ದಕ್ಷಿಣ ಕನ್ನಡದಲ್ಲಿ ಬಿಜೆಪಿ, ಕಾಂಗ್ರೆಸ್ ಸಹಜ ಗೆಲುವು, ಮಂಜುನಾಥ ಭಂಡಾರಿಗೆ ಹೆಚ್ಚುವರಿ ಮತಗಳಿಕೆ !

14-12-21 01:39 pm       HK Desk news   ಕರಾವಳಿ

ವಿಧಾನ ಪರಿಷತ್ತಿಗೆ ದಕ್ಷಿಣ ಕನ್ನಡ ಜಿಲ್ಲೆಯ ದ್ವಿಸದಸ್ಯ ಕ್ಷೇತ್ರದಲ್ಲಿ ನಡೆದ ಚುನಾವಣೆಯಲ್ಲಿ ಸಹಜವಾಗಿಯೇ ಬಿಜೆಪಿ ಮತ್ತು ಕಾಂಗ್ರೆಸ್ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ.

ಮಂಗಳೂರು, ಡಿ.14 : ವಿಧಾನ ಪರಿಷತ್ತಿಗೆ ದಕ್ಷಿಣ ಕನ್ನಡ ಜಿಲ್ಲೆಯ ದ್ವಿಸದಸ್ಯ ಕ್ಷೇತ್ರದಲ್ಲಿ ನಡೆದ ಚುನಾವಣೆಯಲ್ಲಿ ಸಹಜವಾಗಿಯೇ ಬಿಜೆಪಿ ಮತ್ತು ಕಾಂಗ್ರೆಸ್ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. ಬಿಜೆಪಿಯಿಂದ ಸತತ ನಾಲ್ಕನೇ ಬಾರಿಗೆ ಕೋಟ ಶ್ರೀನಿವಾಸ ಪೂಜಾರಿ ಗೆಲುವು ಕಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ ಭಂಡಾರಿ ಮೊದಲ ಬಾರಿಗೆ ವಿಧಾನ ಪರಿಷತ್ ಪ್ರವೇಶ ಪಡೆದಿದ್ದಾರೆ.

ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಅಭ್ಯರ್ಥಿಗಳು ಅವಿರೋಧ ಆಯ್ಕೆಯಾಗುವುದು ಖಚಿತವಾಗಿತ್ತು. ಆದರೆ, ಎಸ್ ಡಿಪಿಐ ಅಭ್ಯರ್ಥಿಯ ಸ್ಪರ್ಧೆಯಿಂದಾಗಿ ಚುನಾವಣೆ ನಡೆದಿತ್ತು. ಬಿಜೆಪಿಗೆ 4600 ಮತಗಳನ್ನು ಹೊಂದಿದ್ದರೆ, ಕಾಂಗ್ರೆಸ್ ಪರವಾಗಿ 1900ರಷ್ಟು ಮತಗಳನ್ನು ಹೊಂದಿತ್ತು. ಎಸ್ ಡಿಪಿಐ 200 ಮತಗಳನ್ನಷ್ಟೇ ಹೊಂದಿದ್ದರೂ, ಸ್ಪರ್ಧಿಸಿ ತಮ್ಮ ಇರವನ್ನು ತೋರಿಸಲು ಯತ್ನಿಸಿದ್ದರಿಂದ ಚುನಾವಣೆ ನಡೆಸಲಾಗಿತ್ತು.

ಬಿಜೆಪಿಯ ಕೋಟ ಶ್ರೀನಿವಾಸ ಪೂಜಾರಿ ಮೊದಲ ಪ್ರಾಶಸ್ತ್ಯದಲ್ಲಿ 3697 ಮತಗಳನ್ನು ಪಡೆದು ಜಯ ಗಳಿಸಿದ್ದಾರೆ. ಇದೇ ವೇಳೆ, ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ ಭಂಡಾರಿ 2077 ಮತಗಳನ್ನು ಪಡೆದು ಗೆಲುವು ಕಂಡಿದ್ದಾರೆ. ಕಾಂಗ್ರೆಸ್ ಪರವಾಗಿ 1900 ರಷ್ಟು ಮತಗಳನ್ನು ಹೊಂದಿದ್ದು ಕಮ್ಯುನಿಸ್ಟ್ ಮತ್ತು ಪಕ್ಷೇತರ ಸದಸ್ಯರು ಕಾಂಗ್ರೆಸ್ ಪರವಾಗಿ ಮತ ಚಲಾಯಿಸಿರುವುದು ಕಂಡುಬಂದಿದೆ. ಇನ್ನು ಎಸ್ ಡಿಪಿಐ ಅಭ್ಯರ್ಥಿ ಶಾಫಿ ಬೆಳ್ಳಾರೆ 205 ಮತಗಳನ್ನು ಪಡೆದು ಸೋಲನುಭವಿಸಿದ್ದಾರೆ.

In the local authorities’ constituency covering Dakshina Kannada and Udupi districts from where two candidates were to be elected to the legislative council, BJP candidate and current minister, Kota Srinivas Poojary and Congress candidate Manjunath Bhandary, succeeded in registering victories with first preference votes. Kota Srinivas Poojary, minister for social welfare and backward classes welfare, entered the legislative council once again by bagging 3,672 votes. Manjunath Bhandary secured 2,079 votes. For Bhandary, this will be his first term as a member of the legislative council.