ಬ್ರೇಕಿಂಗ್ ನ್ಯೂಸ್
11-12-21 10:19 pm HK Desk news ಕರಾವಳಿ
Photo credits : Headline Karnataka
ಮಂಗಳೂರು, ಡಿ.11 : ತಡೆಗೋಡೆ ಕುಸಿದು ಬಿದ್ದು ಕೂಲಿ ಕೆಲಸಕ್ಕೆ ಬಂದಿದ್ದ ಮಹಿಳೆ ಸಾವನ್ನಪ್ಪಿದ ಘಟನೆ ನಗರ ಹೊರವಲಯದ ಬೋಂದೆಲ್ ಬಳಿಯ ಕೃಷ್ಣನಗರದಲ್ಲಿ ನಡೆದಿದೆ.
ಆಂಧ್ರಪ್ರದೇಶ ಮೂಲದ ಕೂಲಿ ಕಾರ್ಮಿಕ ಮಹಿಳೆ ತಿಮ್ಮಕ್ಕ(42) ಮೃತರು. ಮಂಗಳೂರು ಮಹಾನಗರ ಪಾಲಿಕೆಯ ಜಲಸಿರಿ ಯೋಜನೆಯಡಿ ಪೈಪ್ ಲೈನ್ ಹಾಕಲು ಗುಂಡಿ ಅಗೆಯುವ ಕಾಮಗಾರಿ ನಡೆಸುತ್ತಿದ್ದಾಗ, ಒಂದು ಭಾಗದಲ್ಲಿ ಕಟ್ಟಿದ್ದ ಕೆಂಪು ಕಲ್ಲಿನ ಗೋಡೆ ಕುಸಿದು ಬಿದ್ದಿದೆ. ಧರೆ ಕುಸಿಯದಂತೆ ಎತ್ತರಕ್ಕೆ ತಡೆಗೋಡೆ ಕಟ್ಟಿದ್ದು, ಕೆಳಭಾಗದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯ ಮೇಲೆ ಬಿದ್ದಿದೆ. ಅರ್ಧ ಗಂಟೆ ಕಾಲ ಮಹಿಳೆ ಮಣ್ಣಿನಡಿಯಲ್ಲಿ ಸಿಲುಕಿದ್ದು, ಬಳಿಕ ಅವರನ್ನು ಹೊರತೆಗೆದು ಆಸ್ಪತ್ರೆಗೆ ಸಾಗಿಸಲಾಗಿತ್ತು. ಅಲ್ಲಿ ಮಹಿಳೆ ಸಾವನ್ನಪ್ಪಿದ್ದಾರೆ. ಸ್ಥಳೀಯರು, ಇತರ ಕಾರ್ಮಿಕರು ಜೆಸಿಬಿ ಸಹಾಯದಲ್ಲಿ ಮಣ್ಣು ತೆರವು ಮಾಡುವ ಕಾರ್ಯ ಮಾಡಿದರೂ, ವಿಳಂಬವಾಗಿದ್ದು ಮಹಿಳೆ ಸಾವಿಗೆ ಕಾರಣವಾಗಿತ್ತು.

ಮಹಿಳೆಯ 12 ವರ್ಷದ ಪುತ್ರಿ ಪುಷ್ಪಾ ಕೂಡ ಜೊತೆಗಿದ್ದು, ಆಕೆಯೂ ಮಣ್ಣಿನಡಿ ಸಿಲುಕಿದ್ದಳು. ಆದರೆ, ಮಗುವಿಗೆ ಹೆಚ್ಚು ಅಪಾಯ ಆಗಿಲ್ಲ. ಸ್ವಲ್ಪ ಮಣ್ಣು ಬಿದ್ದಿದ್ದರಿಂದ ಅಪಾಯದಿಂದ ಪಾರಾಗಿದ್ದಳು. ಕಾವೂರು ಪೊಲೀಸರು ಮಹಾನಗರ ಪಾಲಿಕೆಯ ಕಾಮಗಾರಿ ನಿರ್ವಹಿಸುತ್ತಿದ್ದ ಗುತ್ತಿಗೆದಾರನ ಮೇಲೆ ಕೇಸು ದಾಖಲಿಸಿದ್ದಾರೆ. ಅಪಾಯ ಇದ್ದರೂ, ಕೂಲಿಯಾಳುಗಳ ಬಗ್ಗೆ ಜಾಗ್ರತೆ ವಹಿಸದೇ ಇದ್ದ ಗುತ್ತಿಗೆದಾರನ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.
A retaining wall collapsed at Krishnanagar, Bondel in the outskirts of the city here on Saturday, December 11 in which 42 year old woman died on spot.
11-06-26 08:31 pm
HK News Staffer
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
11-06-26 08:44 pm
HK News Staffer
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm