ಬ್ರೇಕಿಂಗ್ ನ್ಯೂಸ್
15-09-20 04:11 pm Mangalore Correspondent ಕರಾವಳಿ
ಮಂಗಳೂರು, ಸೆಪ್ಟೆಂಬರ್ 15: ಅದು ಮಾಜಿ ಮುಖ್ಯಮಂತ್ರಿ ಒಬ್ಬರ ತವರೂರು. ಮೇಲಾಗಿ ಆ ಕ್ಷೇತ್ರದ ಶಾಸಕರದ್ದೇ ಊರು. ಅಲ್ಲಿನ ಮಂದಿ ಸಚಿವರು, ಸಂಸದರಾಗಿದ್ದಾರೆ. ಅಲ್ಲಿನ ಮಂದಿ ರಾಜ್ಯದ ಉನ್ನತ ಅಧಿಕಾರದ ಹುದ್ದೆಗಳನ್ನೂ ಪಡೆದಿದ್ದಾರೆ. ಈಗಿನ ಶಾಸಕರಿಗಂತೂ ಈ ಗ್ರಾಮವೇ ಹುಟ್ಟೂರು. ಇದೆಲ್ಲ ಹೆಗ್ಗಳಿಕೆ ಇದ್ದರೇನು ಬಂತು, ಕುಗ್ರಾಮದ ಜನರ ಬಹುಕಾಲದ ಬೇಡಿಕೆ ಮಾತ್ರ ಈಡೇರಲೇ ಇಲ್ಲ. 40 ವರ್ಷಗಳಿಂದ ಜನರು ಕೂಗು ಹಾಕಿದ್ದೇ ಬಂತು. ಈ ಬಾರಿ ಮಾತ್ರ ರೊಚ್ಚಿಗೆದ್ದಿರುವ ಅಲ್ಲಿನ ಜನ ಮುಂದಿನ ಚುನಾವಣೆಗಳನ್ನು ಬಹಿಷ್ಕರಿಸಲು ಮುಂದಾಗಿದ್ದಾರೆ.
ಅದು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಹಿರೇಬಂಡಾಡಿ ಸಮೀಪದ ಅಗರಿ ಎಂಬ ಕುಗ್ರಾಮ. ಅಲ್ಲಿ 12 ದಲಿತ ಕುಟುಂಬಗಳು ವಾಸ್ತವ್ಯವಿದ್ದರೆ, 25ಕ್ಕೂ ಹೆಚ್ಚು ಇತರ ಕುಟುಂಬಗಳಿವೆ. ಉಪ್ಪಿನಂಗಡಿ - ಕಡಬ ರಾಜ್ಯ ಹೆದ್ದಾರಿಯನ್ನು ಸಂಪರ್ಕಿಸಲು ಇಲ್ಲಿನ ಜನ ಕಿರು ಹೊಳೆ ಒಂದನ್ನು ದಾಟಿ ಹೋಗಬೇಕು. ಮಳೆಗಾಲದಲ್ಲಿ ದ್ವೀಪದಂತಾಗುವ ಈ ಭಾಗದ ಜನರು ಒಂದು ಸೇತುವೆಗಾಗಿ ಪಡಬಾರದ ಕಷ್ಟ ಅನುಭವಿಸಿದ್ದಾರೆ. ಸೇತುವೆಗಾಗಿ ಇಲ್ಲಿನ ಜನ ಕಳೆದ ನಾಲ್ಕು ದಶಕಗಳಿಂದ ಮನವಿ ನೀಡುತ್ತಲೇ ಇದ್ದಾರೆ. ಆದರೆ ಯಾವ ಅಧಿಕಾರಿಗಳೂ, ಜನಪ್ರತಿನಿಧಿಗಳು ಈ ಜನತೆಯ ಕೂಗಿಗೆ ಓಗೊಟ್ಟಿಲ್ಲ.

ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರು ಪುತ್ತೂರಿನ ಶಾಸಕರಿದ್ದಾಗ ಅಗರಿ ದಲಿತ ಕಾಲೊನಿ ಸಂಪರ್ಕಿಸುವ ರಸ್ತೆಗೆ ಸೇತುವೆ ನಿರ್ಮಾಣ ಮಾಡುವಂತೆ ಈ ಭಾಗದ ಜನ ಮನವಿ ನೀಡಲು ಆರಂಭಿಸಿದ್ದರು. ನಂತರ ಶಕುಂತಳಾ ಶೆಟ್ಟಿ, ಮಲ್ಲಿಕಾ ಪ್ರಸಾದ್ ಶಾಸಕರಾದಾಗಲೂ ಮನವಿ ನೀಡಲಾಗಿತ್ತು. ಇದೀಗ ಇದೇ ಗ್ರಾಮದ ನಿವಾಸಿ ಸಂಜೀವ ಮಠಂದೂರು ಪುತ್ತೂರಿನಲ್ಲಿ ಶಾಸಕರಾಗಿದ್ದಾರೆ. ಅವರಿಗೂ ಎರಡು ಬಾರಿ ಇಲ್ಲಿನ ಜನತೆ ಮನವಿ ಮಾಡಿದ್ದಾರೆ. ಶಾಸಕರಾಗಿದ್ದ ಡಿವಿ ಮುಖ್ಯಮಂತ್ರಿಯಾದರೂ ಊರ ಜನರ ಗೋಳು ಕೇಳಲೇ ಇಲ್ಲ. ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಯಡಿಯೂರಪ್ಪ ಅವರಿಗೂ ಇಲ್ಲಿನ ಜನತೆ ವಿಧಾನಸಭೆಯ ಮೆಟ್ಟಲು ಹತ್ತಿ ಸೇತುವೆ ಮಾಡಿಕೊಡಿ ಎಂದು ದುಂಬಾಲು ಬಿದ್ದಿದ್ದಾರೆ. ಆದರೆ ಇಲ್ಲಿನ ಜನತೆಯ ಎಲ್ಲಾ ಕೆಲಸಗಳು ಹೊಳೆಯಲ್ಲಿ ಹುಣಸೆ ಹಣ್ಣು ತೊಳೆದ ಹಾಗಾಗಿದೆ. ಯಾವ ಪಕ್ಷದ ಜನಪ್ರತಿನಿಧಿಗಳು ಕೂಡ ಜನರ ಮನವಿಗೆ ಸ್ಪಂದಿಸಲೇ ಇಲ್ಲ..

ಸುಮಾರು 35 ಕ್ಕೂ ಹೆಚ್ಚು ಕುಟುಂಬಗಳು ಬಳಸುವ ಸೇತುವೆ ನಿರ್ಮಾಣಕ್ಕೆ ಜನಪ್ರತಿನಿಧಿಗಳು ಯಾಕೆ ಮುಂದಾಗುತ್ತಿಲ್ಲ ಎಂಬ ಪ್ರಶ್ನೆಗೆ ಉತ್ತರ ಸಿಗುತ್ತಿಲ್ಲ. ಈ ನಡುವೆ ಹಲವು ವರ್ಷಗಳಿಂದ ಜಿಲ್ಲಾ ಮಟ್ಟದ ಅಧಿಕಾರಿಗಳ ಮಟ್ಟದ ಪರಿಶಿಷ್ಟ ಜಾತಿ-ಪಂಗಡದ ಕುಂದುಕೊರತೆ ಸಭೆಯಲ್ಲೂ ಈ ಸೇತುವೆಗಾಗಿ ಇಲ್ಲಿನ ಸ್ಥಳೀಯರು ಬೊಬ್ಬೆ ಹೊಡೆಯುತ್ತಿದ್ದಾರೆ. ಆದರೆ ಯಾವುದೂ ಪ್ರಯೋಜನಕ್ಕೆ ಬಂದಿಲ್ಲ. ಮಳೆಗಾಲದಲ್ಲಿ ತುಂಬಿ ಹರಿಯುವ ಈ ಕಿರುಹೊಳೆಯನ್ನು ಶಾಲಾ ಮಕ್ಕಳು ದಾಟಲು ಹರಸಾಹಸ ಪಡಬೇಕು. ಜನರು ಹಾಲು ಸೊಸೈಟಿಗೆ ತರಬೇಕಾದರೆ ಸುಮಾರು 6 ಕಿಮೀ ದೂರ ಸುತ್ತಬೇಕು. ಅನಾರೋಗ್ಯಕ್ಕೆ ಈಡಾದರೆ ಆಸ್ಪತ್ರೆಗೆ ಒಯ್ಯುವುದಕ್ಕೂ ರಸ್ತೆ ಇಲ್ಲ. ವಾಹನ ಇಲ್ಲದೆ ಹೊತ್ತೊಯ್ಯಬೇಕಾದ ಪ್ರಸಂಗ ಬರುತ್ತದೆ. ಇಷ್ಟೊಂದು ಅವ್ಯವಸ್ಥೆ ತುಂಬಿರುವ ಈ ಹಳ್ಳಿಯ ಜನರ ಸೇತುವೆ ಬೇಡಿಕೆ ಬಗ್ಗೆ ಆಡಳಿತ ಅಸಡ್ಡೆ ವಹಿಸಿರೋದು ಆಕ್ರೋಶಕ್ಕೆ ಕಾರಣವಾಗಿದೆ. ಜನಪ್ರತಿನಿಧಿಗಳ ವಿರುದ್ಧ ಈಗ ಜನ ತಿರುಗಿ ಬಿದ್ದಿದ್ದು ಮುಂದಿನ ಪಂಚಾಯತ್ ಚುನಾವಣೆಯನ್ನು ಬಹಿಷ್ಕರಿಸಲು ನಿರ್ಧರಿಸಿದ್ದಾರೆ. ಪಂಚಾಯತ್ ಚುನಾವಣೆ ಬಹಿಷ್ಕರಿಸಿದರೆ ಹೆಚ್ಚು ಬಿಸಿ ಮುಟ್ಟಬಹುದೆಂಬ ಲೆಕ್ಕಾಚಾರದಲ್ಲಿ ಜನ ಇದ್ದಾರೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am