ಬ್ರೇಕಿಂಗ್ ನ್ಯೂಸ್
05-12-21 11:15 pm HK Desk news ಕರಾವಳಿ
ಮಂಗಳೂರು, ಡಿ.5: ಕೇರಳದ ಕಣ್ಣೂರು ವಿಮಾನ ನಿಲ್ದಾಣದಿಂದ ದುಬೈನ ಶಾರ್ಜಾಕ್ಕೆ ಹೊರಟಿದ್ದ ಕುಟುಂಬದ ಮಹಿಳೆಗೆ ಹೃದಯಾಘಾತ ಆಗಿದ್ದು ಏರ್ ಇಂಡಿಯಾ ವಿಮಾನವನ್ನು ತುರ್ತಾಗಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಮಾಡಲಾಗಿದೆ.
ಕಣ್ಣೂರಿನಿಂದ ಶಾರ್ಜಾಕ್ಕೆ ಹೊರಟಿದ್ದ ವಿಮಾನದಲ್ಲಿ ಮಹಿಳೆಗೆ ತೊಂದರೆ ಉಂಟಾಗಿದ್ದು ಎದೆ ನೋವು ಮತ್ತು ಉಸಿರಾಟದ ಸಮಸ್ಯೆ ಎದುರಿಸಿದ್ದರು. ಮಹಿಳೆ ಮೂರು ಮಕ್ಕಳ ತಾಯಿಯಾಗಿದ್ದು ಪತಿಯೊಂದಿಗೆ ಶಾರ್ಜಾಕ್ಕೆ ತೆರಳುತ್ತಿದ್ದಾಗ ಡಿ.3 ರಂದು ಘಟನೆ ನಡೆದಿದೆ. ಈ ಬಗ್ಗೆ ಏರ್ಪೋರ್ಟ್ ಆಪರೇಶನ್ ಕಂಟ್ರೋಲ್ ಸೆಂಟ್ರಲ್ ಗೆ ಬೆಳಗ್ಗೆ 9.20 ಕ್ಕೆ ಸಂದೇಶ ಬಂದಿದ್ದು ಮಂಗಳೂರು ವಿಮಾನ ನಿಲ್ದಾಣ ಅಧಿಕಾರಿಗಳು ಅಲರ್ಟ್ ಆಗಿದ್ದಾರೆ.
ವಿಮಾನವನ್ನು ತುರ್ತಾಗಿ ನಿಲ್ದಾಣದಲ್ಲಿ ಇಳಿಸಿ, ಮೂರು ಮಕ್ಕಳು ಮತ್ತು ಮಹಿಳೆ ಹಾಗೂ ಪತಿಯನ್ನು ಅಧಿಕಾರಿಗಳು ನೇರವಾಗಿ ಎಜೆ ಆಸ್ಪತ್ರೆಗೆ ಕರೆತಂದಿದ್ದಾರೆ. ಬೆಳಗ್ಗೆ ಹತ್ತು ಗಂಟೆಗೆ ವಿಮಾನ ಲ್ಯಾಂಡ್ ಆಗಿದ್ದು 17 ನಿಮಿಷದಲ್ಲಿ ಎಜೆ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಏರ್ಪೋರ್ಟ್ ಅಧಿಕಾರಿಗಳು, ಆರೋಗ್ಯ ಸಿಬಂದಿ ಕೂಡ ಮಹಿಳೆ ಜೊತೆಗೆ ಬಂದಿದ್ದರು.
ವೈದ್ಯರು ಬಳಿಕ ಚಿಕಿತ್ಸೆ ನೀಡಿದ್ದು ಮಹಿಳೆಯ ಸ್ಥಿತಿ ಸ್ಥಿರವಾಗಿದ್ದು ಯಾವುದೇ ತೊಂದರೆ ಇಲ್ಲ ಎಂದು ಹೇಳಿದ್ದಾರೆ. ಅದರಂತೆ, ಮಹಿಳೆ ಮತ್ತು ಕುಟುಂಬವನ್ನು ಅದೇ ದಿನ ರಾತ್ರಿ 11 ಗಂಟೆಗೆ ಶಾರ್ಜಾಕ್ಕೆ ಕರೆದೊಯ್ಯಲು ಏರ್ಪೋರ್ಟ್ ಅಧಿಕಾರಿಗಳು ವ್ಯವಸ್ಥೆ ಮಾಡಿದ್ದಾರೆ.
Woman gets heart attack in Dubai Sharjah flight emergency landing made in Mangalore. The flight was from Kannur and made emergency landing in Mangalore International Airport.
11-06-26 01:53 pm
HK News Staffer
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 04:21 pm
HK News Staffer
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
11-06-26 11:43 am
HK News Staffer
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm