ಬ್ರೇಕಿಂಗ್ ನ್ಯೂಸ್
19-12-21 08:53 pm HK Desk news ಕರಾವಳಿ
Photo credits : Headline Karnataka
ಮಂಗಳೂರು, ಡಿ.19: ಕುಡಿದ ಮತ್ತಿನಲ್ಲಿ ಕಾರು ಓಡಿಸಿಕೊಂಡು ಬಂದ ಯುವಕನೊಬ್ಬ ಬಸ್ ನಿಲ್ದಾಣಕ್ಕೆ ನುಗ್ಗಿಸಿದ ಘಟನೆ ನಗರದಲ್ಲಿ ನಡೆದಿದ್ದು ಅಲ್ಲಿದ್ದ ಮಹಿಳೆಯರು, ಯುವತಿಯರು ಸಾವಿನ ದವಡೆಯಿಂದ ಕೂದಲೆಳೆಯಲ್ಲಿ ಪಾರಾಗಿದ್ದಾರೆ. ಭಾನುವಾರ ಸಂಜೆ ಏಳು ಗಂಟೆ ಸುಮಾರಿಗೆ ನಗರದ ಶಿವಭಾಗ್ ಪೆಟ್ರೋಲ್ ಪಂಪ್ ಮುಂಭಾಗದ ಬಸ್ ನಿಲ್ದಾಣದಲ್ಲಿ ಘಟನೆ ನಡೆದಿದೆ.
ಕದ್ರಿ ಮಲ್ಲಿಕಟ್ಟೆ ಕಡೆಯಿಂದ ಕೆಂಪು ಡಸ್ಟರ್ ಕಾರು ವೇಗವಾಗಿ ಧಾವಿಸಿ ಬಂದಿದ್ದು ನಂತೂರು ಭಾಗದತ್ತ ತೆರಳುವಾಗ ರಸ್ತೆ ಬಿಟ್ಟು ಹೊರಕ್ಕೆ ಚಲಿಸಿದೆ. ಕಾರು ಧಾವಂತದಿಂದ ಎಡಭಾಗದಲ್ಲಿದ್ದ ಬಸ್ ನಿಲ್ದಾಣಕ್ಕೆ ನುಗ್ಗಿದ್ದು ಅಲ್ಲಿದ್ದ ಮಹಿಳೆಯರು ಕಾರನ್ನು ನೋಡಿ ದೂರಕ್ಕೆ ಓಡಿದ್ದಾರೆ. ಅದರಲ್ಲೂ 25 ವರ್ಷದ ಯುವತಿಯೊಬ್ಬಳು ಕಾರಿನಡಿಗೆ ಬೀಳುವುದನ್ನು ಮಹಿಳೆಯೊಬ್ಬರು ತನ್ನತ್ತ ಎಳೆದು ತಪ್ಪಿಸಿದ್ದಾರೆ.


ಕಾರು ರಸ್ತೆಯಿಂದ ಹೊರಕ್ಕೆ ಹರಿದು ಅಪಘಾತವಾಗಿದ್ದು ತಿಳಿಯುತ್ತಲೇ ಅದರಲ್ಲಿದ್ದ ವ್ಯಕ್ತಿ ಕಾರಿನಿಂದ ಇಳಿದು ಹೋಗಿದ್ದಾನೆ. ಬಳಿಕ ಜನರು ಜಮಾಯಿಸಿದ್ದು ಕದ್ರಿ ಸಂಚಾರಿ ಪೊಲೀಸರು ಕೂಡ ಸ್ಥಳಕ್ಕೆ ಆಗಮಿಸಿದ್ದಾರೆ. ಕಾರನ್ನು ವಶಕ್ಕೆ ಪಡೆದಿದ್ದಾರೆ. ಆದರೆ ಕಾರು ಚಾಲಕ ಅಲ್ಲಿಂದ ನಾಪತ್ತೆಯಾಗಿದ್ದ.


ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿದ್ದು ಭಾರೀ ಅನಾಹುತ ಅಕಸ್ಮಾತ್ ತಪ್ಪಿ ಹೋಗಿದೆ. ಪೊಲೀಸರು ಕಾರಿನ ಚಾಲಕನನ್ನು ಪತ್ತೆ ಮಾಡುತ್ತಾರೋ, ಅಲ್ಲಿಗೇ ಬಿಟ್ಟು ಬಿಡುತ್ತಾರೋ ಗೊತ್ತಿಲ್ಲ. ಸ್ಥಳೀಯರೊಬ್ಬರು ಫೋಟೊ ತೆಗೆದು ಹೆಡ್ ಲೈನ್ ಕರ್ನಾಟಕದ ಗಮನಕ್ಕೆ ತಂದಿದ್ದಾರೆ. ಭಾನುವಾರ ಆಗಿದ್ದರಿಂದ ಬಸ್ ನಿಲ್ದಾಣದಲ್ಲಿ ಹೆಚ್ಚು ಜನ ಇರಲಿಲ್ಲ. ಇತರೇ ದಿನಗಳಾಗಿರುತ್ತಿದ್ದರೆ ಜನ ಸಂದಣಿ ಹೆಚ್ಚಿರುತ್ತಿತ್ತು. ಅಪಾಯ ಆಗುತ್ತಿತ್ತು ಎಂದು ತಿಳಿಸಿದ್ದಾರೆ.
Drunken car Driver rams Duster car into bus stand at Shivabagh Kadri in Mangalore, passengers escape uninjured. The car owner flee away from the spot after the accident. Kadri police rush to the spot and are investigating the case.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm