ಬ್ರೇಕಿಂಗ್ ನ್ಯೂಸ್
22-12-21 10:17 pm HK Desk news ಕರಾವಳಿ
ಉಡುಪಿ, ಡಿ.22 : ಉಡುಪಿ ಮಲ್ಲಿಗೆ ಅಂದರೆ ಕರಾವಳಿಯಲ್ಲಿ ಶಂಕರಪುರ ಮಲ್ಲಿಗೆ ಭಾರೀ ಫೇಮಸ್. ಆದರೆ ಈ ಬಾರಿ ಉಡುಪಿ ಮಲ್ಲಿಗೆಯ ದರ ಕೈಸುಡುವಷ್ಟರ ಮಟ್ಟಿಗೆ ಹೋಗಿದೆ. ಉಡುಪಿ ಮಲ್ಲಿಗೆಯ ದರವನ್ನು ಡಿಸೆಂಬರ್ 23ರಿಂದ ಅನ್ವಯವಾಗುವಂತೆ ಮಲ್ಲಿಗೆ ಹೂವಿನ ಅಟ್ಟಿಗೆ (3200 ಬಿಡಿ ಹೂವು) ಬರೋಬ್ಬರಿ 2,100 ರೂ.ಗಳಿಗೆ ಏರಿಸಿದೆ.
ಉಡುಪಿ ಜಿಲ್ಲೆಯಲ್ಲಿ ಸುಮಾರು ಹತ್ತು ಸಾವಿರ ಕುಟುಂಬಗಳು ಮಲ್ಲಿಗೆ ಬೆಳೆಯನ್ನು ನಂಬಿ ಜೀವನ ನಡೆಸುತ್ತಿದೆ. ಪ್ರಸಕ್ತ ಹವಾಮಾನ ವೈಪರೀತ್ಯ ಸ್ಥಿತಿಯಲ್ಲಿ ಮಲ್ಲಿಗೆ ಬೆಳೆಗಾರ ಕುಟುಂಬಗಳು, ಗಿಡಗಳು ಹಾನಿಗೊಳಗಾಗಿ ಹೂವಿನ ಇಳುವರಿ ಕುಂಠಿತವಾಗಿದ್ದು ತೀರಾ ಸಂಕಷ್ಟ ಸ್ಥಿತಿಯಲ್ಲಿವೆ. ಇದರ ಜತೆಯಲ್ಲಿ ನಿರ್ವಹಣಾ ವೆಚ್ಚ, ಸಾಗಾಟದ ವೆಚ್ಚಗಳೂ ಏರಿರುವ ಹಿನ್ನೆಲೆಯಲ್ಲಿ ಮಲ್ಲಿಗೆ ಹೂವಿನ ದರವನ್ನು ನಿಶ್ಚಿತವಾಗಿ ಏರಿಸಲಾಗಿದೆ ಎಂದು ಮಲ್ಲಿಗೆ ವರ್ತಕರ ಸಂಘದ ದರ ನಿಗದಿ ಕೇಂದ್ರವು ಅಭಿಪ್ರಾಯ ಪಟ್ಟಿದೆ.
ಎಲ್ಲೆಡೆ ವ್ಯಾಪಾರಿಗಳು, ದಲ್ಲಾಳಿಗಳು ಸೇರಿ ಕೃಷಿಕರನ್ನು ಶೋಷಣೆ ಮಾಡುತ್ತಾರೆ. ತಮ್ಮ ಹಿತಾಸಕ್ತಿ ಸಾಧನೆಗಾಗಿ ಕೃಷಿಕರನ್ನು ಬಳಸಿ ಕೊಳ್ಳುತ್ತಾರೆ. ಇದರ ನಡುವೆ ಉಡುಪಿ ಮಲ್ಲಿಗೆ ದರ ನಿಗದಿ ಕೇಂದ್ರವು ಕೃಷಿಕರ ಹಿತಾಸಕ್ತಿಯನ್ನೇ ಮಾನದಂಡವಾಗಿಟ್ಟುಕೊಂಡು, ಮಲ್ಲಿಗೆ ಬೆಳೆಗಾರರಿಂದ ಹಿಡಿದು, ಹೂವನ್ನು ಕೊಯ್ದು, ಸಂಗ್ರಹ ಮಾಡಿ ಮಾರುಕಟ್ಟೆಗೆ ಒಯ್ಯುವ ತನಕದ ಎಲ್ಲರ ಹಿತಾಸಕ್ತಿಯನ್ನು ಕಾಪಾಡುವ ದೃಷ್ಟಿಯಿಂದ ದರ ಏರಿಸಿದೆ.
ಯಾವುದೇ ಹೂವಿನ ಮಾರುಕಟ್ಟೆಗಳಿಗೆ ಹೋಲಿಸಿದರೆ ದೇಶಕ್ಕೇ ಮಾದರಿಯಾಗಿ, ಕಳೆದ 80 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿರುವ ಉಡುಪಿ ಮಲ್ಲಿಗೆ ದರ ನಿಗದಿ ಕೇಂದ್ರವು ಯಾವುದೇ ಒಳ ಒಪ್ಪಂದಗಳಿಲ್ಲದೆ ಅತ್ಯಂತ ಪಾರದರ್ಶಕವಾಗಿ, ಸರ್ವಸಮ್ಮತವಾಗಿ ಕೆಲಸ ನಿರ್ವಹಿಸುತ್ತಿರುವುದು ಸಂತೋಷದ ವಿಷಯ ಎಂದು ಜಿಲ್ಲಾ ಕೃಷಿಕ ಸಂಘದ ಅಧ್ಯಕ್ಷ ರಾಮಕೃಷ್ಣ ಶರ್ಮ ಬಂಟಕಲ್ಲು ತಿಳಿಸಿದ್ದಾರೆ.
Udupi Jasmine flower rate will go rocket high from Dec 23rd. The fixed price will be 2,100 Rs.
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
08-11-25 04:08 pm
Mangaluru Staff
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm