಹೂಡಿಕೆ ; ನ...
28-09-25 05:04 pm
ಉಡುಪಿ ಬಸ್ ಚಾಲಕ ಸೈಫುದ್ದೀನ್ ಸ್ನೇಹಿತರಿಂದಲೇ ಕೊಲೆ...
28-09-25 04:57 pm