ಬ್ರೇಕಿಂಗ್ ನ್ಯೂಸ್
15-12-21 07:12 pm HK Desk news ಕರಾವಳಿ
ಪುತ್ತೂರು, ಡಿ.15: ಪುತ್ತೂರು ಪೇಟೆಯ ಹಾರಾಡಿ ಸರಕಾರಿ ಶಾಲೆಯಲ್ಲಿ ಪ್ರಭಾರ ಮುಖ್ಯ ಶಿಕ್ಷಕಿಯಾಗಿದ್ದ ಪ್ರಿಯಾ ಕುಮಾರಿ(38) ಎರಡು ದಿನಗಳ ಹಿಂದೆ ತನ್ನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಕೃತ್ಯಕ್ಕೆ ತಾಲೂಕು ಶಿಕ್ಷಣಾಧಿಕಾರಿಯ ಕಿರುಕುಳವೇ ಕಾರಣ ಎನ್ನುವ ಮಾತು ಸಾರ್ವಜನಿಕ ವಲಯದಲ್ಲಿ ಕೇಳಿಬಂದಿದೆ.
ಪ್ರಿಯಾ ತುಂಬ ಮೃದು ಮತ್ತು ಸೂಕ್ಷ್ಮ ಸ್ವಭಾವದ ಶಿಕ್ಷಕಿಯಾಗಿದ್ದು ಇತ್ತೀಚೆಗೆ ಶಾಲೆಗೆ ಬಂದಿದ್ದ ತಾಲೂಕು ಶಿಕ್ಷಣಾಧಿಕಾರಿ ಇತರೇ ಶಿಕ್ಷಕರ ಮುಂದೆ ಅವಮಾನಿಸುವ ರೀತಿ ಮಾತನಾಡಿದ್ದರು ಎನ್ನಲಾಗಿದೆ. ಈ ಹಿಂದೆ ಹಾರಾಡಿ ಶಾಲೆಯಲ್ಲಿ ಮುಖ್ಯ ಶಿಕ್ಷಕನಾಗಿದ್ದ ವ್ಯಕ್ತಿಯನ್ನು ಅವ್ಯವಹಾರದ ಆರೋಪದಲ್ಲಿ ಅಮಾನತುಗೊಳಿಸಲಾಗಿತ್ತು. ಅದೇ ವಿಚಾರವನ್ನು ಮುಂದಿಟ್ಟು ನಿಮ್ಮನ್ನು ಕೂಡ ಡಿಬಾರ್ ಮಾಡುತ್ತೇನೆ ಎಂದು ಅಧಿಕಾರಿ ಧಮಕಿ ಹಾಕಿದ್ದರಂತೆ.
ಘಟನೆಯ ಬಳಿಕ ತೀವ್ರ ನೊಂದಿದ್ದ ಶಿಕ್ಷಕಿ ಪ್ರಿಯಾ ಅವರು ತನಗೆ ಮುಖ್ಯ ಶಿಕ್ಷಕಿಯ ಹುದ್ದೆಯೇ ಬೇಡವೆಂದು ಬೇರೆ ಶಾಲೆಗೆ ವರ್ಗಾವಣೆ ಕೇಳಿದ್ದರು. ಪುತ್ತೂರು ತಾಲೂಕಿನ ಅರಿಯಡ್ಕ ಶಾಲೆಗೆ ವರ್ಗಾವಣೆಯೂ ಆಗಿತ್ತು. ಆದರೆ, ವರ್ಗಾವಣೆ ಆದೇಶ ಸಕಾಲದಲ್ಲಿ ಬರದೇ ಇದ್ದುದರಿಂದ ಮತ್ತೆ ಮಾನಸಿಕ ಕಿರುಕುಳ ಅನುಭವಿಸಿದ್ದರು. ತಾನೇನು ತಪ್ಪು ಮಾಡಿಲ್ಲ.. ನನಗ್ಯಾಕೆ ಹೀಗೆ ಮಾಡುತ್ತಿದ್ದಾರೆ ಎಂದು ತೀವ್ರ ನೊಂದುಕೊಂಡು ಪ್ರಿಯಾ ಈ ಬಗ್ಗೆ ಇತರೇ ಶಿಕ್ಷಕರಲ್ಲಿ ಹೇಳಿಕೊಂಡಿದ್ದರು. ಇದೇ ವಿಚಾರದಲ್ಲಿ ಆನಂತರವೂ ಕಿರುಕುಳ ಆಗಿತ್ತಾ ಅನ್ನುವ ಬಗ್ಗೆ ತಿಳಿದಿಲ್ಲ.
ಇದಲ್ಲದೆ, ಅದೇ ಶಾಲೆಯ ಇನ್ನೊಬ್ಬ ಶಿಕ್ಷಕಿಯೊಬ್ಬರ ಜೊತೆ ಶಿಕ್ಷಣಾಧಿಕಾರಿ ಹತ್ತಿರದ ಸಂಬಂಧ ಇಟ್ಟುಕೊಂಡಿದ್ದಾರೆ ಅನ್ನುವ ಆರೋಪಗಳಿವೆ. ಆದರೆ, ಯಾವ ವಿಚಾರದಲ್ಲಿ ಶಿಕ್ಷಕಿ ಪ್ರಿಯಾ ಅವರನ್ನು ಟಾರ್ಗೆಟ್ ಮಾಡಲಾಗಿತ್ತು ಅನ್ನೋದು ತಿಳಿದುಬಂದಿಲ್ಲ. ಪ್ರಿಯಾ ಅವರ ಗಂಡ ಎಕ್ಸ್ ಮಿಲಿಟರಿಯಾಗಿದ್ದು, ವಿಟ್ಲದಲ್ಲಿ ಖಾಸಗಿ ಕಂಪನಿಯಲ್ಲಿ ಕೆಲಸದಲ್ಲಿದ್ದಾರೆ. ವಿಟ್ಲದ ಸಿಪಿಸಿಆರ್ ಐ ಬಳಿ ಬಾಡಿಗೆ ಮನೆಯಲ್ಲಿ ವಾಸವಿದ್ದರು. ತೀವ್ರ ಜಿಗುಪ್ಸೆಗೆ ಒಳಗಾಗಿದ್ದ ಪ್ರಿಯಾ ಅವರು ಸೋಮವಾರ ಬೆಳಗ್ಗೆ ಮನೆಯಲ್ಲಿ ಗಂಡ ಸ್ನಾನ ಮಾಡುತ್ತಿದ್ದಾಗ, ತನ್ನ ಕೋಣೆಯಲ್ಲಿ ನೇಣು ಬಿಗಿದುಕೊಂಡಿದ್ದಾರೆ. ಸ್ನಾನ ಮುಗಿಸಿ ಬಂದ ಪತಿ ರಮೇಶ್, ಕೂಡಲೇ ಅವರನ್ನು ಮಂಗಳೂರಿನ ಆಸ್ಪತ್ರೆಗೆ ಸೇರಿಸಿದ್ದರು. ಆದರೆ, ಅದಾಗಲೇ ಚಿಂತಾಜನಕ ಸ್ಥಿತಿಯಲ್ಲಿದ್ದ ಪ್ರಿಯಾ ಮಂಗಳವಾರ ಸಂಜೆ ಕೊನೆಯುಸಿರು ಎಳೆದಿದ್ದಾರೆ.
ಬಿಇಓ ಕಿರುಕುಳದ ಬಗ್ಗೆ ಶಿಕ್ಷಕಿ ಪ್ರಿಯಾ ಅವರಲ್ಲಿ ಪೊಲೀಸ್ ದೂರು ನೀಡುವಂತೆ ಶಿಕ್ಷಕರ ಸಂಘದ ಸದಸ್ಯರು ಸೇರಿದಂತೆ ಕುಟುಂಬಸ್ಥರು ಕೂಡ ಸಲಹೆ ಮಾಡಿದ್ದರು. ಆದರೆ, ಪೊಲೀಸ್ ದೂರು ನೀಡುವುದರಿಂದ ತನ್ನ ಉದ್ಯೋಗಕ್ಕೆ ತೊಂದರೆಯಾಗಬಹುದು. ಮೇಲಧಿಕಾರಿ ಆಗಿರುವುದರಿಂದ ಇನ್ನಷ್ಟು ಕಿರುಕುಳ ಆಗಬಹುದು ಎಂದು ಪ್ರಿಯಾ ದೂರು ಕೊಡದೆ ದೂರ ಉಳಿದಿದ್ದರು. ಬಿಇಓ ಕಿರುಕುಳದ ಬಗ್ಗೆ ಬಂಟ್ವಾಳ ಪೊಲೀಸರಿಗೂ ಮಾಹಿತಿ ನೀಡಲಾಗಿತ್ತು.
Puttur 38 year old teacher headmistress of school dies by suicide, BEO humiliation reason for suicide. Priya Kumari (38) who was in-charge headmistress of Haradi school here, died by suicide. Priya had tried to end her life on Monday December 13 morning by hanging herself at her home near Vittal by hanging herself. She had been taken to a private hospital in the city in serious condition.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm