ಬ್ರೇಕಿಂಗ್ ನ್ಯೂಸ್
25-12-21 08:04 pm Mangalore Correspondent ಕರಾವಳಿ
ಮಂಗಳೂರು, ಡಿ.25 : ತುಳು ಭಾಷೆಯನ್ನು ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಸೇರ್ಪಡೆ ಮಾಡಬೇಕು ಎಂಬ ಆಗ್ರಹದ ನಡುವೆಯೇ ಇಲ್ಲೊಬ್ಬ ವಿಮಾನದ ಪೈಲಟ್ ತುಳುವಿನಲ್ಲಿ ಅನೌನ್ಸ್ ಮೆಂಟ್ ಕೊಟ್ಟು ಹೈಫೈ ಇಂಗ್ಲಿಷ್ ಪ್ರಿಯರ ಮಧ್ಯೆ ವಿಭಿನ್ನ ಆಕರ್ಷಣೆಗೆ ಕಾರಣವಾಗಿದ್ದಾರೆ.
ಉಡುಪಿ ಜಿಲ್ಲೆಯ ಮೂಲದ ಪ್ರದೀಪ್ ಪದ್ಮಶಾಲಿ ಇಂಡಿಗೋ ವಿಮಾನದಲ್ಲಿ ಪೈಲಟ್ ಆಗಿದ್ದು ಶುಕ್ರವಾರ ರಾತ್ರಿ ಎಂಟು ಗಂಟೆಗೆ ಮುಂಬೈನಿಂದ ಮಂಗಳೂರಿಗೆ ವಿಮಾನ ಹೊರಡುವಾಗ ಇಂಗ್ಲಿಷ್ ಬದಲಿಗೆ ತುಳುವಿನಲ್ಲಿ ಅನೌನ್ಸ್ ಮೆಂಟ್ ಕೊಟ್ಟಿದ್ದಾರೆ. ದೇಶೀಯ ವಿಮಾನದಲ್ಲಿ ಇಂಗ್ಲಿಷ್ ಅಥವಾ ಹಿಂದಿಯಲ್ಲಿ ಮಾತ್ರ ವಿಮಾನ ಹೊರಡುವಾಗ ಮತ್ತು ಇಳಿಯುವಾಗ ಪ್ರಯಾಣಿಕರಿಗೆ ಸೂಚನೆ ರವಾನಿಸುವ ಪದ್ಧತಿ ಇದೆ. ಆದರೆ, ಕರಾವಳಿ ಕರ್ನಾಟಕದ ಜನರ ಸ್ಥಳೀಯ ಭಾಷೆ ಎನ್ನುವ ನೆಲೆಯಲ್ಲಿ ಮುಂಬೈನಿಂದ ಮಂಗಳೂರಿಗೆ ಬರುವ ವಿಮಾನದಲ್ಲಿ ಕರಾವಳಿ ಜನರೇ ಹೆಚ್ಚಿರುವುದರಿಂದ ಪೈಲಟ್ ಈ ಬಗ್ಗೆ ಹಿರಿಯಧಿಕಾರಿಗಳ ಅನುಮತಿ ಪಡೆದು ತುಳು ಭಾಷೆಯಲ್ಲಿ ಸೂಚನೆ ನೀಡಿದ್ದಾರೆ.

ಇಂಡಿಗೋ ವಿಮಾನ ಪ್ರತಿ ದಿನವೂ ಎಂಟು ಗಂಟೆಗೆ ಮುಂಬೈನಿಂದ ಹೊರಟು ರಾತ್ರಿ 9.30ಕ್ಕೆ ಮಂಗಳೂರು ತಲುಪುತ್ತದೆ. ಇದರಲ್ಲಿ ಪ್ರದೀಪ್ ಪೈಲಟ್ ಆಗಿದ್ದು ತಾನೊಬ್ಬ ತುಳುವ ಅನ್ನುವ ಅಭಿಮಾನದಿಂದ ಇಂಗ್ಲಿಷ್ ಭಾಷೆಯಲ್ಲಿರುವ ಸೂಚನೆಯನ್ನು ತುಳುವಿನಲ್ಲಿ ಬರೆದು ಓದಿದ್ದಾರೆ.
ಪ್ರದೀಪ್ ಉಡುಪಿ ಮೂಲದ ಕುಟುಂಬದವರಾಗಿದ್ದು ಮುಂಬೈನಲ್ಲಿಯೇ ಬೆಳೆದು ಕಲಿತು ಪೈಲಟ್ ಉದ್ಯೋಗಕ್ಕೆ ಸೇರಿದ್ದಾರೆ. ಮಾತೆರೆಗ್ಲಾ ಸೊಲ್ಮೆಲು ಎನ್ನುತ್ತಾ ತುಳುವಿನಲ್ಲಿ ಅನೌನ್ಸ್ ಮೆಂಟ್ ಕೊಟ್ಟಿರುವ 45 ಸೆಕಂಡಿನ ವಿಡಿಯೋ ಕರಾವಳಿಯಲ್ಲಿ ವೈರಲ್ ಆಗಿದೆ. ಹೆಚ್ಚಿನವರು ತಮ್ಮ ವಾಟ್ಸಪ್ ಸ್ಟೇಟಸ್ ಹಾಕಿ ಅಭಿಮಾನ ಮೆರೆದಿದ್ದಾರೆ.
Mangalore based Indigo pilot welcomes passenger in Tulu wins heart, video goes viral over internet. The flight was from Mumbai to Mangalore. Udupi based Pradeep is the a pilot.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm