ಬ್ರೇಕಿಂಗ್ ನ್ಯೂಸ್
24-12-21 10:57 pm Mangalore Correspondent ಕರಾವಳಿ
ಮಂಗಳೂರು, ಡಿ.24 : ನಾಡಿನೆಲ್ಲೆಡೆ ಕ್ರಿಸ್ಮಸ್ ಸಂಭ್ರಮ. ಕ್ರಿಸ್ತಿಯನ್ನರು ಏಸು ಕ್ರಿಸ್ತನ ಜನ್ಮದಿನದ ಸಡಗರದಲ್ಲಿದ್ದಾರೆ. ಕಳೆದ ಬಾರಿ ಕೊರೊನಾ ನಿರ್ಬಂಧ ಹಿನ್ನೆಲೆಯಲ್ಲಿ ಚರ್ಚ್ ಗಳಲ್ಲಿ ಸಾಮೂಹಿಕ ಪ್ರಾರ್ಥನೆಗೆ ಅವಕಾಶ ಇರಲಿಲ್ಲ. ಈ ಬಾರಿ ಕೊರೊನಾ ನಡುವೆಯೂ ಚರ್ಚ್ ಗಳಲ್ಲಿ ಸಂಪ್ರದಾಯದಂತೆ ಪ್ರಾರ್ಥನೆ ನೆರವೇರಿಸಿದ್ದು ಸಂಭ್ರಮ ಮನೆಮಾಡಿದೆ.



ಮಂಗಳೂರಿನ ಬೆಂದೂರುವೆಲ್ ಚರ್ಚ್, ಮಿಲಾಗ್ರಿಸ್ ಚರ್ಚ್ ಸೇರಿದಂತೆ ಎಲ್ಲ ಕಡೆಗಳಲ್ಲಿಯೂ ಪ್ರಾರ್ಥನೆಗೆ ವಿಶೇಷ ವ್ಯವಸ್ಥೆ ಮಾಡಲಾಗಿತ್ತು. ಆದರೆ ಈ ಹಿಂದಿನಂತೆ ರಾತ್ರಿ 12 ಗಂಟೆ ವರೆಗೂ ಪ್ರಾರ್ಥನೆ ನಡೆಸಲು ಅವಕಾಶ ಇರಲಿಲ್ಲ. ಕೊರೊನಾ ಕಟ್ಟುನಿಟ್ಟು ಇರುವುದರಿಂದ ಸಾಮಾಜಿಕ ಅಂತರ, ಮಾಸ್ಕ್ ಧರಿಸಿ ಸಂಪ್ರದಾಯಕ್ಕೆ ಚ್ಯುತಿ ಬರದಂತೆ ಭಕ್ತರು ಪ್ರಾರ್ಥನೆ ನೆರವೇರಿಸಿದರು. ಸಂಜೆಯಿಂದ ರಾತ್ರಿ 9 ಗಂಟೆ ವರೆಗೆ ಭಕ್ತರು ಚರ್ಚ್ ಗಳಲ್ಲಿ ಬಂದು ಸಾಮೂಹಿಕ ಪಾರ್ಥನೆ ನೆರವೇರಿದ್ದಾರೆ.





ಹಿಂದೆಲ್ಲಾ ಡಿ.24ರಂದು ರಾತ್ರಿ 12 ಗಂಟೆ ವರೆಗೂ ಭಕ್ತರು ಸಾಮೂಹಿಕ ಪ್ರಾರ್ಥನೆಗಳಲ್ಲಿ ಪಾಲ್ಗೊಂಡು, ಮಧ್ಯರಾತ್ರಿಯಲ್ಲಿ ಏಸು ಕ್ರಿಸ್ತನ ಜನ್ಮದಿನವನ್ನು ಅಚರಿಸಿಕೊಳ್ಳುತ್ತಿದ್ದರು. ಗೋದಲಿ ಇನ್ನಿತರ ಸ್ವರೂಪಗಳಲ್ಲಿ ಏಸು ಕ್ರಿಸ್ತನ ಮಗುವಿನ ರೂಪವನ್ನು ನೋಡಿ ಕಣ್ತುಂಬಿಕೊಳ್ಳುತ್ತಿದ್ದರು. ಕಳೆದ ಎರಡು ವರ್ಷಗಳಿಂದ ನಡುರಾತ್ರಿಯ ಸಂಭ್ರಮಕ್ಕೆ ಕೊರೊನಾ ಕಾರಣದಿಂದ ಬ್ರೇಕ್ ಬಿದ್ದಿದೆ. ಈ ಬಾರಿ ಕೊಂಚ ಮಟ್ಟಿಗೆ ಜನರು ನಿರಾಳರಾಗಿದ್ದು, ಎಲ್ಲ ಚರ್ಚ್ ಗಳಲ್ಲಿ ಸಡಗರ ಕಂಡುಬಂತು. ಚರ್ಚ್ ಗಳು ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿದ್ದವು. ಭಕ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು.
A large number of faithful attended the Christmas Eve Mass at churches in and around the city on Friday December 24. With Covid pandemic around, Masses were held with discipline adhering to Covid-19 guidelines and maintaining social distance. Beautiful lights, and stars and sparkling decorations could be seen in churches everywhere celebrating the birth of Jesus Christ.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
05-03-26 05:02 pm
HK News Staffer
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
05-03-26 04:36 pm
HK News Staffer
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm