ಬ್ರೇಕಿಂಗ್ ನ್ಯೂಸ್
26-11-21 10:17 pm HK Desk news ಕರಾವಳಿ
ಉಳ್ಳಾಲ, ನ.26: ಉಳ್ಳಾಲದ ರಾಜರಸ್ತೆಯ ಇಕ್ಕೆಲಗಳಲ್ಲಿ ಸರ್ವಿಸ್ ರಸ್ತೆ ನಿರ್ಮಿಸುವ ನೆಪದಲ್ಲಿ ಉಳ್ಳಾಲ ಬೈಲಿನ ವೈದ್ಯನಾಥ ದೈವದ ಕಟ್ಟೆಯನ್ನ ತೆರವುಗೊಳಿಸಲು ಬಂದ ಅಧಿಕಾರಿಗಳನ್ನ ಸ್ಥಳೀಯರು ಹಿಮ್ಮೆಟ್ಟಿಸಿದ್ದು ಕಟ್ಟೆ ತೆರವಿಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಉಳ್ಳಾಲ ಬೈಲಿನ ಗದ್ದೆಯಲ್ಲಿ ವೈದ್ಯನಾಥ ದೈವದ ವಲಸರಿ ಕಟ್ಟೆ ಜಾತ್ರೆ ನಡೆಯುವ ಪ್ರದೇಶವು ಪುರಾಣ ಪ್ರಸಿದ್ಧವಾಗಿದ್ದು ಅನೇಕ ಭಕ್ತಾದಿಗಳ ಆರಾಧನೀಯ ಸ್ಥಳವಾಗಿದೆ. ಈ ಪ್ರದೇಶದ ರಸ್ತೆ ಬದಿಯಲ್ಲೇ ವೈದ್ಯನಾಥ ದೈವಕ್ಕೆ ಸಂಬಂಧಿಸಿದ ಕದಂಬ ವೃಕ್ಷವನ್ನೊಳಗೊಂಡ ಕಟ್ಟೆಯೊಂದಿದೆ. ಉಳ್ಳಾಲ ರಾಜರಸ್ತೆ ಇಕ್ಕೆಲಗಳಿಗೆ ಬೈಕ್, ಸೈಕಲ್ ಟ್ರಾಕ್ ಒಳಗೊಂಡ ಸರ್ವಿಸ್ ರಸ್ತೆ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದ್ದು ಆ ನಿಟ್ಟಿನಲ್ಲಿ ಅಧಿಕಾರಿಗಳು ಕಟ್ಟೆ ತೆರವಿಗೆ ಮುಂದಾಗಿದ್ದರು. ಅದರೆ ಸ್ಥಳೀಯ ಬಜರಂಗದಳ ಕಾರ್ಯಕರ್ತರು ಕಟ್ಟೆ ತೆರವಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದು ಅಧಿಕಾರಿಗಳ ಕ್ರಮಕ್ಕೆ ತಡೆ ಹಾಕಿದ್ದಾರೆ. ಅಧಿಕಾರಿಗಳು ರಾತ್ರಿ ಕಟ್ಟೆ ತೆರವುಗೊಳಿಸಬಹುದೆಂಬ ಕಾರಣಕ್ಕೆ ಗುರುವಾರ ರಾತ್ರಿ ಸ್ಥಳೀಯ ನೂರಾರು ಭಕ್ತಾದಿಗಳು ವೈದ್ಯನಾಥ ಕಟ್ಟೆಯ ಬಳಿ ಜಮಾಯಿಸಿದ್ದಾರೆ.
ಉಳ್ಳಾಲ ಠಾಣಾ ಪಿಐ ಸಂದೀಪ್ ಅವರು ಸ್ಥಳಕ್ಕೆ ಆಗಮಿಸಿ ಸಂಬಂಧ ಪಟ್ಟ ಲೋಕೋಪಯೋಗಿ ಇಂಜಿನಿಯರ್ ಬಳಿ ಚರ್ಚಿಸಿ ಪರ್ಯಾಯ ವ್ಯವಸ್ಥೆ ಕಂಡುಕೊಳ್ಳುವ ಬಗ್ಗೆ ಸ್ಥಳೀಯರಿಗೆ ಭರವಸೆ ನೀಡಿದ್ದಾರೆ.
Mangalore Ullal officials try to destroy Viadyanath katte for service road purpose, residents oppose and tense situation created after which police rushed to the spot.
14-07-25 12:50 pm
Bangalore Correspondent
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm