ಬ್ರೇಕಿಂಗ್ ನ್ಯೂಸ್
14-09-20 07:23 pm Mangalore Reporter ಕರಾವಳಿ
ಮಂಗಳೂರು, ಸೆಪ್ಟೆಂಬರ್ 12: ಡ್ರಗ್ಸ್ ವಿಚಾರದಲ್ಲಿ ಯಾರೇ ತಪ್ಪಿತಸ್ಥರಿದ್ದರೂ ಕಠಿಣ ಕ್ರಮ ಆಗಬೇಕು. ಆದರೆ ರಾಜ್ಯ ಸರಕಾರ ಹಿಟ್ ಅಂಡ್ ರನ್ ಆಗುವಂತೆ ನಡೆದುಕೊಳ್ಳಬಾರದು. ಸರಕಾರದ ಬಳಿ ಸಾಕ್ಷಿಗಳಿದ್ದರೆ ತಪ್ಪಿತಸ್ಥರು ಯಾರಿದ್ದಾರೆ ಎಲ್ರಿಗೂ ಶಿಕ್ಷೆ ಆಗೋ ವರೆಗೆ ಮಾಡಬೇಕು ಎಂದು ಮಾಜಿ ಸಚಿವ ಯು.ಟಿ ಖಾದರ್ ಆಗ್ರಹಿಸಿದ್ದಾರೆ.
ಮಂಗಳೂರಿನ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಟಿ ನಡೆಸಿದ ಯು.ಟಿ.ಖಾದರ್, ಜಮೀರ್ ಅಹ್ಮದ್ ಶ್ರೀಲಂಕಾ ಹೋಗಿದ್ದನ್ನು ಒಪ್ಕೊಂಡಿದ್ದಾರಲ್ವಾ ಎಂಬ ಪ್ರಶ್ನೆಗೆ, ಶ್ರೀಲಂಕಾಗೆ ಹೋಗಬಾರದು ಅಂತೇನಾದ್ರೂ ಇದೆಯಾ ? ಲಂಕಾಗೆ ಹೋಗಲು ವೀಸಾ ಕೊಟ್ಟವರು ಇವರೇ ಅಲ್ವಾ ? ಬಿಜೆಪಿಯವರದ್ದೇ ಕೇಂದ್ರ ಸರಕಾರ ಇದೆ. ಏನೇನು ಅಕ್ರಮ ಆಗಿದೆ ಪತ್ತೆಹಚ್ಚಿ ಶಿಕ್ಷೆ ವಿಧಿಸಿ... ಅದು ಬಿಟ್ಟು ತಮ್ಮ ವೈಫಲ್ಯ ಮುಚ್ಚಿಡಲು ಜನರ ಗಮನ ಬೇರೆಡೆಗೆ ಸೆಳೆಯುವ ಕೆಲಸ ಮಾಡಬಾರದು. ಶ್ರೀಲಂಕಾ, ಕ್ಯಾಸಿನೋ ಮತ್ತೊಂದು ಅಂತ ಕಾಲಹರಣ ಮಾಡಬಾರದು ಎನ್ನುವ ಮೂಲಕ ಪರೋಕ್ಷವಾಗಿ ಜಮೀರ್ ಪರ ಖಾದರ್ ಕೂಡ ಬ್ಯಾಟಿಂಗ್ ಮಾಡಿದ್ದಾರೆ.
ಅಲ್ಲದೆ, ರಾಜ್ಯ ಸರಕಾರ ಈಗ ರಾಜ್ಯದಲ್ಲಿ ನಾರ್ಕೊಟಿಕ್ ದಳವನ್ನು ಪ್ರಬಲಗೊಳಿಸಬೇಕು. ಡ್ರಗ್ಸ್ ಬಗ್ಗೆ ಮಾಹಿತಿ ಕೊಡುವ ಮಂದಿ ಸಾವಿರ ಇದ್ದಾರೆ. ಇವ್ರು ಬಂಧಿಸಿ ಬಿಡೋದ್ರಿಂದ ಏನೂ ಆಗಲ್ಲ. ಸೂಕ್ತ ಶಿಕ್ಷೆ ಆಗುವಂತೆ ನೋಡಿಕೊಳ್ಳಬೇಕು. ಅದಕ್ಕಾಗಿ ನಾರ್ಕೋಟಿಕ್ ಸೆಲ್ ಬಲಗೊಳಿಸಬೇಕು. ಆ ಬಗ್ಗೆ ಖಚಿತ ನಿರ್ಧಾರ ತೆಗೆದುಕೊಳ್ಳಬೇಕು ಎಂದರು.
ಚಳಿಗಾಲದ ವಿಧಾನಸಭೆ ಅಧಿವೇಶನದ ಬಗ್ಗೆ ಮಾತನಾಡಿದ ಯು.ಟಿ. ಖಾದರ್, ಎಂಟು ದಿನಗಳಿಗಷ್ಟೇ ವಿಧಾನಸಭೆ ಅಧಿವೇಶನ ಮಾಡಿದ್ದಾರೆ. ಇದರಲ್ಲಿ ಒಂದು ದಿನ ನಿಧನರಾದವರಿಗೆ ಶೋಕಾಚರಣೆ ಇರುತ್ತದೆ. ಇನ್ನಿರುವ ಏಳು ದಿನದಲ್ಲಿ ಏನ್ ಚರ್ಚೆ ಮಾಡೋಕೆ ಸಾಧ್ಯ. ಕೇವಲ ಕಾಟಾಚಾರಕ್ಕೆ ಮಾಡೋ ಬದಲು ಅಧಿವೇಶನವನ್ನು ಕನಿಷ್ಠ ಹತ್ತು ದಿನಗಳಿಗಾದ್ರೂ ವಿಸ್ತರಣೆ ಮಾಡಬೇಕು ಎಂದು ಒತ್ತಾಯಿಸಿದರು.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 08:47 pm
HK News Desk
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
06-02-26 09:01 pm
Mangalore Correspondent
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
ನಂತೂರಿನಿಂದ ಬೈಕಂಪಾಡಿಗೆ ಫ್ಲೈ ಓವರ್ ಪ್ರಸ್ತಾಪ ; ಮಾ...
05-02-26 11:03 pm
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm