ಬ್ರೇಕಿಂಗ್ ನ್ಯೂಸ್
26-11-21 10:17 pm HK Desk news ಕರಾವಳಿ
ಉಳ್ಳಾಲ, ನ.26: ಉಳ್ಳಾಲದ ರಾಜರಸ್ತೆಯ ಇಕ್ಕೆಲಗಳಲ್ಲಿ ಸರ್ವಿಸ್ ರಸ್ತೆ ನಿರ್ಮಿಸುವ ನೆಪದಲ್ಲಿ ಉಳ್ಳಾಲ ಬೈಲಿನ ವೈದ್ಯನಾಥ ದೈವದ ಕಟ್ಟೆಯನ್ನ ತೆರವುಗೊಳಿಸಲು ಬಂದ ಅಧಿಕಾರಿಗಳನ್ನ ಸ್ಥಳೀಯರು ಹಿಮ್ಮೆಟ್ಟಿಸಿದ್ದು ಕಟ್ಟೆ ತೆರವಿಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಉಳ್ಳಾಲ ಬೈಲಿನ ಗದ್ದೆಯಲ್ಲಿ ವೈದ್ಯನಾಥ ದೈವದ ವಲಸರಿ ಕಟ್ಟೆ ಜಾತ್ರೆ ನಡೆಯುವ ಪ್ರದೇಶವು ಪುರಾಣ ಪ್ರಸಿದ್ಧವಾಗಿದ್ದು ಅನೇಕ ಭಕ್ತಾದಿಗಳ ಆರಾಧನೀಯ ಸ್ಥಳವಾಗಿದೆ. ಈ ಪ್ರದೇಶದ ರಸ್ತೆ ಬದಿಯಲ್ಲೇ ವೈದ್ಯನಾಥ ದೈವಕ್ಕೆ ಸಂಬಂಧಿಸಿದ ಕದಂಬ ವೃಕ್ಷವನ್ನೊಳಗೊಂಡ ಕಟ್ಟೆಯೊಂದಿದೆ. ಉಳ್ಳಾಲ ರಾಜರಸ್ತೆ ಇಕ್ಕೆಲಗಳಿಗೆ ಬೈಕ್, ಸೈಕಲ್ ಟ್ರಾಕ್ ಒಳಗೊಂಡ ಸರ್ವಿಸ್ ರಸ್ತೆ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದ್ದು ಆ ನಿಟ್ಟಿನಲ್ಲಿ ಅಧಿಕಾರಿಗಳು ಕಟ್ಟೆ ತೆರವಿಗೆ ಮುಂದಾಗಿದ್ದರು. ಅದರೆ ಸ್ಥಳೀಯ ಬಜರಂಗದಳ ಕಾರ್ಯಕರ್ತರು ಕಟ್ಟೆ ತೆರವಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದು ಅಧಿಕಾರಿಗಳ ಕ್ರಮಕ್ಕೆ ತಡೆ ಹಾಕಿದ್ದಾರೆ. ಅಧಿಕಾರಿಗಳು ರಾತ್ರಿ ಕಟ್ಟೆ ತೆರವುಗೊಳಿಸಬಹುದೆಂಬ ಕಾರಣಕ್ಕೆ ಗುರುವಾರ ರಾತ್ರಿ ಸ್ಥಳೀಯ ನೂರಾರು ಭಕ್ತಾದಿಗಳು ವೈದ್ಯನಾಥ ಕಟ್ಟೆಯ ಬಳಿ ಜಮಾಯಿಸಿದ್ದಾರೆ.


ಉಳ್ಳಾಲ ಠಾಣಾ ಪಿಐ ಸಂದೀಪ್ ಅವರು ಸ್ಥಳಕ್ಕೆ ಆಗಮಿಸಿ ಸಂಬಂಧ ಪಟ್ಟ ಲೋಕೋಪಯೋಗಿ ಇಂಜಿನಿಯರ್ ಬಳಿ ಚರ್ಚಿಸಿ ಪರ್ಯಾಯ ವ್ಯವಸ್ಥೆ ಕಂಡುಕೊಳ್ಳುವ ಬಗ್ಗೆ ಸ್ಥಳೀಯರಿಗೆ ಭರವಸೆ ನೀಡಿದ್ದಾರೆ.
Mangalore Ullal officials try to destroy Viadyanath katte for service road purpose, residents oppose and tense situation created after which police rushed to the spot.
11-02-26 11:02 pm
HK News Desk
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
11-02-26 06:47 pm
HK News Desk
ಹಗಲಿನಲ್ಲಿ ಸಾಫ್ಟ್ವೇರ್ ಇಂಜಿನಿಯರ್, ರಾತ್ರಿ ವೇಳೆ...
11-02-26 04:22 pm
ಮಥುರಾದಲ್ಲಿ ಮೂವರು ಮಕ್ಕಳಿಗೆ ವಿಷವುಣಿಸಿ ದಂಪತಿ ಸಾವ...
10-02-26 07:31 pm
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
12-02-26 11:41 am
Mangalore Correspondent
ಮಂಗಳೂರಿನ ಸ್ವಸ್ತಿಕಾ ಬಿಸಿನೆಸ್ ಸ್ಕೂಲ್ ರಾಜ್ಯದ ಮೊದ...
11-02-26 06:00 pm
ಎಡಪದವು ಬಳಿ ಹೊಸ ಹೆದ್ದಾರಿಗೆ ಅಗೆತ - ಹಳೆ ರಸ್ತೆ ಕು...
11-02-26 03:45 pm
Love Jihad, Mangalore: ಬಿಎಸ್ಸಿ ಕ್ರಿಮಿನಾಲಜಿ ಓದ...
10-02-26 11:03 pm
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
11-02-26 10:54 pm
Udupi Correspondent
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm
ಸಚಿವ ಬೈರತಿ ಸುರೇಶ್ ಕಚೇರಿಯಲ್ಲೇ 300 ಗ್ರಾಂ ಚಿನ್ನಾ...
10-02-26 09:05 pm
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am