ಬ್ರೇಕಿಂಗ್ ನ್ಯೂಸ್
18-12-21 07:04 pm HK Desk news ಕರಾವಳಿ
ಮಂಗಳೂರು, ಡಿ.18 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಐದು ಮಂದಿಗೆ ಒಂದೇ ದಿನದಲ್ಲಿ ಕೊರೊನಾ ರೂಪಾಂತರಿ ಓಮಿಕ್ರಾನ್ ವೈರಸ್ ಪತ್ತೆಯಾಗಿದೆ. ಇದರೊಂದಿಗೆ ರಾಜ್ಯದಲ್ಲಿ ಓಮಿಕ್ರಾನ್ ಪೀಡಿತರ ಸಂಖ್ಯೆ 13ಕ್ಕೇರಿದೆ.
ಮಂಗಳೂರು ಹೊರವಲಯದ ವಸತಿ ಶಾಲೆಯ ನಾಲ್ವರು ಮಕ್ಕಳಲ್ಲಿ ಓಮಿಕ್ರಾನ್ ವೈರಸ್ ಪತ್ತೆಯಾಗಿರುವ ಬಗ್ಗೆ ಆರೋಗ್ಯ ಅಧಿಕಾರಿಗಳು ದೃಢಪಡಿಸಿದ್ದಾರೆ. ಇನ್ನೊಬ್ಬ ಕೇರಳ ಮೂಲದ ಮೆಡಿಕಲ್ ವಿದ್ಯಾರ್ಥಿನಿಯಲ್ಲಿ ಓಮಿಕ್ರಾನ್ ವೈರಸ್ ಪತ್ತೆಯಾಗಿದೆ. ಆಕೆ ಮಂಗಳೂರಿನಲ್ಲಿ ನರ್ಸಿಂಗ್ ವಿದ್ಯಾರ್ಥಿಯಾಗಿದ್ದಳು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್ ಆದವರನ್ನು ಪ್ರತಿ ದಿನವೂ ಓಮಿಕ್ರಾನ್ ವೈರಸ್ ಪತ್ತೆಗಾಗಿ ಜಿನೋಮ್ ಸೀಕ್ವೆನ್ಸಿಂಗ್ ಪರೀಕ್ಷೆಗೆ ಒಳಪಡಿಸಲಾಗುತ್ತದೆ. ಜಿನೋಮ್ ಸೀಕ್ವೆನ್ಸ್ ಪರೀಕ್ಷೆಯನ್ನು ಬೆಂಗಳೂರಿನಲ್ಲಿ ನಡೆಸಲಾಗುತ್ತಿದ್ದು, ಪ್ರತಿ ದಿನವೂ ಸೋಂಕಿತರ ಗಂಟಲ ದ್ರವದ ಮಾದರಿಯನ್ನು ಅಲ್ಲಿಗೆ ಕಳಿಸಿಕೊಡಲಾಗುತ್ತದೆ. ಹೀಗೆ ಕಳಿಸಿಕೊಟ್ಟಿದ್ದ ಐವರು ಸೋಂಕಿತರಲ್ಲಿ ಓಮಿಕ್ರಾನ್ ವೈರಸ್ ಇರುವುದು ಪತ್ತೆಯಾಗಿದೆ.
ವಸತಿ ಶಾಲೆಯ 14 ಮಂದಿ ವಿದ್ಯಾರ್ಥಿಗಳನ್ನು ಡಿ.10ರಂದು ಟೆಸ್ಟ್ ಮಾಡಿದ್ದಾಗ ಕೊರೊನಾ ಪಾಸಿಟಿವ್ ಕಂಡುಬಂದಿತ್ತು. ಅವರಲ್ಲಿ ನಾಲ್ವರಲ್ಲಿ ಓಮಿಕ್ರಾನ್ ಇರುವುದು ಕಂಡುಬಂದಿದೆ. ಆದರೆ, ಇವರಿಗೆ ಯಾವುದೇ ಟ್ರಾವೆಲ್ ಹಿಸ್ಟರಿ ಇಲ್ಲದಿರುವುದು ಸೋಂಕು ಹೇಗೆ ಕಂಡುಬಂದಿದೆ ಅನ್ನುವ ಬಗ್ಗೆ ಆರೋಗ್ಯಧಿಕಾರಿಗಳು ತಲೆಕೆಡಿಸಿಕೊಂಡಿದ್ದಾರೆ. ಮಕ್ಕಳು ಮಾತ್ರ ಆರೋಗ್ಯದಿಂದಿದ್ದಾರೆ ಅನ್ನುವ ಮಾಹಿತಿಯನ್ನು ಅಧಿಕಾರಿಗಳು ತಿಳಿಸಿದ್ದಾರೆ.
ಶುಕ್ರವಾರ ಓಮಿಕ್ರಾನ್ ಹೈರಿಸ್ಕ್ ಇರುವ ಘಾನಾ ದೇಶದಿಂದ ಬಂದಿದ್ದ ವ್ಯಕ್ತಿಯೊಬ್ಬರಲ್ಲಿ ಕೊರೊನಾ ಪಾಸಿಟಿವ್ ಕಂಡುಬಂದಿತ್ತು. ಆ ವ್ಯಕ್ತಿಯನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಗಂಟಲ ದ್ರವದ ಮಾದರಿಯನ್ನು ಬೆಂಗಳೂರಿಗೆ ಕಳಿಸಿಕೊಡಲಾಗಿತ್ತು.
Five Omicron cases detected in Mangalore, four in high school students.
02-10-25 03:50 pm
Bangalore Correspondent
ಆರ್ ಸಿಬಿ ತಂಡ ಮಾರಾಟಕ್ಕಿಟ್ಟ ಯುನೈಟೆಡ್ ಸ್ಪಿರಿಟ್ಸ್...
02-10-25 02:28 pm
ಹಾಸನದ ನಿಗೂಢ ಸ್ಫೋಟದ ಬೆನ್ನತ್ತಿದ ಪೊಲೀಸರು ; ಸಿಡಿಮ...
01-10-25 10:06 pm
Dharmasthala Case: ಧರ್ಮಸ್ಥಳ ಪ್ರಕರಣ ; ಆದಷ್ಟು ಬ...
30-09-25 07:31 pm
Hassan Blast: ಹಾಸನದಲ್ಲಿ ಅನುಮಾನಾಸ್ಪದ ಸ್ಫೋಟ ; ನ...
30-09-25 04:00 pm
02-10-25 03:45 pm
HK News Desk
ಆರೆಸ್ಸೆಸ್ ಶತಮಾನೋತ್ಸವ ; ಭಾರತ ಮಾತೆಯ ಚಿತ್ರವಿರುವ...
01-10-25 09:44 pm
Cough Syrup Side Effects Suspected, Kidney Fa...
01-10-25 05:32 pm
ಮುಂಬೈ ಉಗ್ರ ದಾಳಿ ; 17 ವರ್ಷಗಳ ಬಳಿಕ ಪಿ. ಚಿದಂಬರಂ...
01-10-25 04:10 pm
ಫಸ್ಟ್ ನೈಟ್ ಅರ್ಜೆಂಟ್ ಮಾಡಂಗಿಲ್ಲ..! ಮದುಮಗಳ ರಾಗಕ್...
30-09-25 04:08 pm
02-10-25 11:05 pm
Mangalore Correspondent
Illegal Slaughterhouse in Mangalore: ಬೆನ್ನು ಬ...
02-10-25 10:43 pm
D.K. Shivakumar, Mangaluru Dasara: ದೇವರೇ ನನ್ನ...
02-10-25 11:43 am
Mangalore, Pilinalike 2025: ಪಿಲಿನಲಿಕೆ ಉತ್ಸವಕ್...
01-10-25 11:00 pm
Jayanth, Chinnayya, Dharmasthala Case: ಚಿನ್ನಯ...
01-10-25 04:45 pm
01-10-25 02:39 pm
Mangalore Correspondent
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm
ವಾಟ್ಸಪ್ ಮೆಸೇಜ್ ನಂಬಿ ಷೇರು ಮಾರುಕಟ್ಟೆ ಹೂಡಿಕೆ ; ನ...
28-09-25 05:04 pm
ಉಡುಪಿ ಬಸ್ ಚಾಲಕ ಸೈಫುದ್ದೀನ್ ಸ್ನೇಹಿತರಿಂದಲೇ ಕೊಲೆ...
28-09-25 04:57 pm