ಬ್ರೇಕಿಂಗ್ ನ್ಯೂಸ್
24-12-21 10:57 pm Mangalore Correspondent ಕರಾವಳಿ
ಮಂಗಳೂರು, ಡಿ.24 : ನಾಡಿನೆಲ್ಲೆಡೆ ಕ್ರಿಸ್ಮಸ್ ಸಂಭ್ರಮ. ಕ್ರಿಸ್ತಿಯನ್ನರು ಏಸು ಕ್ರಿಸ್ತನ ಜನ್ಮದಿನದ ಸಡಗರದಲ್ಲಿದ್ದಾರೆ. ಕಳೆದ ಬಾರಿ ಕೊರೊನಾ ನಿರ್ಬಂಧ ಹಿನ್ನೆಲೆಯಲ್ಲಿ ಚರ್ಚ್ ಗಳಲ್ಲಿ ಸಾಮೂಹಿಕ ಪ್ರಾರ್ಥನೆಗೆ ಅವಕಾಶ ಇರಲಿಲ್ಲ. ಈ ಬಾರಿ ಕೊರೊನಾ ನಡುವೆಯೂ ಚರ್ಚ್ ಗಳಲ್ಲಿ ಸಂಪ್ರದಾಯದಂತೆ ಪ್ರಾರ್ಥನೆ ನೆರವೇರಿಸಿದ್ದು ಸಂಭ್ರಮ ಮನೆಮಾಡಿದೆ.



ಮಂಗಳೂರಿನ ಬೆಂದೂರುವೆಲ್ ಚರ್ಚ್, ಮಿಲಾಗ್ರಿಸ್ ಚರ್ಚ್ ಸೇರಿದಂತೆ ಎಲ್ಲ ಕಡೆಗಳಲ್ಲಿಯೂ ಪ್ರಾರ್ಥನೆಗೆ ವಿಶೇಷ ವ್ಯವಸ್ಥೆ ಮಾಡಲಾಗಿತ್ತು. ಆದರೆ ಈ ಹಿಂದಿನಂತೆ ರಾತ್ರಿ 12 ಗಂಟೆ ವರೆಗೂ ಪ್ರಾರ್ಥನೆ ನಡೆಸಲು ಅವಕಾಶ ಇರಲಿಲ್ಲ. ಕೊರೊನಾ ಕಟ್ಟುನಿಟ್ಟು ಇರುವುದರಿಂದ ಸಾಮಾಜಿಕ ಅಂತರ, ಮಾಸ್ಕ್ ಧರಿಸಿ ಸಂಪ್ರದಾಯಕ್ಕೆ ಚ್ಯುತಿ ಬರದಂತೆ ಭಕ್ತರು ಪ್ರಾರ್ಥನೆ ನೆರವೇರಿಸಿದರು. ಸಂಜೆಯಿಂದ ರಾತ್ರಿ 9 ಗಂಟೆ ವರೆಗೆ ಭಕ್ತರು ಚರ್ಚ್ ಗಳಲ್ಲಿ ಬಂದು ಸಾಮೂಹಿಕ ಪಾರ್ಥನೆ ನೆರವೇರಿದ್ದಾರೆ.





ಹಿಂದೆಲ್ಲಾ ಡಿ.24ರಂದು ರಾತ್ರಿ 12 ಗಂಟೆ ವರೆಗೂ ಭಕ್ತರು ಸಾಮೂಹಿಕ ಪ್ರಾರ್ಥನೆಗಳಲ್ಲಿ ಪಾಲ್ಗೊಂಡು, ಮಧ್ಯರಾತ್ರಿಯಲ್ಲಿ ಏಸು ಕ್ರಿಸ್ತನ ಜನ್ಮದಿನವನ್ನು ಅಚರಿಸಿಕೊಳ್ಳುತ್ತಿದ್ದರು. ಗೋದಲಿ ಇನ್ನಿತರ ಸ್ವರೂಪಗಳಲ್ಲಿ ಏಸು ಕ್ರಿಸ್ತನ ಮಗುವಿನ ರೂಪವನ್ನು ನೋಡಿ ಕಣ್ತುಂಬಿಕೊಳ್ಳುತ್ತಿದ್ದರು. ಕಳೆದ ಎರಡು ವರ್ಷಗಳಿಂದ ನಡುರಾತ್ರಿಯ ಸಂಭ್ರಮಕ್ಕೆ ಕೊರೊನಾ ಕಾರಣದಿಂದ ಬ್ರೇಕ್ ಬಿದ್ದಿದೆ. ಈ ಬಾರಿ ಕೊಂಚ ಮಟ್ಟಿಗೆ ಜನರು ನಿರಾಳರಾಗಿದ್ದು, ಎಲ್ಲ ಚರ್ಚ್ ಗಳಲ್ಲಿ ಸಡಗರ ಕಂಡುಬಂತು. ಚರ್ಚ್ ಗಳು ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿದ್ದವು. ಭಕ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು.
A large number of faithful attended the Christmas Eve Mass at churches in and around the city on Friday December 24. With Covid pandemic around, Masses were held with discipline adhering to Covid-19 guidelines and maintaining social distance. Beautiful lights, and stars and sparkling decorations could be seen in churches everywhere celebrating the birth of Jesus Christ.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm