ಬ್ರೇಕಿಂಗ್ ನ್ಯೂಸ್
22-12-21 10:17 pm HK Desk news ಕರಾವಳಿ
ಉಡುಪಿ, ಡಿ.22 : ಉಡುಪಿ ಮಲ್ಲಿಗೆ ಅಂದರೆ ಕರಾವಳಿಯಲ್ಲಿ ಶಂಕರಪುರ ಮಲ್ಲಿಗೆ ಭಾರೀ ಫೇಮಸ್. ಆದರೆ ಈ ಬಾರಿ ಉಡುಪಿ ಮಲ್ಲಿಗೆಯ ದರ ಕೈಸುಡುವಷ್ಟರ ಮಟ್ಟಿಗೆ ಹೋಗಿದೆ. ಉಡುಪಿ ಮಲ್ಲಿಗೆಯ ದರವನ್ನು ಡಿಸೆಂಬರ್ 23ರಿಂದ ಅನ್ವಯವಾಗುವಂತೆ ಮಲ್ಲಿಗೆ ಹೂವಿನ ಅಟ್ಟಿಗೆ (3200 ಬಿಡಿ ಹೂವು) ಬರೋಬ್ಬರಿ 2,100 ರೂ.ಗಳಿಗೆ ಏರಿಸಿದೆ.
ಉಡುಪಿ ಜಿಲ್ಲೆಯಲ್ಲಿ ಸುಮಾರು ಹತ್ತು ಸಾವಿರ ಕುಟುಂಬಗಳು ಮಲ್ಲಿಗೆ ಬೆಳೆಯನ್ನು ನಂಬಿ ಜೀವನ ನಡೆಸುತ್ತಿದೆ. ಪ್ರಸಕ್ತ ಹವಾಮಾನ ವೈಪರೀತ್ಯ ಸ್ಥಿತಿಯಲ್ಲಿ ಮಲ್ಲಿಗೆ ಬೆಳೆಗಾರ ಕುಟುಂಬಗಳು, ಗಿಡಗಳು ಹಾನಿಗೊಳಗಾಗಿ ಹೂವಿನ ಇಳುವರಿ ಕುಂಠಿತವಾಗಿದ್ದು ತೀರಾ ಸಂಕಷ್ಟ ಸ್ಥಿತಿಯಲ್ಲಿವೆ. ಇದರ ಜತೆಯಲ್ಲಿ ನಿರ್ವಹಣಾ ವೆಚ್ಚ, ಸಾಗಾಟದ ವೆಚ್ಚಗಳೂ ಏರಿರುವ ಹಿನ್ನೆಲೆಯಲ್ಲಿ ಮಲ್ಲಿಗೆ ಹೂವಿನ ದರವನ್ನು ನಿಶ್ಚಿತವಾಗಿ ಏರಿಸಲಾಗಿದೆ ಎಂದು ಮಲ್ಲಿಗೆ ವರ್ತಕರ ಸಂಘದ ದರ ನಿಗದಿ ಕೇಂದ್ರವು ಅಭಿಪ್ರಾಯ ಪಟ್ಟಿದೆ.
ಎಲ್ಲೆಡೆ ವ್ಯಾಪಾರಿಗಳು, ದಲ್ಲಾಳಿಗಳು ಸೇರಿ ಕೃಷಿಕರನ್ನು ಶೋಷಣೆ ಮಾಡುತ್ತಾರೆ. ತಮ್ಮ ಹಿತಾಸಕ್ತಿ ಸಾಧನೆಗಾಗಿ ಕೃಷಿಕರನ್ನು ಬಳಸಿ ಕೊಳ್ಳುತ್ತಾರೆ. ಇದರ ನಡುವೆ ಉಡುಪಿ ಮಲ್ಲಿಗೆ ದರ ನಿಗದಿ ಕೇಂದ್ರವು ಕೃಷಿಕರ ಹಿತಾಸಕ್ತಿಯನ್ನೇ ಮಾನದಂಡವಾಗಿಟ್ಟುಕೊಂಡು, ಮಲ್ಲಿಗೆ ಬೆಳೆಗಾರರಿಂದ ಹಿಡಿದು, ಹೂವನ್ನು ಕೊಯ್ದು, ಸಂಗ್ರಹ ಮಾಡಿ ಮಾರುಕಟ್ಟೆಗೆ ಒಯ್ಯುವ ತನಕದ ಎಲ್ಲರ ಹಿತಾಸಕ್ತಿಯನ್ನು ಕಾಪಾಡುವ ದೃಷ್ಟಿಯಿಂದ ದರ ಏರಿಸಿದೆ.
ಯಾವುದೇ ಹೂವಿನ ಮಾರುಕಟ್ಟೆಗಳಿಗೆ ಹೋಲಿಸಿದರೆ ದೇಶಕ್ಕೇ ಮಾದರಿಯಾಗಿ, ಕಳೆದ 80 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿರುವ ಉಡುಪಿ ಮಲ್ಲಿಗೆ ದರ ನಿಗದಿ ಕೇಂದ್ರವು ಯಾವುದೇ ಒಳ ಒಪ್ಪಂದಗಳಿಲ್ಲದೆ ಅತ್ಯಂತ ಪಾರದರ್ಶಕವಾಗಿ, ಸರ್ವಸಮ್ಮತವಾಗಿ ಕೆಲಸ ನಿರ್ವಹಿಸುತ್ತಿರುವುದು ಸಂತೋಷದ ವಿಷಯ ಎಂದು ಜಿಲ್ಲಾ ಕೃಷಿಕ ಸಂಘದ ಅಧ್ಯಕ್ಷ ರಾಮಕೃಷ್ಣ ಶರ್ಮ ಬಂಟಕಲ್ಲು ತಿಳಿಸಿದ್ದಾರೆ.
Udupi Jasmine flower rate will go rocket high from Dec 23rd. The fixed price will be 2,100 Rs.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
12-07-26 10:13 pm
HK News Staffer
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಕೊನೆಗೂ ಎನ್ಐ...
12-07-26 02:16 pm
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm