ಬ್ರೇಕಿಂಗ್ ನ್ಯೂಸ್
25-12-21 08:04 pm Mangalore Correspondent ಕರಾವಳಿ
ಮಂಗಳೂರು, ಡಿ.25 : ತುಳು ಭಾಷೆಯನ್ನು ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಸೇರ್ಪಡೆ ಮಾಡಬೇಕು ಎಂಬ ಆಗ್ರಹದ ನಡುವೆಯೇ ಇಲ್ಲೊಬ್ಬ ವಿಮಾನದ ಪೈಲಟ್ ತುಳುವಿನಲ್ಲಿ ಅನೌನ್ಸ್ ಮೆಂಟ್ ಕೊಟ್ಟು ಹೈಫೈ ಇಂಗ್ಲಿಷ್ ಪ್ರಿಯರ ಮಧ್ಯೆ ವಿಭಿನ್ನ ಆಕರ್ಷಣೆಗೆ ಕಾರಣವಾಗಿದ್ದಾರೆ.
ಉಡುಪಿ ಜಿಲ್ಲೆಯ ಮೂಲದ ಪ್ರದೀಪ್ ಪದ್ಮಶಾಲಿ ಇಂಡಿಗೋ ವಿಮಾನದಲ್ಲಿ ಪೈಲಟ್ ಆಗಿದ್ದು ಶುಕ್ರವಾರ ರಾತ್ರಿ ಎಂಟು ಗಂಟೆಗೆ ಮುಂಬೈನಿಂದ ಮಂಗಳೂರಿಗೆ ವಿಮಾನ ಹೊರಡುವಾಗ ಇಂಗ್ಲಿಷ್ ಬದಲಿಗೆ ತುಳುವಿನಲ್ಲಿ ಅನೌನ್ಸ್ ಮೆಂಟ್ ಕೊಟ್ಟಿದ್ದಾರೆ. ದೇಶೀಯ ವಿಮಾನದಲ್ಲಿ ಇಂಗ್ಲಿಷ್ ಅಥವಾ ಹಿಂದಿಯಲ್ಲಿ ಮಾತ್ರ ವಿಮಾನ ಹೊರಡುವಾಗ ಮತ್ತು ಇಳಿಯುವಾಗ ಪ್ರಯಾಣಿಕರಿಗೆ ಸೂಚನೆ ರವಾನಿಸುವ ಪದ್ಧತಿ ಇದೆ. ಆದರೆ, ಕರಾವಳಿ ಕರ್ನಾಟಕದ ಜನರ ಸ್ಥಳೀಯ ಭಾಷೆ ಎನ್ನುವ ನೆಲೆಯಲ್ಲಿ ಮುಂಬೈನಿಂದ ಮಂಗಳೂರಿಗೆ ಬರುವ ವಿಮಾನದಲ್ಲಿ ಕರಾವಳಿ ಜನರೇ ಹೆಚ್ಚಿರುವುದರಿಂದ ಪೈಲಟ್ ಈ ಬಗ್ಗೆ ಹಿರಿಯಧಿಕಾರಿಗಳ ಅನುಮತಿ ಪಡೆದು ತುಳು ಭಾಷೆಯಲ್ಲಿ ಸೂಚನೆ ನೀಡಿದ್ದಾರೆ.

ಇಂಡಿಗೋ ವಿಮಾನ ಪ್ರತಿ ದಿನವೂ ಎಂಟು ಗಂಟೆಗೆ ಮುಂಬೈನಿಂದ ಹೊರಟು ರಾತ್ರಿ 9.30ಕ್ಕೆ ಮಂಗಳೂರು ತಲುಪುತ್ತದೆ. ಇದರಲ್ಲಿ ಪ್ರದೀಪ್ ಪೈಲಟ್ ಆಗಿದ್ದು ತಾನೊಬ್ಬ ತುಳುವ ಅನ್ನುವ ಅಭಿಮಾನದಿಂದ ಇಂಗ್ಲಿಷ್ ಭಾಷೆಯಲ್ಲಿರುವ ಸೂಚನೆಯನ್ನು ತುಳುವಿನಲ್ಲಿ ಬರೆದು ಓದಿದ್ದಾರೆ.
ಪ್ರದೀಪ್ ಉಡುಪಿ ಮೂಲದ ಕುಟುಂಬದವರಾಗಿದ್ದು ಮುಂಬೈನಲ್ಲಿಯೇ ಬೆಳೆದು ಕಲಿತು ಪೈಲಟ್ ಉದ್ಯೋಗಕ್ಕೆ ಸೇರಿದ್ದಾರೆ. ಮಾತೆರೆಗ್ಲಾ ಸೊಲ್ಮೆಲು ಎನ್ನುತ್ತಾ ತುಳುವಿನಲ್ಲಿ ಅನೌನ್ಸ್ ಮೆಂಟ್ ಕೊಟ್ಟಿರುವ 45 ಸೆಕಂಡಿನ ವಿಡಿಯೋ ಕರಾವಳಿಯಲ್ಲಿ ವೈರಲ್ ಆಗಿದೆ. ಹೆಚ್ಚಿನವರು ತಮ್ಮ ವಾಟ್ಸಪ್ ಸ್ಟೇಟಸ್ ಹಾಕಿ ಅಭಿಮಾನ ಮೆರೆದಿದ್ದಾರೆ.
Mangalore based Indigo pilot welcomes passenger in Tulu wins heart, video goes viral over internet. The flight was from Mumbai to Mangalore. Udupi based Pradeep is the a pilot.
18-12-25 12:37 pm
HK News Desk
ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ; ಸದನಕ್ಕ...
17-12-25 10:30 pm
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
18-12-25 10:52 am
Mangalore Correspondent
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm