ಬ್ರೇಕಿಂಗ್ ನ್ಯೂಸ್
27-12-21 08:44 pm Mangalore Correspondent ಕರಾವಳಿ
ಉಳ್ಳಾಲ, ಡಿ.27 : ಕೋಟೆಕಾರು ಪಟ್ಟಣ ಪಂಚಾಯತ್ ಸ್ಥಳೀಯಾಡಳಿತಕ್ಕೆ ಶಾಂತಿಯುತ ಚುನಾವಣೆ ನಡೆದಿದ್ದು ಶೇ.66.16 ರಷ್ಟು ಮತದಾನವಾಗಿದೆ. ನೂತನ ವಧು ಸೇರಿ ಮಹಿಳಾ ಮತದಾರರೇ ಹೆಚ್ಚಿನ ಸಂಖ್ಯೆಯಲ್ಲಿ ಹಕ್ಕು ಚಲಾಯಿಸಿದ್ದಾರೆ.
ಉಳ್ಳಾಲ ಕೋಟೆಕಾರ್ ಪಟ್ಟಣ ಪಂಚಾಯತ್ ಗೆ ಸೋಮವಾರ ನಡೆದ ಚುನಾವಣೆಯಲ್ಲಿ ಶೇ.66.16 ಮತದಾನ ಆಗಿದೆ. ಪಂಚಾಯತ್ ವ್ಯಾಪ್ತಿಯಲ್ಲಿ 7,710 ಪುರುಷ ಹಾಗೂ 8,354 ಮಹಿಳಾ ಮತದಾರರು ಇದ್ದು, ಈ ಪೈಕಿ 5002 ಪುರುಷರು ಹಾಗೂ 5626 ಮಹಿಳಾ ಮತದಾರರು ತಮ್ಮ ಸಾಂವಿಧಾನಿಕ ಹಕ್ಕನ್ನು ಚಲಾಯಿಸಿದ್ದಾರೆ. ಮುಂಜಾನೆ ಮಂದಗತಿಯಲ್ಲಿ ಆರಂಭಗೊಂಡ ಕೋಟೆಕಾರ್ ಪಟ್ಟಣ ಪಂಚಾಯಿತಿ ಚುನಾವಣೆ 11 ಗಂಟೆಯ ಬಳಿಕ ಬಿರುಸಿನಿಂದ ಸಾಗಿತ್ತು.

ಪುರುಷರಿಗಿಂತ ಮಹಿಳೆಯರೇ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡಿ ದಾಖಲೆ ಸೃಷ್ಟಿಸಿದ್ದಾರೆ. 8ನೇ ವಾರ್ಡಿನ ಕೋಟೆಕಾರು ಸರಕಾರಿ ಪ್ರೌಢಶಾಲೆಯ ಮತಗಟ್ಟೆಯಲ್ಲಿ ಇಂದು ಅಡ್ಕ ಭಗವತಿ ಸಭಾಂಗಣದಲ್ಲಿ ನಾಗೇಶ್ ಅವರೊಂದಿಗೆ ಹಸೆಮಣೆ ಏರಿದ ನೂತನ ವಧು ಶ್ರದ್ಧಾ ಅವರು ಮದುವೆ ಮಂಟಪದಿಂದಲೇ ಮತಗಟ್ಟೆಗೆ ತೆರಳಿ ತಮ್ಮ ಹಕ್ಕು ಚಲಾಯಿಸಿ ಗಮನಸೆಳೆದರು. ಮಾಡೂರು, ಉಚ್ಚಿಲ, ಅಜ್ಜಿನಡ್ಕ, ಪಾನೀರ್, ಕೋಟೆಕಾರ್ ಪಟ್ಟಣ ಪಂಚಾಯಿತಿ ಮತಗಟ್ಟೆ ಗಳಲ್ಲಿ ಹಿರಿಯ ನಾಗರಿಕರು ಹೆಚ್ಚು ಮತ ಚಲಾವಣೆ ಮಾಡಿದ್ದಾರೆ. ಹಿರಿಯ ನಾಗರಿಕರಿಗಾಗಿ ವಾಹನ ಹಾಗೂ ಗಾಲಿ ಕುರ್ಚಿ ವ್ಯವಸ್ಥೆ ಮಾಡಲಾಗಿತ್ತು.

6 ಮತ್ತು 12 ನೇ ವಾರ್ಡಿನಲ್ಲಿ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳು ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಂಡಿದ್ದು ಇದಕ್ಕೆ ಸ್ಥಳೀಯರ ತೀವ್ರ ವಿರೋಧ ವ್ಯಕ್ತವಾಗಿತ್ತು. ಇಲ್ಲಿನ ಮತಗಟ್ಟೆಗಳಲ್ಲಿ ಗೊಂದಲ ಉಂಟಾಗುವ ನಿಟ್ಟಿನಲ್ಲಿ ಹೆಚ್ಚಿನ ಪೊಲೀಸ್ ಭದ್ರತೆಯನ್ನು ಒದಗಿಸಲಾಗಿತ್ತು. ವಿರೋಧ ಕೇಳಿಬಂದ ಕಾರಣಕ್ಕೆ ವೈದ್ಯಕೀಯ ವಿದ್ಯಾರ್ಥಿಗಳು ಮತದಾನದಲ್ಲಿ ಪಾಲ್ಗೊಂಡಿಲ್ಲವೆಂದು ತಿಳಿದುಬಂದಿದೆ.

17 ವಾರ್ಡ್ ಗಳ ಚುನಾವಣೆಗೆ 18 ಮತಗಟ್ಟೆಗಳನ್ನು ತೆರೆಯಲಾಗಿದ್ದು, ಎಲ್ಲೆಡೆ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಯಾವುದೇ ಅಹಿತಕರ ಘಟನೆ ನಡೆದ ಬಗೆ ವರದಿ ಆಗಿಲ್ಲ.
ಕೋಟೆಕಾರ್ ಪಟ್ಟಣ ಪಂಚಾಯಿತಿಯಲ್ಲಿರುವ 17 ಸ್ಥಾನಗಳಿಗೆ ನಡೆಯುವ ಚುನಾವಣೆಯಲ್ಲಿ 45 ಮಂದಿ ಸ್ಪರ್ಧಿಸಿದ್ದರು. ಇವುಗಳಲ್ಲಿ ಗೆಲ್ಲುವ ಕುದುರೆ ಯಾವುದು ಎನ್ನುವುದನ್ನು ಮತದಾರರು ನಿರ್ಧರಿಸಿದ್ದಾರೆ. ಅಭ್ಯರ್ಥಿಗಳ ಅದೃಷ್ಟ ಮತ ಪೆಟ್ಟಿಗೆಯಲ್ಲಿ ಭದ್ರವಾಗಿದ್ದು, ಡಿ.30 ರಂದು ತಾಲೂಕು ಪಂಚಾಯಿತಿ ಕಚೇರಿಯಲ್ಲಿ ಮತ ಎಣಿಕೆ ಪ್ರಕ್ರಿಯೆ ನಡೆಯಲಿದೆ.
Mangalore 66.16 of voting in kotekar panchayat today. Newly married couple directly came to the voting centre to cast their votes.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm