ಬ್ರೇಕಿಂಗ್ ನ್ಯೂಸ್
22-12-21 10:17 pm HK Desk news ಕರಾವಳಿ
ಉಡುಪಿ, ಡಿ.22 : ಉಡುಪಿ ಮಲ್ಲಿಗೆ ಅಂದರೆ ಕರಾವಳಿಯಲ್ಲಿ ಶಂಕರಪುರ ಮಲ್ಲಿಗೆ ಭಾರೀ ಫೇಮಸ್. ಆದರೆ ಈ ಬಾರಿ ಉಡುಪಿ ಮಲ್ಲಿಗೆಯ ದರ ಕೈಸುಡುವಷ್ಟರ ಮಟ್ಟಿಗೆ ಹೋಗಿದೆ. ಉಡುಪಿ ಮಲ್ಲಿಗೆಯ ದರವನ್ನು ಡಿಸೆಂಬರ್ 23ರಿಂದ ಅನ್ವಯವಾಗುವಂತೆ ಮಲ್ಲಿಗೆ ಹೂವಿನ ಅಟ್ಟಿಗೆ (3200 ಬಿಡಿ ಹೂವು) ಬರೋಬ್ಬರಿ 2,100 ರೂ.ಗಳಿಗೆ ಏರಿಸಿದೆ.
ಉಡುಪಿ ಜಿಲ್ಲೆಯಲ್ಲಿ ಸುಮಾರು ಹತ್ತು ಸಾವಿರ ಕುಟುಂಬಗಳು ಮಲ್ಲಿಗೆ ಬೆಳೆಯನ್ನು ನಂಬಿ ಜೀವನ ನಡೆಸುತ್ತಿದೆ. ಪ್ರಸಕ್ತ ಹವಾಮಾನ ವೈಪರೀತ್ಯ ಸ್ಥಿತಿಯಲ್ಲಿ ಮಲ್ಲಿಗೆ ಬೆಳೆಗಾರ ಕುಟುಂಬಗಳು, ಗಿಡಗಳು ಹಾನಿಗೊಳಗಾಗಿ ಹೂವಿನ ಇಳುವರಿ ಕುಂಠಿತವಾಗಿದ್ದು ತೀರಾ ಸಂಕಷ್ಟ ಸ್ಥಿತಿಯಲ್ಲಿವೆ. ಇದರ ಜತೆಯಲ್ಲಿ ನಿರ್ವಹಣಾ ವೆಚ್ಚ, ಸಾಗಾಟದ ವೆಚ್ಚಗಳೂ ಏರಿರುವ ಹಿನ್ನೆಲೆಯಲ್ಲಿ ಮಲ್ಲಿಗೆ ಹೂವಿನ ದರವನ್ನು ನಿಶ್ಚಿತವಾಗಿ ಏರಿಸಲಾಗಿದೆ ಎಂದು ಮಲ್ಲಿಗೆ ವರ್ತಕರ ಸಂಘದ ದರ ನಿಗದಿ ಕೇಂದ್ರವು ಅಭಿಪ್ರಾಯ ಪಟ್ಟಿದೆ.
ಎಲ್ಲೆಡೆ ವ್ಯಾಪಾರಿಗಳು, ದಲ್ಲಾಳಿಗಳು ಸೇರಿ ಕೃಷಿಕರನ್ನು ಶೋಷಣೆ ಮಾಡುತ್ತಾರೆ. ತಮ್ಮ ಹಿತಾಸಕ್ತಿ ಸಾಧನೆಗಾಗಿ ಕೃಷಿಕರನ್ನು ಬಳಸಿ ಕೊಳ್ಳುತ್ತಾರೆ. ಇದರ ನಡುವೆ ಉಡುಪಿ ಮಲ್ಲಿಗೆ ದರ ನಿಗದಿ ಕೇಂದ್ರವು ಕೃಷಿಕರ ಹಿತಾಸಕ್ತಿಯನ್ನೇ ಮಾನದಂಡವಾಗಿಟ್ಟುಕೊಂಡು, ಮಲ್ಲಿಗೆ ಬೆಳೆಗಾರರಿಂದ ಹಿಡಿದು, ಹೂವನ್ನು ಕೊಯ್ದು, ಸಂಗ್ರಹ ಮಾಡಿ ಮಾರುಕಟ್ಟೆಗೆ ಒಯ್ಯುವ ತನಕದ ಎಲ್ಲರ ಹಿತಾಸಕ್ತಿಯನ್ನು ಕಾಪಾಡುವ ದೃಷ್ಟಿಯಿಂದ ದರ ಏರಿಸಿದೆ.
ಯಾವುದೇ ಹೂವಿನ ಮಾರುಕಟ್ಟೆಗಳಿಗೆ ಹೋಲಿಸಿದರೆ ದೇಶಕ್ಕೇ ಮಾದರಿಯಾಗಿ, ಕಳೆದ 80 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿರುವ ಉಡುಪಿ ಮಲ್ಲಿಗೆ ದರ ನಿಗದಿ ಕೇಂದ್ರವು ಯಾವುದೇ ಒಳ ಒಪ್ಪಂದಗಳಿಲ್ಲದೆ ಅತ್ಯಂತ ಪಾರದರ್ಶಕವಾಗಿ, ಸರ್ವಸಮ್ಮತವಾಗಿ ಕೆಲಸ ನಿರ್ವಹಿಸುತ್ತಿರುವುದು ಸಂತೋಷದ ವಿಷಯ ಎಂದು ಜಿಲ್ಲಾ ಕೃಷಿಕ ಸಂಘದ ಅಧ್ಯಕ್ಷ ರಾಮಕೃಷ್ಣ ಶರ್ಮ ಬಂಟಕಲ್ಲು ತಿಳಿಸಿದ್ದಾರೆ.
Udupi Jasmine flower rate will go rocket high from Dec 23rd. The fixed price will be 2,100 Rs.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
07-09-26 01:22 pm
HK News Staffer
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
07-09-26 04:09 pm
HK News Staffer
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm
ಪರವಾನಗಿ ಇಲ್ಲದೆ ಔಷಧಿ ದಾಸ್ತಾನು ; ಬೆಂಗಳೂರಿನ ಅಮೆಜ...
06-09-26 10:28 pm
ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಆರೋಪ ; ಹೈಕೋರ್ಟಿಗೆ...
06-09-26 06:11 pm