ಬ್ರೇಕಿಂಗ್ ನ್ಯೂಸ್
06-12-21 12:10 pm HK Desk news ಕರಾವಳಿ
Photo credits : Headline Karnataka
ಉಳ್ಳಾಲ, ಡಿ.6: ಪಜೀರು ಗ್ರಾಮದ ಕಂಬಳಪದವಿನಲ್ಲಿರುವ ಬ್ಲೂ ಲೈನ್ ಫಿಶ್ ಮಿಲ್ ಫ್ಯಾಕ್ಟರಿಯಲ್ಲಿ ಜಾರ್ಖಂಡ್ ಮೂಲದ ವಲಸೆ ಕಾರ್ಮಿಕ ನಿಗೂಢ ಸಾವನ್ನಪ್ಪಿದ್ದು ಮೃತದೇಹವನ್ನ ಕಂಪನಿಯ ಆಡಳಿತ ವಿಮಾನದಲ್ಲಿ ತರಾತುರಿಯಲ್ಲಿ ಸಾಗಿಸಿದೆ.
ಝಾರ್ಖಂಡ್ ರಾಜ್ಯದ ಜಸ್ಪುರ್ ಜಿಲ್ಲೆಯ ನಿವಾಸಿ ಜುಗನ್ ರಾಮ್ (19) ಮೃತ ವಲಸೆ ಕಾರ್ಮಿಕ. ಮೃತ ಜುಗನ್ ರಾಮ್ ಮೂರು ತಿಂಗಳುಗಳಿಂದ ಕಂಬಳಪದವಿನ ಬ್ಲೂ ಲೈನ್ ಫ್ಯಾಕ್ಟರಿಯಲ್ಲಿ ಕೆಲಸಕ್ಕಿದ್ದನೆನ್ನಲಾಗಿದೆ. ಕಳೆದ ನವೆಂಬರ್ 30 ರಂದು ಜುಗನ್ ರಾಮ್ ಫ್ಯಾಕ್ಟರಿ ಒಳಗೆ ಸರಕು ಗೋಣಿ ಚೀಲ ಎತ್ತಿ ಸಾಗಿಸುತ್ತಿದ್ದ ವೇಳೆ ಜಾರಿ ಬಿದ್ದು ತಲೆಯ ಹಿಂಭಾಗಕ್ಕೆ ಏಟು ತಗಲಿ ಗಾಯಗೊಂಡಿದ್ದನೆನ್ನಲಾಗಿದೆ. ಗಾಯಾಳುವನ್ನ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು ಜುಗನ್ ರಾಮ್ ಡಿಸೆಂಬರ್ 3 ರ ಶುಕ್ರವಾರ ಮಧ್ಯಾಹ್ನ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಕೊಣಾಜೆ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಅಸಹಜ ( ಸೆಕ್ಷನ್ 174 ಸಿ) ಸಾವು ಪ್ರಕರಣ ದಾಖಲಾಗಿದ್ದು ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.

ಬ್ಲೂ ಲೈನ್ ಕಂಪನಿಯು ಕಾರ್ಮಿಕನ ಮೃತದೇಹವನ್ನ ತರಾತುರಿಯಲ್ಲಿ ವಿಮಾನದ ಮೂಲಕ ಜಾರ್ಖಂಡ್ ಗೆ ಆತನ ಊರಿಗೆ ರವಾನಿಸುವ ಕೆಲಸ ಮಾಡಿದೆ. ವಲಸೆ ಕಾರ್ಮಿಕ ಜುಗನ್ ರಾಮ್ ಸಾವಿನ ಬಗ್ಗೆ ಹಲವು ಅನುಮಾನಗಳು ಮೂಡಿವೆ. ಕಂಬಳ ಪದವಿನಲ್ಲಿ ರಸ್ತೆಯ ಇಕ್ಕೆಲಗಳಲ್ಲಿ ಬ್ಲೂ ಲೈನ್ ಕಂಪನಿಯ ಎರಡು ಫಿಶ್ ಮಿಲ್ ಫ್ಯಾಕ್ಟರಿಗಳು ಕಾರ್ಯಾಚರಿಸುತ್ತಿವೆ. ಫ್ಯಾಕ್ಟರಿ ಒಳಗೆ ಬಹುತೇಕ ಹೊರ ರಾಜ್ಯದ ವಲಸೆ ಕಾರ್ಮಿಕರೇ ಕೆಲಸದಲ್ಲಿದ್ದಾರೆ. ಕಾರ್ಮಿಕರಿಗೆ ಈ ಫ್ಯಾಕ್ಟರಿಯಲ್ಲಿ ಸರಿಯಾದ ಸುರಕ್ಷತಾ ವ್ಯವಸ್ಥೆಗಳಿಲ್ಲವೆಂದು ಹೇಳಲಾಗುತ್ತಿದೆ. ಸ್ಥಳೀಯರಿಗಾಗಲಿ, ಮಾಧ್ಯಮ ಮಂದಿಗಳಾಗಲಿ ಈ ಫ್ಯಾಕ್ಟರಿ ಒಳಗಡೆ ಪ್ರವೇಶ ಕಷ್ಟ ಸಾಧ್ಯ. ಹಾಗಾಗಿ ಕಾರ್ಮಿಕ ಜುಗನ್ ರಾಮ್ ಜಾರಿ ಬಿದ್ದು ಸತ್ತನೇ ಅಥವಾ ಇನ್ನಾವುದೋ ಕಾರಣದಿಂದ ಸಾವು ಆಗಿದೆಯೇ ಎಂಬ ಬಗ್ಗೆ ಸಂಶಯವಿದ್ದು ವಲಸೆ ಕಾರ್ಮಿಕನ ಸಾವಿಗೆ ನ್ಯಾಯ ಸಿಗಬೇಕಿದೆ.

ಪರಿಸರದಲ್ಲಿ ದುರ್ನಾತ ಹಬ್ಬಿಸಿರುವ ಫ್ಯಾಕ್ಟರಿ
ಪಜೀರು ಗ್ರಾಮದ ಕಂಬಳ ಪದವಿನಲ್ಲಿ ಮೀನಿನ ಉತ್ನನ್ನಗಳನ್ನ ತಯಾರಿಸುವ ಬ್ಲೂ ಲೈನ್ ಫ್ಯಾಕ್ಟರಿಯಿಂದ ನಿತ್ಯವೂ ದುರ್ನಾತ ಬರುತ್ತಿದ್ದು ಪರಿಸರ ನಿವಾಸಿಗಳು ಸಾಕಷ್ಟು ತೊಂದರೆ ಅನುಭವಿಸುವಂತಾಗಿದೆ. ನಿಯಮ ಮೀರಿ ಕಾರ್ಯಾಚರಿಸುತ್ತಿರುವ ಕಂಪನಿ ವಿರುದ್ಧ ಸ್ಥಳೀಯ ಪಜೀರು ಪಂಚಾಯತ್ ಆಡಳಿತ ಕ್ರಮ ಕೈಗೊಂಡಿಲ್ಲವೆಂದು ಕಂಬಳಪದವಿನ ಸ್ಥಳೀಯ ನಿವಾಸಿಯೋರ್ವರು ಹೆಡ್ ಲೈನ್ ಕರ್ನಾಟಕಕ್ಕೆ ತಿಳಿಸಿದ್ದಾರೆ. ಫ್ಯಾಕ್ಟರಿಯಿಂದ ದುರ್ನಾತ ಹೊರ ಬರುತ್ತಿದ್ದು ಈ ಬಗ್ಗೆ ಸ್ಥಳೀಯ ಯಾರೊಬ್ಬರು ಗ್ರಾಮ ಸಭೆಗಳಲ್ಲಿ ಧ್ವನಿ ಎತ್ತುವುದಾಗಲೀ, ಲಿಖಿತ ದೂರುಗಳನ್ನಾಗಲಿ ನೀಡಿಲ್ಲವೆಂದು ಪಜೀರು ಗ್ರಾಮ ಪಂಚಾಯತ್ ಉಪಾಧ್ಯಕ್ಷ ರಫೀಕ್ ಪಜೀರು ಹೇಳಿದ್ದಾರೆ.
Blueline fish mill Jarkand employee dies in suspicious way in Mangalore office, body shifted via flight to home town. A case has been registered at the Konaje Police Station.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
07-09-26 01:22 pm
HK News Staffer
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
07-09-26 08:56 pm
HK News Staffer
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm