ಬ್ರೇಕಿಂಗ್ ನ್ಯೂಸ್
06-12-21 11:08 pm HK Desk news ಕರಾವಳಿ
ಮಂಗಳೂರು, ಡಿ.6: ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಇಂದು ಸ್ವಯಂ ವೈದ್ಯರಾಗಿ ಗಮನ ಸೆಳೆದಿದ್ದಾರೆ. ಬಂಟ್ವಾಳ ಸಜಿಪದಲ್ಲಿ ದಿ. ಕದ್ರಿ ಗೋಪಾಲನಾಥ್ ಹೆಸರಿನಲ್ಲಿ ಕದ್ರಿ ಸಂಗೀತ ಸೌರಭ ಕಾರ್ಯಕ್ರಮ ನಡೆದಿತ್ತು. ಈ ವೇಳೆ, ಕದ್ರಿ ಗೋಪಾಲನಾಥ ಅವರ ಪತ್ನಿ ಸರೋಜಿನಿ ಅಸ್ವಸ್ಥರಾಗಿದ್ದು ಕೂಡಲೇ ಅತಿಥಿಯಾಗಿ ಉಪಸ್ಥಿತರಿದ್ದ ಜಿಲ್ಲಾಧಿಕಾರಿ ಆರೈಕೆ ಮಾಡಿದ್ದಾರೆ.
ವೈದ್ಯಕೀಯ ಓದಿರುವ ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಅವರು ತಕ್ಷಣ ಅವರ ಆರೈಕೆ ಮಾಡಿ ಉಪಚರಿಸಿದ್ದಾರೆ. ಸಕ್ಕರೆ ಲೋ ಆಗಿ ಅವರಿಗೆ ಆರೋಗ್ಯ ತೊಂದರೆ ಉಂಟಾಗಿತ್ತು.

ಸ್ಯಾಕ್ಸೋಫೋನ್ ಚಕ್ರವರ್ತಿ ಡಾ. ಕದ್ರಿ ಗೋಪಾಲನಾಥ್ ಅವರ ಜನುಮದಿನದ ಅಂಗವಾಗಿ ಕದ್ರಿ ಸಂಗೀತ ಸೌರಭ ಏರ್ಪಡಿಸಲಾಗಿತ್ತು. ಕಾರ್ಯಕ್ರಮ ನಡೆಯುತ್ತಿದ್ದಾಗ ವೇದಿಕೆ ಮುಂಭಾಗದಲ್ಲಿ ಕುಳಿತಿದ್ದ ಡಾ. ಕದ್ರಿ ಗೋಪಾಲನಾಥ್ ಅವರ ಪತ್ನಿ ಭಾವುಕರಾಗಿ ಅಸ್ವಸ್ಥರಾಗಿದ್ದಾರೆ. ಈ ಸಂದರ್ಭ ಅಲ್ಲಿದ್ದ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಕ್ಷಣ ಅವರನ್ನು ಪರಿಶೀಲಿಸಿ, ಅವರಿಗೆ ಸಕ್ಕರೆ ನೀರು ಕೊಟ್ಟು ಉಪಚರಿಸಿದರು.
ಕದ್ರಿ ಗೋಪಾಲನಾಥರ ಹೆಸರಿನಲ್ಲಿ ಸಂಗೀತ ಕ್ಷೇತ್ರದಲ್ಲಿ ಸಾಧನೆ ಮಾಡಿದ ಹಿರಿಯ ಕಲಾವಿದರಿಗೆ ಪ್ರಶಸ್ತಿ ನೀಡಲಾಗುತ್ತಿದೆ. ಇಂದಿನ ಕಾರ್ಯಕ್ರಮದಲ್ಲಿ ಮೋರ್ಸಿಂಗ್ ವಿದ್ವಾನ್ ಡಾ.ಎಲ್. ಭೀಮಾಚಾರ್ಯ ಮತ್ತು ಗಾಯಕ ಹುಲ್ಯಾಳ ಮಹದೇವಪ್ಪ ಅವರಿಗೆ ಈ ವರ್ಷದ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ.
Mangalore DC Rajendra Kumar turns doctor gives immediate treatment to woman who collapsed. The video of this has gone viral on social media.
11-02-26 11:02 pm
HK News Desk
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
11-02-26 06:47 pm
HK News Desk
ಹಗಲಿನಲ್ಲಿ ಸಾಫ್ಟ್ವೇರ್ ಇಂಜಿನಿಯರ್, ರಾತ್ರಿ ವೇಳೆ...
11-02-26 04:22 pm
ಮಥುರಾದಲ್ಲಿ ಮೂವರು ಮಕ್ಕಳಿಗೆ ವಿಷವುಣಿಸಿ ದಂಪತಿ ಸಾವ...
10-02-26 07:31 pm
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
12-02-26 11:41 am
Mangalore Correspondent
ಮಂಗಳೂರಿನ ಸ್ವಸ್ತಿಕಾ ಬಿಸಿನೆಸ್ ಸ್ಕೂಲ್ ರಾಜ್ಯದ ಮೊದ...
11-02-26 06:00 pm
ಎಡಪದವು ಬಳಿ ಹೊಸ ಹೆದ್ದಾರಿಗೆ ಅಗೆತ - ಹಳೆ ರಸ್ತೆ ಕು...
11-02-26 03:45 pm
Love Jihad, Mangalore: ಬಿಎಸ್ಸಿ ಕ್ರಿಮಿನಾಲಜಿ ಓದ...
10-02-26 11:03 pm
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
11-02-26 10:54 pm
Udupi Correspondent
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm
ಸಚಿವ ಬೈರತಿ ಸುರೇಶ್ ಕಚೇರಿಯಲ್ಲೇ 300 ಗ್ರಾಂ ಚಿನ್ನಾ...
10-02-26 09:05 pm
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am