ಮುಸ್ಲಿಂ ಸಮುದಾಯದ ಬೇಡಿಕೆಗಳಿಗೆ ಸ್ಪಂದಿಸಲು ಬದ್ಧನಿದ್ದೇನೆ ; ಸಲೀಂ ಅಹ್ಮದ್ 

13-09-20 06:52 pm       Mangalore Reporter   ಕರಾವಳಿ

ಮುಸ್ಲಿಂ ಸಮುದಾಯದ ನ್ಯಾಯೋಚಿತ ಬೇಡಿಕೆ ಮತ್ತು ಅಭಿವೃದ್ಧಿಗೆ ಪೂರಕವಾಗಿ ಕೆಲಸ ಮಾಡಲಿದ್ದೇನೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಹೇಳಿದರು.

ಮಂಗಳೂರು, ಸೆಪ್ಟೆಂಬರ್ 13: ಮುಸ್ಲಿಂ ಸಮುದಾಯದ ನ್ಯಾಯೋಚಿತ ಬೇಡಿಕೆ ಮತ್ತು ಅಭಿವೃದ್ಧಿಗೆ ಪೂರಕವಾಗಿ ಕೆಲಸ ಮಾಡಲಿದ್ದೇನೆ. ಸಮುದಾಯದ ಅಭಿವೃದ್ಧಿಗೆ ನಮ್ಮ ಪಕ್ಷವೂ ಬದ್ಧವಾಗಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಹೇಳಿದರು.

ಮಂಗಳೂರಿನ ಉಳ್ಳಾಲ ದರ್ಗಾದಲ್ಲಿ ಅವರು ಝಿಯಾರತ್ ನಡೆಸಿದ ಬಳಿಕ ದರ್ಗಾ ಆಡಳಿತ ಸಮಿತಿಯ ಕಚೇರಿಯಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು. 

ಕರ್ನಾಟಕ  ಪ್ರದೇಶ ಕಾಂಗ್ರೆಸ್ ಕಾರ್ಯಾಧ್ಯಕ್ಷರಾದ ಬಳಿಕ ಮೊದಲ ಬಾರಿಗೆ ಉಳ್ಳಾಲ ದರ್ಗಾ ಭೇಟಿ ನೀಡಿದ ಸಲೀಂ ಅಹ್ಮದ್ ಅವರನ್ನು ದರ್ಗಾ ಸಮಿತಿಯ ವತಿಯಿಂದ  ಉಳ್ಳಾಲ ಅಧ್ಯಕ್ಷ ಹಾಜಿ ಅಬ್ದುಲ್ ರಶೀದ್ ಸನ್ಮಾನಿಸಿ, ಸಮುದಾಯದ ಹಿತಕ್ಕಾಗಿ ಶ್ರಮಿಸುವಂತೆ ವಿನಂತಿಸಿದರು.

ಸಲೀಂ ಅಹ್ಮದ್ ಜೊತೆಯಲ್ಲಿ ಆಗಮಿಸಿದ್ದ ವಿಧಾನ ಪರಿಷತ್ತಿನ  ಮುಖ್ಯ ಸಚೇತಕ ನಾರಾಯಣ ಸ್ವಾಮಿಯವರನ್ನೂ  ಉಳ್ಳಾಲ ದರ್ಗಾ ಅಧ್ಯಕ್ಷ ಹಾಜಿ ಅಬ್ದುಲ್ ರಶೀದ್ ಈ ಸಂದರ್ಭದಲ್ಲಿ ಸನ್ಮಾನಿಸಿದರು. ಮಾಜಿ ಸಚಿವ, ಶಾಸಕ ಯು.ಟಿ.ಖಾದರ್, ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್, ಕೆಪಿಸಿಸಿ ಕಾರ್ಯದರ್ಶಿ ಟಿ.ಎಂ.ಸಹೀದ್, ಕಾಂಗ್ರೆಸ್ ನಾಯಕ ಬಲರಾಜ್ ಜೊತೆಗಿದ್ದರು. 

ಜಿಲ್ಲಾ ಕಾಂಗ್ರೆಸ್ ವಕ್ತಾರ ಹಾಗೂ  ದರ್ಗಾ ಸಮಿತಿಯ ಫಾರೂಕ್ ಉಳ್ಳಾಲ್ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿ, ಸಲೀಂ ಅಹ್ಮದ್ ಅವರು ಕಾಂಗ್ರೆಸ್ ಪಕ್ಷದ ಉನ್ನತ ಹುದ್ದೆ ಕಾರ್ಯಾಧ್ಯಕ್ಷರಾಗಿ ನೇಮಕವಾಗುವ ಮೂಲಕ ಮುಸ್ಲಿಂ ಸಮುದಾಯದ ಬಹುದಿನದ ಬೇಡಿಕೆ ಈಡೇರಿಕೆದಂತಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಉಳ್ಳಾಲ ದರ್ಗಾ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ತ್ವಾಹ ಹಾಜಿ, ಚಾರಿಟೇಬಲ್ ಟ್ರಸ್ಟ್ ಉಪಾಧ್ಯಕ್ಷರಾದ  ಮುಸ್ತಫ ಅಬ್ದುಲ್ಲಾ, ಹಾಜಿ, ಇಬ್ರಾಹಿಂ ಕಕ್ಕೆತೋಟ, ಕಾರ್ಯದರ್ಶಿ ಹಾಜಿ ಎ.ಕೆ.ಮೊಹಿಯ್ಯುದ್ದೀನ್, ಅರಬಿಕ್ ಟ್ರಸ್ಟ್ ಕಾರ್ಯದರ್ಶಿ ಆಸಿಫ್ ಅಬ್ದುಲ್ಲಾ, ಕಾಂಗ್ರೆಸ್ ಮುಖಂಡರುಗಳಾದ ಎನ್.ಎಸ್.ಕರೀಂ, ಫಾರೂಕ್ ಫರಂಗಿಪೇಟೆ, ದರ್ಗಾ ಸಮಿತಿ ಸದಸ್ಯರಾದ ಹಸನಬ್ಬ ಕಡಪರ, ಹಮ್ಮಬ್ಬ ಕೋಟೇಪುರ, ಕಾಸಿಂ ಕೋಡಿ, ನಝೀರ್ ಸುಂದರ ಬಾಗ್, ಇಬ್ರಾಹಿಂ ಹಾಜಿ ಉಳ್ಳಾಲ ಬೈಲ್,  ಅರೇಬಿಕ್ ಟ್ರಸ್ಟ್ ಸದಸ್ಯ ಯೂಸುಫ್ ಉಳ್ಳಾಲ್, ಹನೀಫ್ ಕೋಡಿ ಉಪಸ್ಥಿತರಿದ್ದರು.