ಬ್ರೇಕಿಂಗ್ ನ್ಯೂಸ್
24-12-21 10:57 pm Mangalore Correspondent ಕರಾವಳಿ
ಮಂಗಳೂರು, ಡಿ.24 : ನಾಡಿನೆಲ್ಲೆಡೆ ಕ್ರಿಸ್ಮಸ್ ಸಂಭ್ರಮ. ಕ್ರಿಸ್ತಿಯನ್ನರು ಏಸು ಕ್ರಿಸ್ತನ ಜನ್ಮದಿನದ ಸಡಗರದಲ್ಲಿದ್ದಾರೆ. ಕಳೆದ ಬಾರಿ ಕೊರೊನಾ ನಿರ್ಬಂಧ ಹಿನ್ನೆಲೆಯಲ್ಲಿ ಚರ್ಚ್ ಗಳಲ್ಲಿ ಸಾಮೂಹಿಕ ಪ್ರಾರ್ಥನೆಗೆ ಅವಕಾಶ ಇರಲಿಲ್ಲ. ಈ ಬಾರಿ ಕೊರೊನಾ ನಡುವೆಯೂ ಚರ್ಚ್ ಗಳಲ್ಲಿ ಸಂಪ್ರದಾಯದಂತೆ ಪ್ರಾರ್ಥನೆ ನೆರವೇರಿಸಿದ್ದು ಸಂಭ್ರಮ ಮನೆಮಾಡಿದೆ.



ಮಂಗಳೂರಿನ ಬೆಂದೂರುವೆಲ್ ಚರ್ಚ್, ಮಿಲಾಗ್ರಿಸ್ ಚರ್ಚ್ ಸೇರಿದಂತೆ ಎಲ್ಲ ಕಡೆಗಳಲ್ಲಿಯೂ ಪ್ರಾರ್ಥನೆಗೆ ವಿಶೇಷ ವ್ಯವಸ್ಥೆ ಮಾಡಲಾಗಿತ್ತು. ಆದರೆ ಈ ಹಿಂದಿನಂತೆ ರಾತ್ರಿ 12 ಗಂಟೆ ವರೆಗೂ ಪ್ರಾರ್ಥನೆ ನಡೆಸಲು ಅವಕಾಶ ಇರಲಿಲ್ಲ. ಕೊರೊನಾ ಕಟ್ಟುನಿಟ್ಟು ಇರುವುದರಿಂದ ಸಾಮಾಜಿಕ ಅಂತರ, ಮಾಸ್ಕ್ ಧರಿಸಿ ಸಂಪ್ರದಾಯಕ್ಕೆ ಚ್ಯುತಿ ಬರದಂತೆ ಭಕ್ತರು ಪ್ರಾರ್ಥನೆ ನೆರವೇರಿಸಿದರು. ಸಂಜೆಯಿಂದ ರಾತ್ರಿ 9 ಗಂಟೆ ವರೆಗೆ ಭಕ್ತರು ಚರ್ಚ್ ಗಳಲ್ಲಿ ಬಂದು ಸಾಮೂಹಿಕ ಪಾರ್ಥನೆ ನೆರವೇರಿದ್ದಾರೆ.





ಹಿಂದೆಲ್ಲಾ ಡಿ.24ರಂದು ರಾತ್ರಿ 12 ಗಂಟೆ ವರೆಗೂ ಭಕ್ತರು ಸಾಮೂಹಿಕ ಪ್ರಾರ್ಥನೆಗಳಲ್ಲಿ ಪಾಲ್ಗೊಂಡು, ಮಧ್ಯರಾತ್ರಿಯಲ್ಲಿ ಏಸು ಕ್ರಿಸ್ತನ ಜನ್ಮದಿನವನ್ನು ಅಚರಿಸಿಕೊಳ್ಳುತ್ತಿದ್ದರು. ಗೋದಲಿ ಇನ್ನಿತರ ಸ್ವರೂಪಗಳಲ್ಲಿ ಏಸು ಕ್ರಿಸ್ತನ ಮಗುವಿನ ರೂಪವನ್ನು ನೋಡಿ ಕಣ್ತುಂಬಿಕೊಳ್ಳುತ್ತಿದ್ದರು. ಕಳೆದ ಎರಡು ವರ್ಷಗಳಿಂದ ನಡುರಾತ್ರಿಯ ಸಂಭ್ರಮಕ್ಕೆ ಕೊರೊನಾ ಕಾರಣದಿಂದ ಬ್ರೇಕ್ ಬಿದ್ದಿದೆ. ಈ ಬಾರಿ ಕೊಂಚ ಮಟ್ಟಿಗೆ ಜನರು ನಿರಾಳರಾಗಿದ್ದು, ಎಲ್ಲ ಚರ್ಚ್ ಗಳಲ್ಲಿ ಸಡಗರ ಕಂಡುಬಂತು. ಚರ್ಚ್ ಗಳು ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿದ್ದವು. ಭಕ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು.
A large number of faithful attended the Christmas Eve Mass at churches in and around the city on Friday December 24. With Covid pandemic around, Masses were held with discipline adhering to Covid-19 guidelines and maintaining social distance. Beautiful lights, and stars and sparkling decorations could be seen in churches everywhere celebrating the birth of Jesus Christ.
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
08-11-25 04:08 pm
Mangaluru Staff
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm