ಪೊಲೀಸರ ಮೇಲೆ ಪಿಎಫ್ಐ ಕಾರ್ಯಕರ್ತರ ಹಲ್ಲೆಗೆ ವಿಹಿಂಪ ಖಂಡನೆ ; ಪಿಎಫ್ಐ ನಿಷೇಧಕ್ಕೆ ಒತ್ತಾಯ 

16-12-21 01:06 pm       HK Desk news   ಕರಾವಳಿ

ಉಪ್ಪಿನಂಗಡಿ ಠಾಣೆಗೆ ಮುತ್ತಿಗೆ ಹಾಕಿ, ಪೊಲೀಸರ ಮೇಲೆ ಹಲ್ಲೆ ನಡೆಸಿರುವ ಪಿಎಫ್ಐ ಕಾರ್ಯಕರ್ತರ ನಡೆಯನ್ನು ವಿಶ್ವ ಹಿಂದು ಪರಿಷತ್ ಖಂಡಿಸಿದ್ದು ಪಿಎಫ್ಐ ಸಂಘಟನೆಯನ್ನೇ ರಾಜ್ಯದಲ್ಲಿ ನಿಷೇಧಿಸಬೇಕೆಂದು ಆಗ್ರಹಿಸಿದೆ. 

ಮಂಗಳೂರು, ಡಿ.16 : ಉಪ್ಪಿನಂಗಡಿ ಠಾಣೆಗೆ ಮುತ್ತಿಗೆ ಹಾಕಿ, ಪೊಲೀಸರ ಮೇಲೆ ಹಲ್ಲೆ ನಡೆಸಿರುವ ಪಿಎಫ್ಐ ಕಾರ್ಯಕರ್ತರ ನಡೆಯನ್ನು ವಿಶ್ವ ಹಿಂದು ಪರಿಷತ್ ಖಂಡಿಸಿದ್ದು ಪಿಎಫ್ಐ ಸಂಘಟನೆಯನ್ನೇ ರಾಜ್ಯದಲ್ಲಿ ನಿಷೇಧಿಸಬೇಕೆಂದು ಆಗ್ರಹಿಸಿದೆ. 

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ವಿಹಿಂಪ ವಿಭಾಗ ಕಾರ್ಯದರ್ಶಿ ಶರಣ್ ಪಂಪ್ವೆಲ್, ಹಿಂದು ಮೀನು ಮಾರಾಟಗಾರರ ಮೇಲಿನ ಹಲ್ಲೆಗೆ ಸಂಬಂಧಿಸಿದ ಪ್ರಕರಣದಲ್ಲಿ ಪಿಎಫ್ಐ ಮುಖಂಡರನ್ನು ಪೊಲೀಸರು ಬಂಧಿಸಿದ್ದರು. ಇದನ್ನು ವಿರೋಧಿಸಿ ಪಿಎಫ್ಐ ಸಂಘಟನೆಯ ಕಾರ್ಯಕರ್ತರು ಪೊಲೀಸ್ ಠಾಣೆಯ ಮುಂದೆ ಪ್ರತಿಭಟನೆ ನಡೆಸಿದ್ದು ಪೊಲೀಸರ ಮೇಲೆಯೇ ಮಾರಾಕಾಸ್ತ್ರದಿಂದ ಹಲ್ಲೆ ನಡೆಸಿದ್ದಾರೆ. ತಮ್ಮ ಪ್ರಾಣದ ಹಂಗು ತೊರೆದು ಸಾರ್ವಜನಿಕರನ್ನು ರಕ್ಷಿಸುವ ಪೊಲೀಸ್ ಸಿಬ್ಬಂದಿಗಳ ಮೇಲೆ ದಾಳಿ ಮಾಡಿದ ಪ್ರತಿಯೊಬ್ಬನಿಗೂ ತಕ್ಕ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದ್ದಾರೆ. 

ದೇಶದ್ರೋಹಿ ಕೃತ್ಯವೆಸಗುತ್ತಿರುವ PFI ಮತೀಯ ಸಂಘಟನೆಯನ್ನು ಕರ್ನಾಟಕ ಸರ್ಕಾರ ತಕ್ಷಣ ಅಧಿವೇಶನ ನಡೆಯುತ್ತಿರುವ ಈ ಸಂದರ್ಭದಲ್ಲಿ ನಿಷೇಧ ಮಾಡಬೇಕು’ ಎಂದು ವಿಶ್ವ ಹಿಂದು ಪರಿಷತ್ ವಿಭಾಗ ಕಾರ್ಯದರ್ಶಿ ಶರಣ್ ಪಂಪುವೆಲ್ ಸರಕಾರವನ್ನು ಆಗ್ರಹಿಸಿದ್ದಾರೆ.

ಉಪ್ಪಿನಂಗಡಿ ಠಾಣೆ ಮುಂದೆ ಪಿಎಫ್ಐ ಧರಣಿ, ನಮಾಜ್ ಮಾಡಲು ಯತ್ನ ; ಗುಂಪುಗಳ ನಡುವೆ ಸಂಘರ್ಷ, ಕಲ್ಲು ತೂರಾಟ ! ಪೊಲೀಸರ ಲಾಠಿಚಾರ್ಜ್, 144 ಸೆಕ್ಷನ್ ಜಾರಿ, ಹಲವರಿಗೆ ಗಾಯ 

ಬೂದಿ ಮುಚ್ಚಿದ ಕೆಂಡ ಉಪ್ಪಿನಂಗಡಿ ; ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ವದಂತಿ, ನಾಲ್ಕು ತಾಲೂಕು ವ್ಯಾಪ್ತಿಗೆ 144 ಸೆಕ್ಷನ್ ವಿಸ್ತರಣೆ  

ಲಾಠಿಚಾರ್ಜ್ ಖಂಡಿಸಿ ಡಿ.17ರಂದು ಎಸ್ಪಿ ಕಚೇರಿಗೆ ಮುತ್ತಿಗೆ ; ಸುಳ್ಳು ಕೇಸಿನಲ್ಲಿ ಸಿಕ್ಕಿಸಿದರೆ ಬಿಡಲ್ಲ ಎಂದ ಪಿಎಫ್ಐ ಮುಖಂಡರು

ಆಂಬುಲೆನ್ಸ್ ನಲ್ಲಿ ಮಾರಕಾಯುಧ ತಂದಿಟ್ಟು ದಾಳಿ, ಡಿವೈಎಸ್ಪಿ, ಎಸ್ಐ, ಇನ್ಸ್ ಪೆಕ್ಟರ್ ಸೇರಿ ಹಲವರಿಗೆ ಗಾಯ ; ಇಲಾಖೆ ವಾಹನ ಧ್ವಂಸ, ಠಾಣೆಗೆ ಕಲ್ಲು ತೂರಿ ನುಗ್ಗಲು ಯತ್ನಿಸಿದ್ದ ಪುಂಡರು! 

The Vishwa Hindu Parishat on Wednesday urged the government to ban the Popular Front of India (PFI), whose activists allegedly attacked police personnel on Tuesday in Uppinangady. VHP divisional secretary Sharan Pumpwell in a statement here said attack on the police, who work hard day and night for the safety of people, was unpardonable. Police had secured a few PFI leaders in connection with the assault on two poor fish merchants in Uppinangady. However, PFI cadres indulged in rioting on Tuesday outside the police station demanding the release of the arrested persons, he said.