ಬ್ರೇಕಿಂಗ್ ನ್ಯೂಸ್
11-12-21 10:19 pm HK Desk news ಕರಾವಳಿ
Photo credits : Headline Karnataka
ಮಂಗಳೂರು, ಡಿ.11 : ತಡೆಗೋಡೆ ಕುಸಿದು ಬಿದ್ದು ಕೂಲಿ ಕೆಲಸಕ್ಕೆ ಬಂದಿದ್ದ ಮಹಿಳೆ ಸಾವನ್ನಪ್ಪಿದ ಘಟನೆ ನಗರ ಹೊರವಲಯದ ಬೋಂದೆಲ್ ಬಳಿಯ ಕೃಷ್ಣನಗರದಲ್ಲಿ ನಡೆದಿದೆ.
ಆಂಧ್ರಪ್ರದೇಶ ಮೂಲದ ಕೂಲಿ ಕಾರ್ಮಿಕ ಮಹಿಳೆ ತಿಮ್ಮಕ್ಕ(42) ಮೃತರು. ಮಂಗಳೂರು ಮಹಾನಗರ ಪಾಲಿಕೆಯ ಜಲಸಿರಿ ಯೋಜನೆಯಡಿ ಪೈಪ್ ಲೈನ್ ಹಾಕಲು ಗುಂಡಿ ಅಗೆಯುವ ಕಾಮಗಾರಿ ನಡೆಸುತ್ತಿದ್ದಾಗ, ಒಂದು ಭಾಗದಲ್ಲಿ ಕಟ್ಟಿದ್ದ ಕೆಂಪು ಕಲ್ಲಿನ ಗೋಡೆ ಕುಸಿದು ಬಿದ್ದಿದೆ. ಧರೆ ಕುಸಿಯದಂತೆ ಎತ್ತರಕ್ಕೆ ತಡೆಗೋಡೆ ಕಟ್ಟಿದ್ದು, ಕೆಳಭಾಗದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯ ಮೇಲೆ ಬಿದ್ದಿದೆ. ಅರ್ಧ ಗಂಟೆ ಕಾಲ ಮಹಿಳೆ ಮಣ್ಣಿನಡಿಯಲ್ಲಿ ಸಿಲುಕಿದ್ದು, ಬಳಿಕ ಅವರನ್ನು ಹೊರತೆಗೆದು ಆಸ್ಪತ್ರೆಗೆ ಸಾಗಿಸಲಾಗಿತ್ತು. ಅಲ್ಲಿ ಮಹಿಳೆ ಸಾವನ್ನಪ್ಪಿದ್ದಾರೆ. ಸ್ಥಳೀಯರು, ಇತರ ಕಾರ್ಮಿಕರು ಜೆಸಿಬಿ ಸಹಾಯದಲ್ಲಿ ಮಣ್ಣು ತೆರವು ಮಾಡುವ ಕಾರ್ಯ ಮಾಡಿದರೂ, ವಿಳಂಬವಾಗಿದ್ದು ಮಹಿಳೆ ಸಾವಿಗೆ ಕಾರಣವಾಗಿತ್ತು.

ಮಹಿಳೆಯ 12 ವರ್ಷದ ಪುತ್ರಿ ಪುಷ್ಪಾ ಕೂಡ ಜೊತೆಗಿದ್ದು, ಆಕೆಯೂ ಮಣ್ಣಿನಡಿ ಸಿಲುಕಿದ್ದಳು. ಆದರೆ, ಮಗುವಿಗೆ ಹೆಚ್ಚು ಅಪಾಯ ಆಗಿಲ್ಲ. ಸ್ವಲ್ಪ ಮಣ್ಣು ಬಿದ್ದಿದ್ದರಿಂದ ಅಪಾಯದಿಂದ ಪಾರಾಗಿದ್ದಳು. ಕಾವೂರು ಪೊಲೀಸರು ಮಹಾನಗರ ಪಾಲಿಕೆಯ ಕಾಮಗಾರಿ ನಿರ್ವಹಿಸುತ್ತಿದ್ದ ಗುತ್ತಿಗೆದಾರನ ಮೇಲೆ ಕೇಸು ದಾಖಲಿಸಿದ್ದಾರೆ. ಅಪಾಯ ಇದ್ದರೂ, ಕೂಲಿಯಾಳುಗಳ ಬಗ್ಗೆ ಜಾಗ್ರತೆ ವಹಿಸದೇ ಇದ್ದ ಗುತ್ತಿಗೆದಾರನ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.
A retaining wall collapsed at Krishnanagar, Bondel in the outskirts of the city here on Saturday, December 11 in which 42 year old woman died on spot.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
05-03-26 05:02 pm
HK News Staffer
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
05-03-26 07:38 pm
HK News Staffer
ಸಾಕ್ಷಿಗಳು ಬರ್ತಾರೆ, ಹೋಗ್ತಾರೆ.. ಧರ್ಮಸ್ಥಳದಲ್ಲಿ ಹ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm