ಬ್ರೇಕಿಂಗ್ ನ್ಯೂಸ್
28-11-21 04:34 pm Mangaluru Correspondent ಕರಾವಳಿ
ಮಂಗಳೂರು: 2014ರಲ್ಲಿ ನಡೆದ ಅಪ್ರಾಪ್ತ ದಲಿತ ಬಾಲಕಿಯ ಕಿಡ್ನಾಪ್ ಮತ್ತು ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗೆ ಏಳು ವರ್ಷಗಳ ಕಠಿಣ ಸಜೆ ಮತ್ತು 15 ಸಾವಿರ ರೂ. ದಂಡ ವಿಧಿಸಿ ಮಂಗಳೂರಿನ ಒಂದನೇ ತ್ವರಿತ ಗತಿ ಸೆಷನ್ಸ್ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.
ಅಪ್ರಾಪ್ತ ಬಾಲಕಿಯ ಅಪಹರಣ ಆರೋಪಕ್ಕೆ 3 ವರ್ಷ ಕಠಿಣ ಶಿಕ್ಷೆ ಮತ್ತು 5000 ರೂ. ದಂಡ ಹಾಗೂ ದಂಡ ತೆರಲು ತಪ್ಪಿದರೆ 15 ದಿನಗಳ ಕಠಿಣ ಶಿಕ್ಷೆ, ಅತ್ಯಾಚಾರ ಆರೋಪಕ್ಕೆ 7 ವರ್ಷ ಕಠಿಣ ಸಜೆ ಮತ್ತು 10 ಸಾವಿರ ರೂ. ದಂಡ ಹಾಗೂ ದಂಡ ಪಾವತಿಸಲು ತಪ್ಪಿದರೆ ಎರಡು ತಿಂಗಳ ಕಠಿಣ ಸಜೆಯನ್ನು ಅನುಭವಿಸಬೇಕು ಎಂದು ತೀರ್ಪಿನಲ್ಲಿ ತಿಳಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕೇಪು ಗ್ರಾಮದ ನೀರ್ಕಜೆಯ ನಿತಿನ್ (27) ಎಂಬಾತ 2014 ರಲ್ಲಿ ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ 17 ವರ್ಷದ ದಲಿತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದನು. ಆರೋಪಿ ನಿತಿನ್, ಖಾಸಗಿ ಬಸ್ಸಿನ ಕಂಡಕ್ಟರ್ ಆಗಿದ್ದ. ಈತನ ಬಸ್ನಲ್ಲಿ ಬಾಲಕಿ ಕಾಲೇಜಿಗೆ ಹೋಗಿ ಬರುತ್ತಿದ್ದಳು. ಆರೋಪಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯನ್ನು ಪರಿಚಯ ಮಾಡಿಕೊಂಡಿದ್ದನು.
2014 ಜುಲೈ 24ರಂದು ಪುತ್ತೂರಿಗೆ ಬರುವಂತೆ ಹೇಳಿ ನಿನ್ನನ್ನೇ ಮದುವೆಯಾಗುವುದಾಗಿ ನಂಬಿಸಿ ರಾತ್ರಿ ವೇಳೆ ಸ್ಲೀಪರ್ ಬಸ್ನಲ್ಲಿ ಬೆಂಗಳೂರಿಗೆ ಕರೆದೊಯ್ದಿದ್ದ. ಬಸ್ನಲ್ಲಿ ಪ್ರಯಾಣಿಸುವ ವೇಳೆ ನಿತಿನ್ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ. ಬೆಂಗಳೂರಿಗೆ ತೆರಳಿದ ಬಳಿಕ ಅಲ್ಲಿ ಎರಡು ದಿನ ಸುತ್ತಾಡಿಸಿದ್ದ.
ಈ ನಡುವೆ ಕಾಲೇಜಿಗೆಂದು ಹೋಗಿದ್ದ ಮಗಳು ವಾಪಸ್ ಬರದಿರುವ ಬಗ್ಗೆ ಬಾಲಕಿಯ ಪೋಷಕರು ವಿಟ್ಲ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು. ತನಿಖೆ ನಡೆಸಿದ ಪೊಲೀಸರಿಗೆ ಬಾಲಕಿಯನ್ನು ನಿತಿನ್ ಬೆಂಗಳೂರಿಗೆ ಕರೆದುಕೊಂಡು ಹೋದ ಸುಳಿವು ಲಭಿಸಿದ ಹಿನ್ನೆಲೆಯಲ್ಲಿ ಪೊಲೀಸರು ಬೆಂಗಳೂರಿಗೆ ತೆರಳಿ ಇವರನ್ನು ಪತ್ತೆ ಹಚ್ಚಿ ಊರಿಗೆ ಕರೆ ತಂದಿದ್ದರು. ಬಾಲಕಿಯನ್ನು ಬೆಂಗಳೂರಿಗೆ ಕರೆದೊಯ್ದು, ಆಕೆಯ ಮೇಲೆ ಅತ್ಯಾಚಾರ ಎಸಗಿದ ನಿತಿನ್ ವಿರುದ್ಧ ಪ್ರಕರಣ ದಾಖಲಿಸಿದ್ದ ವಿಟ್ಲ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು. ಪ್ರಕರಣದ ತನಿಖೆ ನಡೆಸಿದ ಬಂಟ್ವಾಳ ಡಿವೈಎಸ್ಪಿ ರಾಹುಲ್ ಕುಮಾರ್, ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ಒಂದನೇ ತ್ವರಿತ ಗತಿ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶೆ ಸಾವಿತ್ರಿ ವಿ. ಭಟ್ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಶಿಕ್ಷೆ ಪ್ರಮಾಣ ಪ್ರಕಟಿಸಿದರು. ಪ್ರಕರಣದಲ್ಲಿ ಬಾಲಕಿ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಸಿ. ವೆಂಕಟರಮಣ ಸ್ವಾಮಿ ವಾದಿಸಿದ್ದರು.
Sullia Bus conductor rapes minor girl court sentences seven year jail term
15-10-25 03:35 pm
Bangalore Correspondent
ರಘು ದೀಕ್ಷಿತ್ ಜೀವನದಲ್ಲಿ ಎರಡನೇ ಇನ್ನಿಂಗ್ಸ್ ; 50ರ...
15-10-25 03:32 pm
ಕಾರ್ಕಳ ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ರೈಲಿನಡಿಗೆ...
14-10-25 11:24 am
CM Siddaramaiah, DK Shivakumar:ಶಾಸಕರ ಬೆಂಬಲವಿಲ...
13-10-25 10:09 pm
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
15-10-25 12:09 pm
HK News Desk
ಟ್ರಂಪ್ ಒತ್ತಡ ನಡುವೆಯೇ ಭಾರತದಲ್ಲಿ ಗೂಗಲ್ ಸಂಸ್ಥೆ ಭ...
14-10-25 10:33 pm
ಹಮಾಸ್ - ಇಸ್ರೇಲ್ ಶಾಂತಿ ಒಪ್ಪಂದ ; ಎರಡು ವರ್ಷಗಳ ಅಕ...
14-10-25 11:22 am
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
Ex-IAS Officer Kannan Gopinathan, Congress: ಜ...
13-10-25 10:37 pm
15-10-25 05:36 pm
Mangalore Correspondent
ಬೈಂದೂರಿನಲ್ಲಿ ಮೂವರು ವಿದ್ಯಾರ್ಥಿಗಳು ಸಮುದ್ರಪಾಲು ;...
15-10-25 12:12 pm
ಮೈಸೂರು, ಬೆಂಗಳೂರು, ಶಿವಮೊಗ್ಗ ಕಂಬಳಕ್ಕೆ ಹೈಕೋರ್ಟ್...
14-10-25 10:36 pm
ಸುಳ್ಯ ಮೂಲದ ಯುವಕ ಮಾರಿಷಸ್ ನಲ್ಲಿ ಜಲಪಾತಕ್ಕೆ ಬಿದ್ದ...
14-10-25 10:13 pm
ರಸ್ತೆಯಲ್ಲೇ ತ್ಯಾಜ್ಯ ಸುರಿಸುವ ಮೀನಿನ ಲಾರಿಗಳಿಗೆ ಮತ...
14-10-25 09:12 pm
15-10-25 04:51 pm
Bangalore Correspondent
ನಿಡ್ಡೋಡಿ ಮನೆಯಲ್ಲಿ ಗ್ಯಾಂಗ್ ರೇಪ್ ಸಂಚು ; ನಾಲ್ವರು...
15-10-25 12:00 pm
ಅಮಲಿಗಾಗಿ ಯುವಕರಿಗೆ ಕಫ್ ಸಿರಪ್ ಮಾರಾಟ ದಂಧೆ ; ದಾವಣ...
14-10-25 04:44 pm
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm