ಬ್ರೇಕಿಂಗ್ ನ್ಯೂಸ್
17-12-21 07:45 pm HK Desk news ಕರಾವಳಿ
ಮಂಗಳೂರು ಡಿ.17 : ರಾಜ್ಯ ರಸ್ತೆ ಸಾರಿಗೆ ನಿಗಮದ ಮಂಗಳೂರು ವಿಭಾಗದಿಂದ ಮಂಗಳೂರು-ಮುಂಬೈ (ಮಂಗಳೂರಿನಿಂದ ವಯಾ ಮೂಡಬಿದಿರೆ, ಕಾರ್ಕಳ, ನಿಟ್ಟೆ, ಬೆಳ್ಮಣ್ಣು, ಶಿರ್ವ, ಮಂಚಕಲ್, ಉಡುಪಿ, ಕುಂದಾಪುರ, ಭಟ್ಕಳ, ಅಂಕೋಲ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ನಿಪ್ಪಾಣಿ, ಕೊಲ್ಲಾಪುರ, ಸತಾರ, ಪೂನಾ ಮಾರ್ಗವಾಗಿ ಮುಂಬೈ) ಮಾರ್ಗದಲ್ಲಿ ವೋಲ್ವೋ ಮಲ್ಟಿ ಆಕ್ಸಲ್ ಸಾರಿಗೆಯು ಡಿ.12ರಿಂದ ಕಾರ್ಯಾಚರಣೆ ಆರಂಭಿಸಿದೆ.
ಈ ಸಾರಿಗೆಯು ಮಂಗಳೂರು ಬಸ್ ನಿಲ್ದಾಣದಿಂದ ಮಧ್ಯಾಹ್ನ 12.45 ಗಂಟೆಗೆ ಹೊರಟು ಮೂಡಬಿದಿರೆಗೆ 1.45ಕ್ಕೆ ತಲುಪಲಿದೆ. ಕಾರ್ಕಳದಿಂದ 2.15 ಕ್ಕೆ ಹೊರಟು ನಿಟ್ಟೆ, ಬೆಳ್ಮಣ್ಣು, ಶಿರ್ವ, ಮಂಚಕಲ್, ಉಡುಪಿ, ಕುಂದಾಪುರ, ಭಟ್ಕಳ, ಅಂಕೋಲ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ನಿಪ್ಪಾಣಿ, ಕೊಲ್ಲಾಪುರ, ಸತಾರ, ಪೂನಾ ಮಾರ್ಗವಾಗಿ ಮುಂಬೈಗೆ ಬೆಳಗ್ಗೆ 7 ಕ್ಕೆ ತಲುಪುತ್ತದೆ.
ಮರು ಪ್ರಯಾಣದಲ್ಲಿ ಮುಂಬೈಯಿಂದ ಮಧ್ಯಾಹ್ನ 12 ಗಂಟೆಗೆ ಹೊರಟು ಪೂನಾ, ಸತಾರ, ಕೊಲ್ಲಾಪುರ, ನಿಪ್ಪಾಣಿ, ಬೆಳಗಾವಿ, ಧಾರವಾಡ, ಹುಬ್ಬಳ್ಳಿ, ಅಂಕೋಲಾ, ಭಟ್ಕಳ, ಕುಂದಾಪುರ, ಉಡುಪಿ, ಶಿರ್ವ- ಮಂಚಕಲ್, ಬೆಳ್ಮಣ್ಣು, ನಿಟ್ಟೆ, ಕಾರ್ಕಳ ಬೆಳಗ್ಗೆ 6.30ಕ್ಕೆ ತಲುಪಲಿದೆ. ನಂತರ ಮೂಡಬಿದ್ರೆಯಿಂದ ಬೆಳಗ್ಗೆ 7ಕ್ಕೆ ಹೊರಟು ಮಂಗಳೂರಿಗೆ 8 ಗಂಟೆಗೆ ತಲುಪುತ್ತದೆ.
ಮಂಗಳೂರಿನಿಂದ ಮುಂಬೈಗೆ ಪ್ರತಿ ಪ್ರಯಾಣಿಕರಿಗೆ ಒಟ್ಟು ಪ್ರಯಾಣ ದರ 1,400 ರೂ.ಗಳು. ಪ್ರಯಾಣಿಕರಿಗೆ ಅವತಾರ್ ವ್ಯವಸ್ಥೆ ಮೂಲಕ ಮುಂಗಡ ಆಸನ ಕಾದಿರಿಸುವ ವ್ಯವಸ್ಥೆ ಕಲ್ಪಿಸಲಾಗಿದೆ. ಸಾರ್ವಜನಿಕರು ಕೆಎಸ್ಸಾರ್ಟಿಸಿ ವೈಬ್ ಸೈಟ್ ಅಥವಾ ಹತ್ತಿರದ ರಿಸರ್ವೇಶನ್ ಕೌಂಟರ್ ಅನ್ನು ಸಂಪರ್ಕಿಸಬಹುದು.
ಹೆಚ್ಚಿನ ಮಾಹಿತಿಗೆ ಮಂಗಳೂರು ಬಸ್ಸು ನಿಲ್ದಾಣ ಮೊ.ಸಂಖ್ಯೆ: 7760990720, ಮಂಗಳೂರು ಮುಂಗಡ ಬುಕ್ಕಿಂಗ್ ಕೌಂಟರ್ ಮೊ.ಸಂಖ್ಯೆ: 9663211553, ಉಡುಪಿ ಬಸ್ಸು ನಿಲ್ದಾಣ ಮೊ.ಸಂಖ್ಯೆ: 9663266400, ಕುಂದಾಪುರ ಬಸ್ಸು ನಿಲ್ದಾಣ ಮೊ.ಸಂಖ್ಯೆ: 9663266009 ಸಂಪರ್ಕಿಸಬಹುದು ಎಂದು ಮಂಗಳೂರು ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
KSRTC Mangalore to Mumbai Multi axle Volvo service resumes back after long gap.
07-09-25 07:43 pm
Bangalore Correspondent
Fine, Violation, Home Minister: ಮುಖ್ಯಸ್ಥರಿಗೂ...
07-09-25 10:17 am
Mandya Suicide, Marriage: ಮದುವೆ ಕ್ಯಾನ್ಸಲ್ ಆಗಿ...
07-09-25 10:11 am
Sirsi Airgun, Murder, Crime: ಶಿರಸಿ; ಏರ್ಗನ್ ಗ...
06-09-25 08:28 pm
Prathap Simha, Mysuru Dasara: ದಸರಾ ಕುಸ್ತಿ ; ಬ...
06-09-25 07:26 pm
07-09-25 08:33 pm
HK News Desk
UPI Transaction Limit: ಯುಪಿಐ ಪಾವತಿ ಮಿತಿ ಹೆಚ್ಚ...
06-09-25 10:34 am
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
07-09-25 11:24 pm
Mangalore Correspondent
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
Ullal, Mangalore Police: ಮೊದಲ ಪತ್ನಿಗೆ ಜೀವನಾಂಶ...
06-09-25 10:59 pm
07-09-25 03:34 pm
Mangalore Correspondent
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm