ಬ್ರೇಕಿಂಗ್ ನ್ಯೂಸ್
13-09-20 06:52 pm Mangalore Reporter ಕರಾವಳಿ
ಮಂಗಳೂರು, ಸೆಪ್ಟೆಂಬರ್ 13: ಮುಸ್ಲಿಂ ಸಮುದಾಯದ ನ್ಯಾಯೋಚಿತ ಬೇಡಿಕೆ ಮತ್ತು ಅಭಿವೃದ್ಧಿಗೆ ಪೂರಕವಾಗಿ ಕೆಲಸ ಮಾಡಲಿದ್ದೇನೆ. ಸಮುದಾಯದ ಅಭಿವೃದ್ಧಿಗೆ ನಮ್ಮ ಪಕ್ಷವೂ ಬದ್ಧವಾಗಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಹೇಳಿದರು.
ಮಂಗಳೂರಿನ ಉಳ್ಳಾಲ ದರ್ಗಾದಲ್ಲಿ ಅವರು ಝಿಯಾರತ್ ನಡೆಸಿದ ಬಳಿಕ ದರ್ಗಾ ಆಡಳಿತ ಸಮಿತಿಯ ಕಚೇರಿಯಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಾರ್ಯಾಧ್ಯಕ್ಷರಾದ ಬಳಿಕ ಮೊದಲ ಬಾರಿಗೆ ಉಳ್ಳಾಲ ದರ್ಗಾ ಭೇಟಿ ನೀಡಿದ ಸಲೀಂ ಅಹ್ಮದ್ ಅವರನ್ನು ದರ್ಗಾ ಸಮಿತಿಯ ವತಿಯಿಂದ ಉಳ್ಳಾಲ ಅಧ್ಯಕ್ಷ ಹಾಜಿ ಅಬ್ದುಲ್ ರಶೀದ್ ಸನ್ಮಾನಿಸಿ, ಸಮುದಾಯದ ಹಿತಕ್ಕಾಗಿ ಶ್ರಮಿಸುವಂತೆ ವಿನಂತಿಸಿದರು.
ಸಲೀಂ ಅಹ್ಮದ್ ಜೊತೆಯಲ್ಲಿ ಆಗಮಿಸಿದ್ದ ವಿಧಾನ ಪರಿಷತ್ತಿನ ಮುಖ್ಯ ಸಚೇತಕ ನಾರಾಯಣ ಸ್ವಾಮಿಯವರನ್ನೂ ಉಳ್ಳಾಲ ದರ್ಗಾ ಅಧ್ಯಕ್ಷ ಹಾಜಿ ಅಬ್ದುಲ್ ರಶೀದ್ ಈ ಸಂದರ್ಭದಲ್ಲಿ ಸನ್ಮಾನಿಸಿದರು. ಮಾಜಿ ಸಚಿವ, ಶಾಸಕ ಯು.ಟಿ.ಖಾದರ್, ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್, ಕೆಪಿಸಿಸಿ ಕಾರ್ಯದರ್ಶಿ ಟಿ.ಎಂ.ಸಹೀದ್, ಕಾಂಗ್ರೆಸ್ ನಾಯಕ ಬಲರಾಜ್ ಜೊತೆಗಿದ್ದರು.
ಜಿಲ್ಲಾ ಕಾಂಗ್ರೆಸ್ ವಕ್ತಾರ ಹಾಗೂ ದರ್ಗಾ ಸಮಿತಿಯ ಫಾರೂಕ್ ಉಳ್ಳಾಲ್ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿ, ಸಲೀಂ ಅಹ್ಮದ್ ಅವರು ಕಾಂಗ್ರೆಸ್ ಪಕ್ಷದ ಉನ್ನತ ಹುದ್ದೆ ಕಾರ್ಯಾಧ್ಯಕ್ಷರಾಗಿ ನೇಮಕವಾಗುವ ಮೂಲಕ ಮುಸ್ಲಿಂ ಸಮುದಾಯದ ಬಹುದಿನದ ಬೇಡಿಕೆ ಈಡೇರಿಕೆದಂತಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಉಳ್ಳಾಲ ದರ್ಗಾ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ತ್ವಾಹ ಹಾಜಿ, ಚಾರಿಟೇಬಲ್ ಟ್ರಸ್ಟ್ ಉಪಾಧ್ಯಕ್ಷರಾದ ಮುಸ್ತಫ ಅಬ್ದುಲ್ಲಾ, ಹಾಜಿ, ಇಬ್ರಾಹಿಂ ಕಕ್ಕೆತೋಟ, ಕಾರ್ಯದರ್ಶಿ ಹಾಜಿ ಎ.ಕೆ.ಮೊಹಿಯ್ಯುದ್ದೀನ್, ಅರಬಿಕ್ ಟ್ರಸ್ಟ್ ಕಾರ್ಯದರ್ಶಿ ಆಸಿಫ್ ಅಬ್ದುಲ್ಲಾ, ಕಾಂಗ್ರೆಸ್ ಮುಖಂಡರುಗಳಾದ ಎನ್.ಎಸ್.ಕರೀಂ, ಫಾರೂಕ್ ಫರಂಗಿಪೇಟೆ, ದರ್ಗಾ ಸಮಿತಿ ಸದಸ್ಯರಾದ ಹಸನಬ್ಬ ಕಡಪರ, ಹಮ್ಮಬ್ಬ ಕೋಟೇಪುರ, ಕಾಸಿಂ ಕೋಡಿ, ನಝೀರ್ ಸುಂದರ ಬಾಗ್, ಇಬ್ರಾಹಿಂ ಹಾಜಿ ಉಳ್ಳಾಲ ಬೈಲ್, ಅರೇಬಿಕ್ ಟ್ರಸ್ಟ್ ಸದಸ್ಯ ಯೂಸುಫ್ ಉಳ್ಳಾಲ್, ಹನೀಫ್ ಕೋಡಿ ಉಪಸ್ಥಿತರಿದ್ದರು.
04-04-26 07:33 pm
HK News Staffer
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am