ಬ್ರೇಕಿಂಗ್ ನ್ಯೂಸ್
14-09-20 06:08 pm Mangalore Reporter ಕರಾವಳಿ
ಕಾಸರಗೋಡು, ಸೆ.14: ವಂಚನೆ ಪ್ರಕರಣ ಎದುರಿಸುತ್ತಿರುವ ಮಂಜೇಶ್ವರ ಶಾಸಕ ಎಂ.ಸಿ ಖಮರುದ್ದೀನ್ ರಾಜೀನಾಮೆ ನೀಡಬೇಕು, ಕೂಡಲೇ ಶಾಸಕರನ್ನು ಬಂಧಿಸಬೇಕು ಎಂದು ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ಕಾಸರಗೋಡು ತಾಲೂಕು ಕಚೇರಿಗೆ ಮುತ್ತಿಗೆ ಹಾಕಿದ್ದಾರೆ. ಪೊಲೀಸ್ ಬ್ಯಾರಿಕೇಡ್ ಬೇಧಿಸಿ ಮುನ್ನುಗ್ಗಲೆತ್ನಿಸಿದ ಕಾರ್ಯಕರ್ತರ ಮೇಲೆ ಪೊಲೀಸರು ಜಲಫಿರಂಗಿ ಪ್ರಯೋಗಿಸಿದರು.
ಮೆರವಣಿಗೆ ಮೂಲಕ ಆಗಮಿಸಿದ ಕಾರ್ಯಕರ್ತರು ಬ್ಯಾರಿಕೇಡ್ ಗಳನ್ನು ತೆಗೆದು ಒಳನುಗ್ಗಲು ಯತ್ನಿಸಿದ್ದಾರೆ. ಈ ವೇಳೆ, ಪೊಲೀಸರು ಬ್ಯಾರಿಕೇಡ್ ಹಾಕಿ ಭದ್ರತೆ ನಡೆಸಿದ್ದು ಮೂರು ಬಾರಿ ಜಲಫಿರಂಗಿ ಪ್ರಯೋಗ ಮಾಡಿದ್ದಾರೆ.



ಪ್ರತಿಭಟನೆ ನೇತೃತ್ವ ವಹಿಸಿದ್ದ ಕಾಸರಗೋಡು ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಶ್ರೀಕಾಂತ್ ಜಲಫಿರಂಗಿ ಎದುರಾಗಿ ನಿಂತು ಕಾರ್ಯಕರ್ತರಿಗೆ ಬೆನ್ನೆಲುಬಾಗಿ ನಿಂತರು. ಉಪಾಧ್ಯಕ್ಷ ಸದಾನಂದ ರೆ, ಜಿಲ್ಲಾ ಕಾರ್ಯದರ್ಶಿ ಎನ್.ಸತೀಶ್, ಸವಿತಾ ಟೀಚರ್, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಎಂ. ಜನನಿ, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಧನಂಜಯ ಮಧೂರು, ಪಿ.ಆರ್ ಸುನಿಲ್, ಹರೀಶ್ ನಾರಂಪಾಡಿ, ಸುಕುಮಾರ ಕುದ್ರೆಪ್ಪಾಡಿ ಮೊದಲಾದವರು ಪಾಲ್ಗೊಂಡಿದ್ದರು.
ಜಲಫಿರಂಗಿ ಮೂಲಕ ಕಾರ್ಯಕರ್ತರನ್ನು ಹಿಮ್ಮೆಟ್ಟಿಸಲು ಪೊಲೀಸರು ಯತ್ನಿಸಿದರೂ ಕಾರ್ಯಕರ್ತರು ಕದಲಲಿಲ್ಲ. ಬಳಿಕ ಕಾರ್ಯಕರ್ತರನ್ನು ಬಂಧಿಸಿದರು.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am