ಉಳ್ಳಾಲದಲ್ಲಿ ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ ; ಬೆಳ್ಳಾರೆಯ ಯುವತಿ ಶಂಕೆ

27-11-21 01:04 pm       HK Desk news   ಕರಾವಳಿ

ಉಳ್ಳಾಲ ಹೊಯ್ಗೆ ನೇತ್ರಾವತಿ ನದಿ ತೀರದಲ್ಲಿ ಸಂಪೂರ್ಣ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿದೆ.

Photo credits : Headline Karnataka

ಉಳ್ಳಾಲ, ನ.27: ಉಳ್ಳಾಲ ಹೊಯ್ಗೆ ನೇತ್ರಾವತಿ ನದಿ ತೀರದಲ್ಲಿ ಸಂಪೂರ್ಣ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿದೆ.

ಇಂದು ಬೆಳಗ್ಗೆ ಮಹಿಳೆಯ ಶವ ಸಂಪೂರ್ಣ ವಿವಸ್ತ್ರ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಸಂಪೂರ್ಣ ಕೊಳೆತು ಹೋಗಿದೆ. ಹೊಯ್ಗೆ ಕಿಂಗ್ ಸ್ಟಾರ್ ಸೇವಾ ಸಮಿತಿಯ ಪ್ರೇಮ್ ಪ್ರಕಾಶ್ ಡಿಸೋಜ, ರಾಕೇಶ್ ಪ್ರಶಾಂತ್ ಡಿಸೋಜ, ಅನಿಲ್ ಮೊಂತೇರೊ ಮತ್ತು ನಿಶಾನ್ ಜಾಯ್ ಲೋಬೋ, ಅವರು ಶವವನ್ನ ನದಿಯಿಂದ ಮೇಲಕ್ಕೆತ್ತಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಉಳ್ಳಾಲ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ.  

ವಾರದ ಹಿಂದೆ ಬಂಟ್ವಾಳ ಪಾಣೆ ಮಂಗಳೂರಿನ ನೇತ್ರಾವತಿ ಸೇತುವೆಯಿಂದ ಬೆಳ್ಳಾರೆ ಮೂಲದ ಮಹಿಳೆಯೋರ್ವರು ನದಿಗೆ ಜಿಗಿದು ನಾಪತ್ತೆಯಾಗಿದ್ದ ಘಟನೆ ನಡೆದಿತ್ತು. ಈಗ ಪತ್ತೆಯಾಗಿರುವ ಮಹಿಳೆಯ ಶವ ಅದೇ ಆಗಿರಬಹುದೇ ಎಂಬ ಬಗ್ಗೆ ಶಂಕೆ ವ್ಯಕ್ತವಾಗಿದೆ. ಉಳ್ಳಾಲ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

Ullal Body of Woman found in river. The body is suspected to be of Bellre girl who was said to be missing.