ಬ್ರೇಕಿಂಗ್ ನ್ಯೂಸ್
23-12-21 06:49 pm Mangalore Correspondent ಕರಾವಳಿ
ಉಳ್ಳಾಲ, ಡಿ.23 : ಮಾಡೂರಿನ ನೀರಿನ ಟ್ಯಾಂಕಿ ಬಳಿಯ ತ್ಯಾಜ್ಯ ವಿಲೇವಾರಿ ಘಟಕ ತೆರವುಗೊಳಿಸದಿದ್ದರೆ ಡಿ.27 ರಂದು ನಡೆಯುವ ಕೋಟೆಕಾರು ಪಟ್ಟಣ ಪಂಚಾಯತ್ ಚುನಾವಣೆಯನ್ನ ಬಹಿಷ್ಕರಿಸಲು ನಾಗರಿಕರು ನಿರ್ಧರಿಸಿದ್ದಾರೆ.
ಮಾಡೂರಿನ ನೀರಿನ ಟ್ಯಾಂಕಿ ಬಳಿ ಇಂದು ಸ್ಥಳೀಯ ನಾಲ್ಕು ವಾರ್ಡಿನ ನಾಗರಿಕರು ಪ್ರತಿಭಟನೆ ನಡೆಸಿದ್ದು ಕೋಟೆಕಾರು ಪಟ್ಟಣ ಪಂಚಾಯತ್ ಗೆ ಬಿಸಿ ಮುಟ್ಟಿಸಿದ್ದಾರೆ. ಪಟ್ಟಣ ವ್ಯಾಪ್ತಿಯ 17 ವಾರ್ಡಿನ ತ್ಯಾಜ್ಯವನ್ನೆಲ್ಲಾ ಮಾಡೂರಿನ ನೀರಿನ ಟ್ಯಾಂಕ್ ಪ್ರದೇಶದ ರಸ್ತೆ ಬದಿಯಲ್ಲಿ ಸುರಿಯುತ್ತಿದ್ದು ಕೇವಲ ಹಸಿ ಕಸವನ್ನಷ್ಟೇ ಇಲ್ಲಿಂದ ವಿಲೇವಾರಿ ನಡೆಸುತ್ತಿದ್ದಾರೆ. ಉಳಿದ ಪ್ಲಾಸ್ಟಿಕ್ ತ್ಯಾಜ್ಯ, ಪ್ಯಾಂಪರ್ಸ್, ನ್ಯಾಪ್ ಕಿನ್ ಪ್ಯಾಡ್ ಗಳು ವಸತಿ ಪ್ರದೇಶದಲ್ಲೇ ಟನ್ ಗಟ್ಟಲೆ ರಾಶಿ ಬಿದ್ದು ಗಬ್ಬೆದ್ದರೂ ಪಟ್ಟಣ ಪಂಚಾಯತ್ ಆಡಳಿತ ಈ ಕಡೆ ಗಮನಹರಿಸಿಲ್ಲವೆಂದು ಪ್ರತಿಭಟನಾಕಾರರಾದ ವಾಸುದೇವ ನಾಯಕ್ ಹೇಳಿದ್ದಾರೆ.



ಅನೇಕ ಬಾರಿ ತ್ಯಾಜ್ಯ ಘಟಕವನ್ನ ಸ್ಥಳಾಂತರಿಸುವಂತೆ ಪಟ್ಟಣ ಪಂಚಾಯತಿಗೆ ಮನವಿ ನೀಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ವಿಶೇಷವೆಂದರೆ ಈ ಪ್ರದೇಶದಲ್ಲಿ ಸಾರ್ವಜನಿಕರು ಕಸ ಎಸೆಯಬಾರದು ಎಂದು ಪಟ್ಟಣ ಪಂಚಾಯತ್ ಎಚ್ಚರಿಕೆಯ ಫಲಕ ಹಾಕಿ ಸಿಸಿ ಕ್ಯಾಮೆರಾ ಅಳವಡಿಸಿದ್ದು ಅದೇ ಆಡಳಿತವೇ ನಿಯಮ ಬಾಹಿರವಾಗಿ ಇಲ್ಲಿ ತ್ಯಾಜ್ಯ ವಿಲೇವಾರಿ ಮಾಡುತ್ತಿದೆ ಎಂದು ವಾಸುದೇವ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸ್ಥಳೀಯರ ಮನವಿಗೆ ಸ್ಪಂದಿಸದ ಸ್ಥಳೀಯಾಡಳಿತ ಇದ್ದೇನು ಪ್ರಯೋಜನವೆಂದು ಇದೇ ಡಿ.27 ರಂದು ನಡೆಯಲಿರುವ ಕೋಟೆಕಾರು ಪಟ್ಟಣ ಪಂಚಾಯತ್ ಚುನಾವಣೆ ಬಹಿಷ್ಕರಿಸುವುದಾಗಿ ಸ್ಥಳೀಯ ನಾಲ್ಕು ವಾರ್ಡಿನ ನಾಗರಿಕರು ನಿರ್ಧರಿಸಿದ್ದಾರೆ.


ತಾಲೂಕು ಪಂಚಾಯತ್ ನಿಕಟ ಪೂರ್ವ ಸದಸ್ಯೆ ಸುರೇಖ ಚಂದ್ರಹಾಸ್, ಸ್ಥಳೀಯರಾದ ರೇಣುಕಾ ಶೆಟ್ಟಿ, ಪೂವಮ್ಮ , ಚಂದ್ರಿಕಾ ರೈ, ಅರುಣ್ ಡಿಸೋಜ, ರವಿಶಂಕರ್ ಕಿಣಿ, ರಮಾನಂದ, ಮೋಹನ್, ಸತೀಶ್ ಮೊದಲಾದವರು ಪ್ರತಿಭಟನೆಯಲ್ಲಿ ಇದ್ದರು.
Madur residents oppose panchayat election after being fed up with tons of garbage in residential area.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm