ಚಿಕ್ಕಮಗಳೂರು- ಉಡುಪಿ ಬಸ್ಸಿನಲ್ಲಿ ಹೃದಯಾಘಾತ ; ಕಂಡಕ್ಟರ್ ಸಾವು

25-12-21 04:40 pm       HK Desk news   ಕರಾವಳಿ

ಚಿಕ್ಕಮಗಳೂರಿನಿಂದ ಉಡುಪಿಗೆ ಬರುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಕಂಡಕ್ಟರ್ ಆಗಿದ್ದ ವ್ಯಕ್ತಿ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟ ಘಟನೆ ನಡೆದಿದೆ.

ಚಿಕ್ಕಮಗಳೂರು, ಡಿ.25 : ಚಿಕ್ಕಮಗಳೂರಿನಿಂದ ಉಡುಪಿಗೆ ಬರುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಕಂಡಕ್ಟರ್ ಆಗಿದ್ದ ವ್ಯಕ್ತಿ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟ ಘಟನೆ ನಡೆದಿದೆ.

ಚಿಕ್ಕಮಗಳೂರು ಡಿಪೋದಿಂದ ಕೆಎಸ್ಸಾರ್ಟಿಸಿ ಬಸ್ ಬೆಳಗ್ಗೆ 6 ಗಂಟೆಗೆ ಉಡುಪಿಗೆ ಹೊರಟಿದ್ದು, ಬಸ್ ಕೊಟ್ಟಿಗೆಹಾರದ ಮಲಯಮಾರುತ ತಿರುವಿನ ಬಳಿ ತಲುಪಿದಾಗ ಕಂಡಕ್ಟರ್ ವಿಜಯಕುಮಾರ್ (42) ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಬಸ್ಸಿನ ಚಾಲಕ ಮತ್ತು ಕೊಟ್ಟಿಗೆಹಾರದ ಡಿಪೋ ಸಿಬಂದಿ ಸೇರಿ ಬಣಕಲ್ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

ಆದರೆ ದೇಹಸ್ಥಿತಿ ಬಿಗಡಾಯಿಸಿದ್ದರಿಂದ ಅಲ್ಲಿಂದ ಮೂಡಿಗೆರೆ ಆಸ್ಪತ್ರೆಗೆ ಕರೆತಂದಿದ್ದಾರೆ. ಅಲ್ಲಿ ತೆರಳುವಾಗಲೇ ಅರ್ಧ ಜೀವ ಹೋಗಿದ್ದು, ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ವಿಜಯಕುಮಾರ್, ಚಿಕ್ಕಮಗಳೂರು ಜಿಲ್ಲೆಯ ಸಖರಾಯಪಟ್ಟಣದ ಬಳಿಕ ಕುನ್ನಾಳು ಗ್ರಾಮದ ನಿವಾಸಿಯಾಗಿದ್ದು, ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಕಳೆದ ಹಲವು ವರ್ಷಗಳಿಂದ ನಿರ್ವಾಹಕರಾಗಿ ಕೆಲಸ ಮಾಡುತ್ತಿದ್ದರು.

Chikmagalur KSRTC bus Conductor on duty dies of heart attack on duty. The deceased has been identified as Vijaykumar (42).