ಬ್ರೇಕಿಂಗ್ ನ್ಯೂಸ್
11-12-21 10:19 pm HK Desk news ಕರಾವಳಿ
Photo credits : Headline Karnataka
ಮಂಗಳೂರು, ಡಿ.11 : ತಡೆಗೋಡೆ ಕುಸಿದು ಬಿದ್ದು ಕೂಲಿ ಕೆಲಸಕ್ಕೆ ಬಂದಿದ್ದ ಮಹಿಳೆ ಸಾವನ್ನಪ್ಪಿದ ಘಟನೆ ನಗರ ಹೊರವಲಯದ ಬೋಂದೆಲ್ ಬಳಿಯ ಕೃಷ್ಣನಗರದಲ್ಲಿ ನಡೆದಿದೆ.
ಆಂಧ್ರಪ್ರದೇಶ ಮೂಲದ ಕೂಲಿ ಕಾರ್ಮಿಕ ಮಹಿಳೆ ತಿಮ್ಮಕ್ಕ(42) ಮೃತರು. ಮಂಗಳೂರು ಮಹಾನಗರ ಪಾಲಿಕೆಯ ಜಲಸಿರಿ ಯೋಜನೆಯಡಿ ಪೈಪ್ ಲೈನ್ ಹಾಕಲು ಗುಂಡಿ ಅಗೆಯುವ ಕಾಮಗಾರಿ ನಡೆಸುತ್ತಿದ್ದಾಗ, ಒಂದು ಭಾಗದಲ್ಲಿ ಕಟ್ಟಿದ್ದ ಕೆಂಪು ಕಲ್ಲಿನ ಗೋಡೆ ಕುಸಿದು ಬಿದ್ದಿದೆ. ಧರೆ ಕುಸಿಯದಂತೆ ಎತ್ತರಕ್ಕೆ ತಡೆಗೋಡೆ ಕಟ್ಟಿದ್ದು, ಕೆಳಭಾಗದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯ ಮೇಲೆ ಬಿದ್ದಿದೆ. ಅರ್ಧ ಗಂಟೆ ಕಾಲ ಮಹಿಳೆ ಮಣ್ಣಿನಡಿಯಲ್ಲಿ ಸಿಲುಕಿದ್ದು, ಬಳಿಕ ಅವರನ್ನು ಹೊರತೆಗೆದು ಆಸ್ಪತ್ರೆಗೆ ಸಾಗಿಸಲಾಗಿತ್ತು. ಅಲ್ಲಿ ಮಹಿಳೆ ಸಾವನ್ನಪ್ಪಿದ್ದಾರೆ. ಸ್ಥಳೀಯರು, ಇತರ ಕಾರ್ಮಿಕರು ಜೆಸಿಬಿ ಸಹಾಯದಲ್ಲಿ ಮಣ್ಣು ತೆರವು ಮಾಡುವ ಕಾರ್ಯ ಮಾಡಿದರೂ, ವಿಳಂಬವಾಗಿದ್ದು ಮಹಿಳೆ ಸಾವಿಗೆ ಕಾರಣವಾಗಿತ್ತು.

ಮಹಿಳೆಯ 12 ವರ್ಷದ ಪುತ್ರಿ ಪುಷ್ಪಾ ಕೂಡ ಜೊತೆಗಿದ್ದು, ಆಕೆಯೂ ಮಣ್ಣಿನಡಿ ಸಿಲುಕಿದ್ದಳು. ಆದರೆ, ಮಗುವಿಗೆ ಹೆಚ್ಚು ಅಪಾಯ ಆಗಿಲ್ಲ. ಸ್ವಲ್ಪ ಮಣ್ಣು ಬಿದ್ದಿದ್ದರಿಂದ ಅಪಾಯದಿಂದ ಪಾರಾಗಿದ್ದಳು. ಕಾವೂರು ಪೊಲೀಸರು ಮಹಾನಗರ ಪಾಲಿಕೆಯ ಕಾಮಗಾರಿ ನಿರ್ವಹಿಸುತ್ತಿದ್ದ ಗುತ್ತಿಗೆದಾರನ ಮೇಲೆ ಕೇಸು ದಾಖಲಿಸಿದ್ದಾರೆ. ಅಪಾಯ ಇದ್ದರೂ, ಕೂಲಿಯಾಳುಗಳ ಬಗ್ಗೆ ಜಾಗ್ರತೆ ವಹಿಸದೇ ಇದ್ದ ಗುತ್ತಿಗೆದಾರನ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.
A retaining wall collapsed at Krishnanagar, Bondel in the outskirts of the city here on Saturday, December 11 in which 42 year old woman died on spot.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
07-09-26 01:22 pm
HK News Staffer
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
07-09-26 07:44 pm
HK News Staffer
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm
ಪರವಾನಗಿ ಇಲ್ಲದೆ ಔಷಧಿ ದಾಸ್ತಾನು ; ಬೆಂಗಳೂರಿನ ಅಮೆಜ...
06-09-26 10:28 pm