ಬ್ರೇಕಿಂಗ್ ನ್ಯೂಸ್
14-09-20 01:16 pm Mangalore Correspondent ಕರಾವಳಿ
ಮಂಗಳೂರು, ಸೆ.14: ಡಾ.ಎಮ್.ವಿ.ಶೆಟ್ಟಿ ಟ್ರಸ್ಟ್ ಕಾಲೇಜುಗಳ ಸ್ಥಾಪಕ ಕಾರ್ಯದರ್ಶಿ ಡಾ.ಎಮ್.ಆರ್.ಶೆಟ್ಟಿ ಇಂದು ನಿಧರಾಗಿದ್ದಾರೆ.
ದಿವಂಗತ ಡಾ. ಎಮ್.ವಿ.ಶೆಟ್ಟಿಯವರ ಪುತ್ರರಾಗಿರುವ ಡಾ. ಎಮ್. ರಾಮಗೋಪಾಲ ಶೆಟ್ಟಿ ಅವರು ಪತ್ನಿ ಪ್ರೊ.ಹಿಮಾ ಊರ್ಮಿಳಾ ಶೆಟ್ಟಿ, ಮಕ್ಕಳಾದ ಡಾ. ದಿವ್ಯಾಂಜಲಿ ಶೆಟ್ಟಿ, ಡಾ. ರೋಹಿಲಾ ಶೆಟ್ಟಿ ಅವರನ್ನು ಅಗಲಿದ್ದಾರೆ.
ಡಾ.ಎಮ್.ವಿ. ಶೆಟ್ಟಿ ಟ್ರಸ್ಟ್ ಮೂಲಕ ರಾಮಗೋಪಾಲ ಶೆಟ್ಟಿಯವರು ಮಂಗಳೂರು ಯುನಿವರ್ಸಿಟಿ ಅಡಿಯಲ್ಲಿ ನರ್ಸಿಂಗ್, ಫಿಸಿಯೋಥೆರಪಿ, ವಾಕ್ ಹಾಗೂ ಶ್ರವಣ, ಮೆಡಿಕಲ್ ಲ್ಯಾಬೋರೇಟರಿ ಟೆಕ್ನಾಲಜಿ ಹಾಗೂ ಸಾಮಾಜಿಕ ಕಾರ್ಯ ಹಾಗೂ ಶಿಕ್ಷಣದಂತಹ ಹಲವು ವೃತ್ತಿಪರ ಕೋರ್ಸ್ಗಳನ್ನು ಆರಂಭಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
ಇವರ ಮಾರ್ಗದರ್ಶನ ಹಾಗೂ ಆಡಳಿತದ ಅಡಿಯಲ್ಲಿ ಟ್ರಸ್ಟ್ ಬೆಂಗಳೂರಿನ ರಾಜೀವ್ ಗಾಂಧಿ ಯುನಿವರ್ಸಿಟಿ ಆಫ್ ಹೆಲ್ತ್ ಸೈನ್ಸಸ್, ಮಂಗಳೂರು ಯುನಿವರ್ಸಿಟಿಯ ಸಂಯೋಜಿತ 15 ವಿವಿಧ ಪದವಿ ಹಾಗೂ ಸ್ನಾತಕೋತ್ತರ ಕೋರ್ಸ್ಗಳನ್ನು 8 ವಿಭಿನ್ನ ವಿಭಾಗಗಳಲ್ಲಿ ಆರಂಭಿಸಿತ್ತು.
ಡಾ.ಶೆಟ್ಟಿಯವರು ಮಂಗಳೂರಿನ ಸಂತ ಅಲೋಶಿಯಸ್ ಹೈಸ್ಕೂಲ್ನಲ್ಲಿ ಆರಂಭಿಕ ಶಿಕ್ಷಣ ಪಡೆದಿದ್ದು, ಮಂಗಳೂರಿನ ಕಸ್ತೂರ್ಬಾ ಮೆಡಿಕಲ್ ಕಾಲೇಜಿನಲ್ಲಿ ತನ್ನ ಪದವಿ ಹಾಗೂ ಸ್ನಾತಕೋತ್ತರ ವೃತ್ತಿಪರ ಶಿಕ್ಷಣವನ್ನು ಪೂರೈಸಿದ್ದರು. ಬಳಿಕ ಅವರು ಉನ್ನತ ಶಿಕ್ಷಣಕ್ಕೆ ಇಂಗ್ಲೆಂಡ್ಗೆ ತೆರಳಿದರು. ಇಂಗ್ಲೆಂಡ್ನಿಂದ ವಾಪಾಸಾದ ಬಳಿಕ ಕೆ.ಎಂ.ಸಿ.ಯಲ್ಲಿ ಸರ್ಜರಿಯ ಸಹಾಯಕ ಪ್ರೊಫೆಸರ್ ಆದರು. 1989ರ ತನಕ ಇಲ್ಲಿಯೇ ಸೇವೆ ಸಲ್ಲಿಸಿದ್ದರು.
ಭಾರತೀಯ ಪುನರ್ವಸತಿ ಮಂಡಳಿಯ ಕಾರ್ಯಕಾರಿ ಸದಸ್ಯರಾಗಿಯೂ, ಮಂಗಳೂರು ಯುನಿವರ್ಸಿಟಿ ಹಾಗೂ ಬೆಂಗಳೂರಿನ ಆರ್ಜಿಯುಜಿಎಚ್ಎಸ್ನಲ್ಲಿ ಮೂರು ವರ್ಷಗಳ ಕಾಲ ಸಿಂಡಿಕೇಟ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.
Join our WhatsApp group for latest news updates
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 08:47 pm
HK News Desk
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
06-02-26 09:01 pm
Mangalore Correspondent
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
ನಂತೂರಿನಿಂದ ಬೈಕಂಪಾಡಿಗೆ ಫ್ಲೈ ಓವರ್ ಪ್ರಸ್ತಾಪ ; ಮಾ...
05-02-26 11:03 pm
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm