ಬ್ರೇಕಿಂಗ್ ನ್ಯೂಸ್
13-09-20 06:52 pm Mangalore Reporter ಕರಾವಳಿ
ಮಂಗಳೂರು, ಸೆಪ್ಟೆಂಬರ್ 13: ಮುಸ್ಲಿಂ ಸಮುದಾಯದ ನ್ಯಾಯೋಚಿತ ಬೇಡಿಕೆ ಮತ್ತು ಅಭಿವೃದ್ಧಿಗೆ ಪೂರಕವಾಗಿ ಕೆಲಸ ಮಾಡಲಿದ್ದೇನೆ. ಸಮುದಾಯದ ಅಭಿವೃದ್ಧಿಗೆ ನಮ್ಮ ಪಕ್ಷವೂ ಬದ್ಧವಾಗಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಹೇಳಿದರು.
ಮಂಗಳೂರಿನ ಉಳ್ಳಾಲ ದರ್ಗಾದಲ್ಲಿ ಅವರು ಝಿಯಾರತ್ ನಡೆಸಿದ ಬಳಿಕ ದರ್ಗಾ ಆಡಳಿತ ಸಮಿತಿಯ ಕಚೇರಿಯಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಾರ್ಯಾಧ್ಯಕ್ಷರಾದ ಬಳಿಕ ಮೊದಲ ಬಾರಿಗೆ ಉಳ್ಳಾಲ ದರ್ಗಾ ಭೇಟಿ ನೀಡಿದ ಸಲೀಂ ಅಹ್ಮದ್ ಅವರನ್ನು ದರ್ಗಾ ಸಮಿತಿಯ ವತಿಯಿಂದ ಉಳ್ಳಾಲ ಅಧ್ಯಕ್ಷ ಹಾಜಿ ಅಬ್ದುಲ್ ರಶೀದ್ ಸನ್ಮಾನಿಸಿ, ಸಮುದಾಯದ ಹಿತಕ್ಕಾಗಿ ಶ್ರಮಿಸುವಂತೆ ವಿನಂತಿಸಿದರು.
ಸಲೀಂ ಅಹ್ಮದ್ ಜೊತೆಯಲ್ಲಿ ಆಗಮಿಸಿದ್ದ ವಿಧಾನ ಪರಿಷತ್ತಿನ ಮುಖ್ಯ ಸಚೇತಕ ನಾರಾಯಣ ಸ್ವಾಮಿಯವರನ್ನೂ ಉಳ್ಳಾಲ ದರ್ಗಾ ಅಧ್ಯಕ್ಷ ಹಾಜಿ ಅಬ್ದುಲ್ ರಶೀದ್ ಈ ಸಂದರ್ಭದಲ್ಲಿ ಸನ್ಮಾನಿಸಿದರು. ಮಾಜಿ ಸಚಿವ, ಶಾಸಕ ಯು.ಟಿ.ಖಾದರ್, ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್, ಕೆಪಿಸಿಸಿ ಕಾರ್ಯದರ್ಶಿ ಟಿ.ಎಂ.ಸಹೀದ್, ಕಾಂಗ್ರೆಸ್ ನಾಯಕ ಬಲರಾಜ್ ಜೊತೆಗಿದ್ದರು.
ಜಿಲ್ಲಾ ಕಾಂಗ್ರೆಸ್ ವಕ್ತಾರ ಹಾಗೂ ದರ್ಗಾ ಸಮಿತಿಯ ಫಾರೂಕ್ ಉಳ್ಳಾಲ್ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿ, ಸಲೀಂ ಅಹ್ಮದ್ ಅವರು ಕಾಂಗ್ರೆಸ್ ಪಕ್ಷದ ಉನ್ನತ ಹುದ್ದೆ ಕಾರ್ಯಾಧ್ಯಕ್ಷರಾಗಿ ನೇಮಕವಾಗುವ ಮೂಲಕ ಮುಸ್ಲಿಂ ಸಮುದಾಯದ ಬಹುದಿನದ ಬೇಡಿಕೆ ಈಡೇರಿಕೆದಂತಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಉಳ್ಳಾಲ ದರ್ಗಾ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ತ್ವಾಹ ಹಾಜಿ, ಚಾರಿಟೇಬಲ್ ಟ್ರಸ್ಟ್ ಉಪಾಧ್ಯಕ್ಷರಾದ ಮುಸ್ತಫ ಅಬ್ದುಲ್ಲಾ, ಹಾಜಿ, ಇಬ್ರಾಹಿಂ ಕಕ್ಕೆತೋಟ, ಕಾರ್ಯದರ್ಶಿ ಹಾಜಿ ಎ.ಕೆ.ಮೊಹಿಯ್ಯುದ್ದೀನ್, ಅರಬಿಕ್ ಟ್ರಸ್ಟ್ ಕಾರ್ಯದರ್ಶಿ ಆಸಿಫ್ ಅಬ್ದುಲ್ಲಾ, ಕಾಂಗ್ರೆಸ್ ಮುಖಂಡರುಗಳಾದ ಎನ್.ಎಸ್.ಕರೀಂ, ಫಾರೂಕ್ ಫರಂಗಿಪೇಟೆ, ದರ್ಗಾ ಸಮಿತಿ ಸದಸ್ಯರಾದ ಹಸನಬ್ಬ ಕಡಪರ, ಹಮ್ಮಬ್ಬ ಕೋಟೇಪುರ, ಕಾಸಿಂ ಕೋಡಿ, ನಝೀರ್ ಸುಂದರ ಬಾಗ್, ಇಬ್ರಾಹಿಂ ಹಾಜಿ ಉಳ್ಳಾಲ ಬೈಲ್, ಅರೇಬಿಕ್ ಟ್ರಸ್ಟ್ ಸದಸ್ಯ ಯೂಸುಫ್ ಉಳ್ಳಾಲ್, ಹನೀಫ್ ಕೋಡಿ ಉಪಸ್ಥಿತರಿದ್ದರು.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 07:04 pm
HK News Desk
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
06-02-26 03:09 pm
Mangalore Correspondent
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
ನಂತೂರಿನಿಂದ ಬೈಕಂಪಾಡಿಗೆ ಫ್ಲೈ ಓವರ್ ಪ್ರಸ್ತಾಪ ; ಮಾ...
05-02-26 11:03 pm
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm