ಬ್ರೇಕಿಂಗ್ ನ್ಯೂಸ್
11-12-21 03:14 pm HK Desk news ಕರಾವಳಿ
ಮಂಗಳೂರು, ಡಿ.11 : ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ದುರಂತ ಸಾವಿನ ಬಗ್ಗೆ ಅವಹೇಳನ ಮತ್ತು ಅಗೌರವ ಸೂಚಿಸುವ ರೀತಿಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ವ್ಯಕ್ತಿಗಳ ವಿರುದ್ಧ ನಗರದ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಸಂತ್ ಕುಮಾರ್ ಟಿ.ಕೆ. ಎಂಬಾತ, ಬಿಪಿನ್ ರಾವತ್ ಮೋದಿ ಗುಲಾಮತನದ ಒಂದು ತಲೆಮಾರು. ಚೈನಾ ಬಂದು ಹಳ್ಳಿಗಳನ್ನು ನಿರ್ಮಿಸಿದಾಗಲೂ ಮೋದಿಯಂತೆ ಬುಡಬುಡಿಕೆ ಹೇಳಿಕೆ ಕೊಟ್ಟ ವ್ಯಕ್ತಿ. ಸದ್ಯಕ್ಕೆ ಅವರ ಕುಟುಂಬಕ್ಕೆ ಸಮಾಧಾನ ಸಿಗಲಿ. ಅವರ ಸಾವಿನಿಂದ ದೇಶವಂತೂ ಪಾರಾಗಿದೆ ಎಂಬುದಾಗಿ ಅವಹೇಳನಕಾರಿಯಾಗಿ ಫೇಸ್ಬುಕ್ ಪೋಸ್ಟ್ ನಲ್ಲಿ ಬರೆದಿದ್ದ. ಇನ್ನೊಬ್ಬ ಸುಬ್ಬರಾವ್ ರವಿಕುಮಾರ್ ಎಂಬಾತ ಫೇಸ್ಬುಕ್ ಖಾತೆಯಲ್ಲಿ ಫೇಕುವಿನ ನೂರಾರು ಬಾಯಿಗಳಲ್ಲಿ ಒಂದು ಸ್ತಬ್ಧವಾಗಿದೆ ಎಂದು ಬರೆದಿದ್ದು ಅದಕ್ಕೆ ಪ್ರತಿಕ್ರಿಯೆ ರೂಪದಲ್ಲಿ ಶ್ರೀನಿವಾಸ್ ಕಾರ್ಕಳ ಎಂಬ ವ್ಯಕ್ತಿ ದೋವಲ್ ಯಾವಾಗ ಎಂಬುದಾಗಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವಲ್ ಸಾವನ್ನು ಬಯಸಿ, ಪೋಸ್ಟ್ ಮಾಡಿದ್ದ.
ಈ ರೀತಿ ಸೇನಾಧಿಕಾರಿ ಬಿಪಿನ್ ರಾವತ್ ಸಾವಿನ ಬಗ್ಗೆ ಸಂಭ್ರಮಿಸಿ, ಅಗೌರವ ಸೂಚಿಸಿ ಪೋಸ್ಟ್ ಮಾಡಿದ್ದು, ಜಾಲತಾಣದಲ್ಲಿ ವೈರಲ್ ಆಗಿದ್ದಲ್ಲದೆ, ಭಾರೀ ಆಕ್ರೋಶಕ್ಕೂ ಕಾರಣವಾಗಿದೆ. ಈ ಬಗ್ಗೆ ಯುವಮೋರ್ಚಾ ಕಾರ್ಯಕರ್ತರು ಶುಕ್ರವಾರ ಸಂಜೆ ಪಾಂಡೇಶ್ವರ ಠಾಣೆಯಲ್ಲಿ ದೂರನ್ನೂ ದಾಖಲಿಸಿದ್ದರು. ಆ ಪೈಕಿ ಸುಶಾಂತ್ ಪೂಜಾರಿ ಎಂಬವರ ದೂರು ಆಧರಿಸಿ, ಪಾಂಡೇಶ್ವರ ಠಾಣೆಯಲ್ಲಿ ವಸಂತ್ ಕುಮಾರ್ ಟಿ.ಕೆ ಮತ್ತು ಶ್ರೀನಿವಾಸ್ ಕಾರ್ಕಳ ಮತ್ತಿತರ ವ್ಯಕ್ತಿಗಳ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುವುದಾಗಿ ಪೊಲೀಸ್ ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ.
Offensive social media posts about Bipin Rawat’s death on Facebook for which Mangalore police have filed FIR on many. Karnataka Chief Minister Basavaraj Bommai said on Friday that “offensive tweets and social media posts” about the helicopter crash in which Chief of Defence Staff Bipin Rawat died will not be tolerated. Bipin Rawat, his wife Madhulika Rawat and 11 others died on Wednesday in the helicopter crash in the Katteri-Nanchappanchathram area of Tamil Nadu’s Coonoor district.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm