ಬ್ರೇಕಿಂಗ್ ನ್ಯೂಸ್
18-12-21 07:04 pm HK Desk news ಕರಾವಳಿ
ಮಂಗಳೂರು, ಡಿ.18 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಐದು ಮಂದಿಗೆ ಒಂದೇ ದಿನದಲ್ಲಿ ಕೊರೊನಾ ರೂಪಾಂತರಿ ಓಮಿಕ್ರಾನ್ ವೈರಸ್ ಪತ್ತೆಯಾಗಿದೆ. ಇದರೊಂದಿಗೆ ರಾಜ್ಯದಲ್ಲಿ ಓಮಿಕ್ರಾನ್ ಪೀಡಿತರ ಸಂಖ್ಯೆ 13ಕ್ಕೇರಿದೆ.
ಮಂಗಳೂರು ಹೊರವಲಯದ ವಸತಿ ಶಾಲೆಯ ನಾಲ್ವರು ಮಕ್ಕಳಲ್ಲಿ ಓಮಿಕ್ರಾನ್ ವೈರಸ್ ಪತ್ತೆಯಾಗಿರುವ ಬಗ್ಗೆ ಆರೋಗ್ಯ ಅಧಿಕಾರಿಗಳು ದೃಢಪಡಿಸಿದ್ದಾರೆ. ಇನ್ನೊಬ್ಬ ಕೇರಳ ಮೂಲದ ಮೆಡಿಕಲ್ ವಿದ್ಯಾರ್ಥಿನಿಯಲ್ಲಿ ಓಮಿಕ್ರಾನ್ ವೈರಸ್ ಪತ್ತೆಯಾಗಿದೆ. ಆಕೆ ಮಂಗಳೂರಿನಲ್ಲಿ ನರ್ಸಿಂಗ್ ವಿದ್ಯಾರ್ಥಿಯಾಗಿದ್ದಳು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್ ಆದವರನ್ನು ಪ್ರತಿ ದಿನವೂ ಓಮಿಕ್ರಾನ್ ವೈರಸ್ ಪತ್ತೆಗಾಗಿ ಜಿನೋಮ್ ಸೀಕ್ವೆನ್ಸಿಂಗ್ ಪರೀಕ್ಷೆಗೆ ಒಳಪಡಿಸಲಾಗುತ್ತದೆ. ಜಿನೋಮ್ ಸೀಕ್ವೆನ್ಸ್ ಪರೀಕ್ಷೆಯನ್ನು ಬೆಂಗಳೂರಿನಲ್ಲಿ ನಡೆಸಲಾಗುತ್ತಿದ್ದು, ಪ್ರತಿ ದಿನವೂ ಸೋಂಕಿತರ ಗಂಟಲ ದ್ರವದ ಮಾದರಿಯನ್ನು ಅಲ್ಲಿಗೆ ಕಳಿಸಿಕೊಡಲಾಗುತ್ತದೆ. ಹೀಗೆ ಕಳಿಸಿಕೊಟ್ಟಿದ್ದ ಐವರು ಸೋಂಕಿತರಲ್ಲಿ ಓಮಿಕ್ರಾನ್ ವೈರಸ್ ಇರುವುದು ಪತ್ತೆಯಾಗಿದೆ.
ವಸತಿ ಶಾಲೆಯ 14 ಮಂದಿ ವಿದ್ಯಾರ್ಥಿಗಳನ್ನು ಡಿ.10ರಂದು ಟೆಸ್ಟ್ ಮಾಡಿದ್ದಾಗ ಕೊರೊನಾ ಪಾಸಿಟಿವ್ ಕಂಡುಬಂದಿತ್ತು. ಅವರಲ್ಲಿ ನಾಲ್ವರಲ್ಲಿ ಓಮಿಕ್ರಾನ್ ಇರುವುದು ಕಂಡುಬಂದಿದೆ. ಆದರೆ, ಇವರಿಗೆ ಯಾವುದೇ ಟ್ರಾವೆಲ್ ಹಿಸ್ಟರಿ ಇಲ್ಲದಿರುವುದು ಸೋಂಕು ಹೇಗೆ ಕಂಡುಬಂದಿದೆ ಅನ್ನುವ ಬಗ್ಗೆ ಆರೋಗ್ಯಧಿಕಾರಿಗಳು ತಲೆಕೆಡಿಸಿಕೊಂಡಿದ್ದಾರೆ. ಮಕ್ಕಳು ಮಾತ್ರ ಆರೋಗ್ಯದಿಂದಿದ್ದಾರೆ ಅನ್ನುವ ಮಾಹಿತಿಯನ್ನು ಅಧಿಕಾರಿಗಳು ತಿಳಿಸಿದ್ದಾರೆ.
ಶುಕ್ರವಾರ ಓಮಿಕ್ರಾನ್ ಹೈರಿಸ್ಕ್ ಇರುವ ಘಾನಾ ದೇಶದಿಂದ ಬಂದಿದ್ದ ವ್ಯಕ್ತಿಯೊಬ್ಬರಲ್ಲಿ ಕೊರೊನಾ ಪಾಸಿಟಿವ್ ಕಂಡುಬಂದಿತ್ತು. ಆ ವ್ಯಕ್ತಿಯನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಗಂಟಲ ದ್ರವದ ಮಾದರಿಯನ್ನು ಬೆಂಗಳೂರಿಗೆ ಕಳಿಸಿಕೊಡಲಾಗಿತ್ತು.
Five Omicron cases detected in Mangalore, four in high school students.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
05-03-26 05:02 pm
HK News Staffer
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
05-03-26 04:36 pm
HK News Staffer
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm