ಬ್ರೇಕಿಂಗ್ ನ್ಯೂಸ್
23-12-21 06:49 pm Mangalore Correspondent ಕರಾವಳಿ
ಉಳ್ಳಾಲ, ಡಿ.23 : ಮಾಡೂರಿನ ನೀರಿನ ಟ್ಯಾಂಕಿ ಬಳಿಯ ತ್ಯಾಜ್ಯ ವಿಲೇವಾರಿ ಘಟಕ ತೆರವುಗೊಳಿಸದಿದ್ದರೆ ಡಿ.27 ರಂದು ನಡೆಯುವ ಕೋಟೆಕಾರು ಪಟ್ಟಣ ಪಂಚಾಯತ್ ಚುನಾವಣೆಯನ್ನ ಬಹಿಷ್ಕರಿಸಲು ನಾಗರಿಕರು ನಿರ್ಧರಿಸಿದ್ದಾರೆ.
ಮಾಡೂರಿನ ನೀರಿನ ಟ್ಯಾಂಕಿ ಬಳಿ ಇಂದು ಸ್ಥಳೀಯ ನಾಲ್ಕು ವಾರ್ಡಿನ ನಾಗರಿಕರು ಪ್ರತಿಭಟನೆ ನಡೆಸಿದ್ದು ಕೋಟೆಕಾರು ಪಟ್ಟಣ ಪಂಚಾಯತ್ ಗೆ ಬಿಸಿ ಮುಟ್ಟಿಸಿದ್ದಾರೆ. ಪಟ್ಟಣ ವ್ಯಾಪ್ತಿಯ 17 ವಾರ್ಡಿನ ತ್ಯಾಜ್ಯವನ್ನೆಲ್ಲಾ ಮಾಡೂರಿನ ನೀರಿನ ಟ್ಯಾಂಕ್ ಪ್ರದೇಶದ ರಸ್ತೆ ಬದಿಯಲ್ಲಿ ಸುರಿಯುತ್ತಿದ್ದು ಕೇವಲ ಹಸಿ ಕಸವನ್ನಷ್ಟೇ ಇಲ್ಲಿಂದ ವಿಲೇವಾರಿ ನಡೆಸುತ್ತಿದ್ದಾರೆ. ಉಳಿದ ಪ್ಲಾಸ್ಟಿಕ್ ತ್ಯಾಜ್ಯ, ಪ್ಯಾಂಪರ್ಸ್, ನ್ಯಾಪ್ ಕಿನ್ ಪ್ಯಾಡ್ ಗಳು ವಸತಿ ಪ್ರದೇಶದಲ್ಲೇ ಟನ್ ಗಟ್ಟಲೆ ರಾಶಿ ಬಿದ್ದು ಗಬ್ಬೆದ್ದರೂ ಪಟ್ಟಣ ಪಂಚಾಯತ್ ಆಡಳಿತ ಈ ಕಡೆ ಗಮನಹರಿಸಿಲ್ಲವೆಂದು ಪ್ರತಿಭಟನಾಕಾರರಾದ ವಾಸುದೇವ ನಾಯಕ್ ಹೇಳಿದ್ದಾರೆ.



ಅನೇಕ ಬಾರಿ ತ್ಯಾಜ್ಯ ಘಟಕವನ್ನ ಸ್ಥಳಾಂತರಿಸುವಂತೆ ಪಟ್ಟಣ ಪಂಚಾಯತಿಗೆ ಮನವಿ ನೀಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ವಿಶೇಷವೆಂದರೆ ಈ ಪ್ರದೇಶದಲ್ಲಿ ಸಾರ್ವಜನಿಕರು ಕಸ ಎಸೆಯಬಾರದು ಎಂದು ಪಟ್ಟಣ ಪಂಚಾಯತ್ ಎಚ್ಚರಿಕೆಯ ಫಲಕ ಹಾಕಿ ಸಿಸಿ ಕ್ಯಾಮೆರಾ ಅಳವಡಿಸಿದ್ದು ಅದೇ ಆಡಳಿತವೇ ನಿಯಮ ಬಾಹಿರವಾಗಿ ಇಲ್ಲಿ ತ್ಯಾಜ್ಯ ವಿಲೇವಾರಿ ಮಾಡುತ್ತಿದೆ ಎಂದು ವಾಸುದೇವ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸ್ಥಳೀಯರ ಮನವಿಗೆ ಸ್ಪಂದಿಸದ ಸ್ಥಳೀಯಾಡಳಿತ ಇದ್ದೇನು ಪ್ರಯೋಜನವೆಂದು ಇದೇ ಡಿ.27 ರಂದು ನಡೆಯಲಿರುವ ಕೋಟೆಕಾರು ಪಟ್ಟಣ ಪಂಚಾಯತ್ ಚುನಾವಣೆ ಬಹಿಷ್ಕರಿಸುವುದಾಗಿ ಸ್ಥಳೀಯ ನಾಲ್ಕು ವಾರ್ಡಿನ ನಾಗರಿಕರು ನಿರ್ಧರಿಸಿದ್ದಾರೆ.


ತಾಲೂಕು ಪಂಚಾಯತ್ ನಿಕಟ ಪೂರ್ವ ಸದಸ್ಯೆ ಸುರೇಖ ಚಂದ್ರಹಾಸ್, ಸ್ಥಳೀಯರಾದ ರೇಣುಕಾ ಶೆಟ್ಟಿ, ಪೂವಮ್ಮ , ಚಂದ್ರಿಕಾ ರೈ, ಅರುಣ್ ಡಿಸೋಜ, ರವಿಶಂಕರ್ ಕಿಣಿ, ರಮಾನಂದ, ಮೋಹನ್, ಸತೀಶ್ ಮೊದಲಾದವರು ಪ್ರತಿಭಟನೆಯಲ್ಲಿ ಇದ್ದರು.
Madur residents oppose panchayat election after being fed up with tons of garbage in residential area.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
05-03-26 05:02 pm
HK News Staffer
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
05-03-26 04:36 pm
HK News Staffer
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm