ಬ್ರೇಕಿಂಗ್ ನ್ಯೂಸ್
28-11-21 04:34 pm Mangaluru Correspondent ಕರಾವಳಿ
ಮಂಗಳೂರು: 2014ರಲ್ಲಿ ನಡೆದ ಅಪ್ರಾಪ್ತ ದಲಿತ ಬಾಲಕಿಯ ಕಿಡ್ನಾಪ್ ಮತ್ತು ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗೆ ಏಳು ವರ್ಷಗಳ ಕಠಿಣ ಸಜೆ ಮತ್ತು 15 ಸಾವಿರ ರೂ. ದಂಡ ವಿಧಿಸಿ ಮಂಗಳೂರಿನ ಒಂದನೇ ತ್ವರಿತ ಗತಿ ಸೆಷನ್ಸ್ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.
ಅಪ್ರಾಪ್ತ ಬಾಲಕಿಯ ಅಪಹರಣ ಆರೋಪಕ್ಕೆ 3 ವರ್ಷ ಕಠಿಣ ಶಿಕ್ಷೆ ಮತ್ತು 5000 ರೂ. ದಂಡ ಹಾಗೂ ದಂಡ ತೆರಲು ತಪ್ಪಿದರೆ 15 ದಿನಗಳ ಕಠಿಣ ಶಿಕ್ಷೆ, ಅತ್ಯಾಚಾರ ಆರೋಪಕ್ಕೆ 7 ವರ್ಷ ಕಠಿಣ ಸಜೆ ಮತ್ತು 10 ಸಾವಿರ ರೂ. ದಂಡ ಹಾಗೂ ದಂಡ ಪಾವತಿಸಲು ತಪ್ಪಿದರೆ ಎರಡು ತಿಂಗಳ ಕಠಿಣ ಸಜೆಯನ್ನು ಅನುಭವಿಸಬೇಕು ಎಂದು ತೀರ್ಪಿನಲ್ಲಿ ತಿಳಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕೇಪು ಗ್ರಾಮದ ನೀರ್ಕಜೆಯ ನಿತಿನ್ (27) ಎಂಬಾತ 2014 ರಲ್ಲಿ ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ 17 ವರ್ಷದ ದಲಿತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದನು. ಆರೋಪಿ ನಿತಿನ್, ಖಾಸಗಿ ಬಸ್ಸಿನ ಕಂಡಕ್ಟರ್ ಆಗಿದ್ದ. ಈತನ ಬಸ್ನಲ್ಲಿ ಬಾಲಕಿ ಕಾಲೇಜಿಗೆ ಹೋಗಿ ಬರುತ್ತಿದ್ದಳು. ಆರೋಪಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯನ್ನು ಪರಿಚಯ ಮಾಡಿಕೊಂಡಿದ್ದನು.
2014 ಜುಲೈ 24ರಂದು ಪುತ್ತೂರಿಗೆ ಬರುವಂತೆ ಹೇಳಿ ನಿನ್ನನ್ನೇ ಮದುವೆಯಾಗುವುದಾಗಿ ನಂಬಿಸಿ ರಾತ್ರಿ ವೇಳೆ ಸ್ಲೀಪರ್ ಬಸ್ನಲ್ಲಿ ಬೆಂಗಳೂರಿಗೆ ಕರೆದೊಯ್ದಿದ್ದ. ಬಸ್ನಲ್ಲಿ ಪ್ರಯಾಣಿಸುವ ವೇಳೆ ನಿತಿನ್ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ. ಬೆಂಗಳೂರಿಗೆ ತೆರಳಿದ ಬಳಿಕ ಅಲ್ಲಿ ಎರಡು ದಿನ ಸುತ್ತಾಡಿಸಿದ್ದ.
ಈ ನಡುವೆ ಕಾಲೇಜಿಗೆಂದು ಹೋಗಿದ್ದ ಮಗಳು ವಾಪಸ್ ಬರದಿರುವ ಬಗ್ಗೆ ಬಾಲಕಿಯ ಪೋಷಕರು ವಿಟ್ಲ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು. ತನಿಖೆ ನಡೆಸಿದ ಪೊಲೀಸರಿಗೆ ಬಾಲಕಿಯನ್ನು ನಿತಿನ್ ಬೆಂಗಳೂರಿಗೆ ಕರೆದುಕೊಂಡು ಹೋದ ಸುಳಿವು ಲಭಿಸಿದ ಹಿನ್ನೆಲೆಯಲ್ಲಿ ಪೊಲೀಸರು ಬೆಂಗಳೂರಿಗೆ ತೆರಳಿ ಇವರನ್ನು ಪತ್ತೆ ಹಚ್ಚಿ ಊರಿಗೆ ಕರೆ ತಂದಿದ್ದರು. ಬಾಲಕಿಯನ್ನು ಬೆಂಗಳೂರಿಗೆ ಕರೆದೊಯ್ದು, ಆಕೆಯ ಮೇಲೆ ಅತ್ಯಾಚಾರ ಎಸಗಿದ ನಿತಿನ್ ವಿರುದ್ಧ ಪ್ರಕರಣ ದಾಖಲಿಸಿದ್ದ ವಿಟ್ಲ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು. ಪ್ರಕರಣದ ತನಿಖೆ ನಡೆಸಿದ ಬಂಟ್ವಾಳ ಡಿವೈಎಸ್ಪಿ ರಾಹುಲ್ ಕುಮಾರ್, ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ಒಂದನೇ ತ್ವರಿತ ಗತಿ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶೆ ಸಾವಿತ್ರಿ ವಿ. ಭಟ್ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಶಿಕ್ಷೆ ಪ್ರಮಾಣ ಪ್ರಕಟಿಸಿದರು. ಪ್ರಕರಣದಲ್ಲಿ ಬಾಲಕಿ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಸಿ. ವೆಂಕಟರಮಣ ಸ್ವಾಮಿ ವಾದಿಸಿದ್ದರು.
Sullia Bus conductor rapes minor girl court sentences seven year jail term
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
07-09-26 01:22 pm
HK News Staffer
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
07-09-26 08:56 pm
HK News Staffer
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm