ಬ್ರೇಕಿಂಗ್ ನ್ಯೂಸ್
14-09-20 01:16 pm Mangalore Correspondent ಕರಾವಳಿ
ಮಂಗಳೂರು, ಸೆ.14: ಡಾ.ಎಮ್.ವಿ.ಶೆಟ್ಟಿ ಟ್ರಸ್ಟ್ ಕಾಲೇಜುಗಳ ಸ್ಥಾಪಕ ಕಾರ್ಯದರ್ಶಿ ಡಾ.ಎಮ್.ಆರ್.ಶೆಟ್ಟಿ ಇಂದು ನಿಧರಾಗಿದ್ದಾರೆ.
ದಿವಂಗತ ಡಾ. ಎಮ್.ವಿ.ಶೆಟ್ಟಿಯವರ ಪುತ್ರರಾಗಿರುವ ಡಾ. ಎಮ್. ರಾಮಗೋಪಾಲ ಶೆಟ್ಟಿ ಅವರು ಪತ್ನಿ ಪ್ರೊ.ಹಿಮಾ ಊರ್ಮಿಳಾ ಶೆಟ್ಟಿ, ಮಕ್ಕಳಾದ ಡಾ. ದಿವ್ಯಾಂಜಲಿ ಶೆಟ್ಟಿ, ಡಾ. ರೋಹಿಲಾ ಶೆಟ್ಟಿ ಅವರನ್ನು ಅಗಲಿದ್ದಾರೆ.
ಡಾ.ಎಮ್.ವಿ. ಶೆಟ್ಟಿ ಟ್ರಸ್ಟ್ ಮೂಲಕ ರಾಮಗೋಪಾಲ ಶೆಟ್ಟಿಯವರು ಮಂಗಳೂರು ಯುನಿವರ್ಸಿಟಿ ಅಡಿಯಲ್ಲಿ ನರ್ಸಿಂಗ್, ಫಿಸಿಯೋಥೆರಪಿ, ವಾಕ್ ಹಾಗೂ ಶ್ರವಣ, ಮೆಡಿಕಲ್ ಲ್ಯಾಬೋರೇಟರಿ ಟೆಕ್ನಾಲಜಿ ಹಾಗೂ ಸಾಮಾಜಿಕ ಕಾರ್ಯ ಹಾಗೂ ಶಿಕ್ಷಣದಂತಹ ಹಲವು ವೃತ್ತಿಪರ ಕೋರ್ಸ್ಗಳನ್ನು ಆರಂಭಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
ಇವರ ಮಾರ್ಗದರ್ಶನ ಹಾಗೂ ಆಡಳಿತದ ಅಡಿಯಲ್ಲಿ ಟ್ರಸ್ಟ್ ಬೆಂಗಳೂರಿನ ರಾಜೀವ್ ಗಾಂಧಿ ಯುನಿವರ್ಸಿಟಿ ಆಫ್ ಹೆಲ್ತ್ ಸೈನ್ಸಸ್, ಮಂಗಳೂರು ಯುನಿವರ್ಸಿಟಿಯ ಸಂಯೋಜಿತ 15 ವಿವಿಧ ಪದವಿ ಹಾಗೂ ಸ್ನಾತಕೋತ್ತರ ಕೋರ್ಸ್ಗಳನ್ನು 8 ವಿಭಿನ್ನ ವಿಭಾಗಗಳಲ್ಲಿ ಆರಂಭಿಸಿತ್ತು.
ಡಾ.ಶೆಟ್ಟಿಯವರು ಮಂಗಳೂರಿನ ಸಂತ ಅಲೋಶಿಯಸ್ ಹೈಸ್ಕೂಲ್ನಲ್ಲಿ ಆರಂಭಿಕ ಶಿಕ್ಷಣ ಪಡೆದಿದ್ದು, ಮಂಗಳೂರಿನ ಕಸ್ತೂರ್ಬಾ ಮೆಡಿಕಲ್ ಕಾಲೇಜಿನಲ್ಲಿ ತನ್ನ ಪದವಿ ಹಾಗೂ ಸ್ನಾತಕೋತ್ತರ ವೃತ್ತಿಪರ ಶಿಕ್ಷಣವನ್ನು ಪೂರೈಸಿದ್ದರು. ಬಳಿಕ ಅವರು ಉನ್ನತ ಶಿಕ್ಷಣಕ್ಕೆ ಇಂಗ್ಲೆಂಡ್ಗೆ ತೆರಳಿದರು. ಇಂಗ್ಲೆಂಡ್ನಿಂದ ವಾಪಾಸಾದ ಬಳಿಕ ಕೆ.ಎಂ.ಸಿ.ಯಲ್ಲಿ ಸರ್ಜರಿಯ ಸಹಾಯಕ ಪ್ರೊಫೆಸರ್ ಆದರು. 1989ರ ತನಕ ಇಲ್ಲಿಯೇ ಸೇವೆ ಸಲ್ಲಿಸಿದ್ದರು.
ಭಾರತೀಯ ಪುನರ್ವಸತಿ ಮಂಡಳಿಯ ಕಾರ್ಯಕಾರಿ ಸದಸ್ಯರಾಗಿಯೂ, ಮಂಗಳೂರು ಯುನಿವರ್ಸಿಟಿ ಹಾಗೂ ಬೆಂಗಳೂರಿನ ಆರ್ಜಿಯುಜಿಎಚ್ಎಸ್ನಲ್ಲಿ ಮೂರು ವರ್ಷಗಳ ಕಾಲ ಸಿಂಡಿಕೇಟ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.
Join our WhatsApp group for latest news updates
30-10-25 07:25 pm
Bangalore Correspondent
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
ಸಿದ್ದರಾಮಯ್ಯ ಅವರೇ ಐದು ವರ್ಷಗಳಿಗೆ ಮುಖ್ಯಮಂತ್ರಿಯೆಂ...
30-10-25 04:34 pm
ಬೆಂಗಳೂರು ; ಕಾರಿನ ಮಿರ್ರ್ಗೆ ಬೈಕ್ ಟಚ್ ಆಗಿದ್ದ...
29-10-25 09:12 pm
ಬ್ರಿಟಿಷರ ಕಾಲದ ಸ್ಲೋಚ್ ಮಾದರಿ ಕ್ಯಾಪ್ ಬದಲು ; ಅರಸು...
28-10-25 10:03 pm
30-10-25 03:20 pm
HK News Desk
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
30-10-25 08:06 pm
Mangalore Correspondent
ರಸ್ತೆ ಗುಂಡಿ ಮುಚ್ಚಿಸಲು ಹಣವಿಲ್ಲದ ಸರ್ಕಾರಕ್ಕೆ ಶಾಸ...
30-10-25 07:28 pm
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮದುವೆಗೆ ಬರುತ್ತಿದ್ದ ಟೆ...
30-10-25 03:23 pm
ನವೆಂಬರ್ 28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಪ್ರಧಾನಿ...
30-10-25 11:28 am
ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡ...
29-10-25 10:47 pm
29-10-25 10:43 pm
Mangalore Correspondent
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm