ಬ್ರೇಕಿಂಗ್ ನ್ಯೂಸ್
18-12-21 07:04 pm HK Desk news ಕರಾವಳಿ
ಮಂಗಳೂರು, ಡಿ.18 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಐದು ಮಂದಿಗೆ ಒಂದೇ ದಿನದಲ್ಲಿ ಕೊರೊನಾ ರೂಪಾಂತರಿ ಓಮಿಕ್ರಾನ್ ವೈರಸ್ ಪತ್ತೆಯಾಗಿದೆ. ಇದರೊಂದಿಗೆ ರಾಜ್ಯದಲ್ಲಿ ಓಮಿಕ್ರಾನ್ ಪೀಡಿತರ ಸಂಖ್ಯೆ 13ಕ್ಕೇರಿದೆ.
ಮಂಗಳೂರು ಹೊರವಲಯದ ವಸತಿ ಶಾಲೆಯ ನಾಲ್ವರು ಮಕ್ಕಳಲ್ಲಿ ಓಮಿಕ್ರಾನ್ ವೈರಸ್ ಪತ್ತೆಯಾಗಿರುವ ಬಗ್ಗೆ ಆರೋಗ್ಯ ಅಧಿಕಾರಿಗಳು ದೃಢಪಡಿಸಿದ್ದಾರೆ. ಇನ್ನೊಬ್ಬ ಕೇರಳ ಮೂಲದ ಮೆಡಿಕಲ್ ವಿದ್ಯಾರ್ಥಿನಿಯಲ್ಲಿ ಓಮಿಕ್ರಾನ್ ವೈರಸ್ ಪತ್ತೆಯಾಗಿದೆ. ಆಕೆ ಮಂಗಳೂರಿನಲ್ಲಿ ನರ್ಸಿಂಗ್ ವಿದ್ಯಾರ್ಥಿಯಾಗಿದ್ದಳು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್ ಆದವರನ್ನು ಪ್ರತಿ ದಿನವೂ ಓಮಿಕ್ರಾನ್ ವೈರಸ್ ಪತ್ತೆಗಾಗಿ ಜಿನೋಮ್ ಸೀಕ್ವೆನ್ಸಿಂಗ್ ಪರೀಕ್ಷೆಗೆ ಒಳಪಡಿಸಲಾಗುತ್ತದೆ. ಜಿನೋಮ್ ಸೀಕ್ವೆನ್ಸ್ ಪರೀಕ್ಷೆಯನ್ನು ಬೆಂಗಳೂರಿನಲ್ಲಿ ನಡೆಸಲಾಗುತ್ತಿದ್ದು, ಪ್ರತಿ ದಿನವೂ ಸೋಂಕಿತರ ಗಂಟಲ ದ್ರವದ ಮಾದರಿಯನ್ನು ಅಲ್ಲಿಗೆ ಕಳಿಸಿಕೊಡಲಾಗುತ್ತದೆ. ಹೀಗೆ ಕಳಿಸಿಕೊಟ್ಟಿದ್ದ ಐವರು ಸೋಂಕಿತರಲ್ಲಿ ಓಮಿಕ್ರಾನ್ ವೈರಸ್ ಇರುವುದು ಪತ್ತೆಯಾಗಿದೆ.
ವಸತಿ ಶಾಲೆಯ 14 ಮಂದಿ ವಿದ್ಯಾರ್ಥಿಗಳನ್ನು ಡಿ.10ರಂದು ಟೆಸ್ಟ್ ಮಾಡಿದ್ದಾಗ ಕೊರೊನಾ ಪಾಸಿಟಿವ್ ಕಂಡುಬಂದಿತ್ತು. ಅವರಲ್ಲಿ ನಾಲ್ವರಲ್ಲಿ ಓಮಿಕ್ರಾನ್ ಇರುವುದು ಕಂಡುಬಂದಿದೆ. ಆದರೆ, ಇವರಿಗೆ ಯಾವುದೇ ಟ್ರಾವೆಲ್ ಹಿಸ್ಟರಿ ಇಲ್ಲದಿರುವುದು ಸೋಂಕು ಹೇಗೆ ಕಂಡುಬಂದಿದೆ ಅನ್ನುವ ಬಗ್ಗೆ ಆರೋಗ್ಯಧಿಕಾರಿಗಳು ತಲೆಕೆಡಿಸಿಕೊಂಡಿದ್ದಾರೆ. ಮಕ್ಕಳು ಮಾತ್ರ ಆರೋಗ್ಯದಿಂದಿದ್ದಾರೆ ಅನ್ನುವ ಮಾಹಿತಿಯನ್ನು ಅಧಿಕಾರಿಗಳು ತಿಳಿಸಿದ್ದಾರೆ.
ಶುಕ್ರವಾರ ಓಮಿಕ್ರಾನ್ ಹೈರಿಸ್ಕ್ ಇರುವ ಘಾನಾ ದೇಶದಿಂದ ಬಂದಿದ್ದ ವ್ಯಕ್ತಿಯೊಬ್ಬರಲ್ಲಿ ಕೊರೊನಾ ಪಾಸಿಟಿವ್ ಕಂಡುಬಂದಿತ್ತು. ಆ ವ್ಯಕ್ತಿಯನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಗಂಟಲ ದ್ರವದ ಮಾದರಿಯನ್ನು ಬೆಂಗಳೂರಿಗೆ ಕಳಿಸಿಕೊಡಲಾಗಿತ್ತು.
Five Omicron cases detected in Mangalore, four in high school students.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
07-09-26 01:22 pm
HK News Staffer
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
07-09-26 04:09 pm
HK News Staffer
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm
ಪರವಾನಗಿ ಇಲ್ಲದೆ ಔಷಧಿ ದಾಸ್ತಾನು ; ಬೆಂಗಳೂರಿನ ಅಮೆಜ...
06-09-26 10:28 pm
ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಆರೋಪ ; ಹೈಕೋರ್ಟಿಗೆ...
06-09-26 06:11 pm