ಬ್ರೇಕಿಂಗ್ ನ್ಯೂಸ್
27-12-21 08:44 pm Mangalore Correspondent ಕರಾವಳಿ
ಉಳ್ಳಾಲ, ಡಿ.27 : ಕೋಟೆಕಾರು ಪಟ್ಟಣ ಪಂಚಾಯತ್ ಸ್ಥಳೀಯಾಡಳಿತಕ್ಕೆ ಶಾಂತಿಯುತ ಚುನಾವಣೆ ನಡೆದಿದ್ದು ಶೇ.66.16 ರಷ್ಟು ಮತದಾನವಾಗಿದೆ. ನೂತನ ವಧು ಸೇರಿ ಮಹಿಳಾ ಮತದಾರರೇ ಹೆಚ್ಚಿನ ಸಂಖ್ಯೆಯಲ್ಲಿ ಹಕ್ಕು ಚಲಾಯಿಸಿದ್ದಾರೆ.
ಉಳ್ಳಾಲ ಕೋಟೆಕಾರ್ ಪಟ್ಟಣ ಪಂಚಾಯತ್ ಗೆ ಸೋಮವಾರ ನಡೆದ ಚುನಾವಣೆಯಲ್ಲಿ ಶೇ.66.16 ಮತದಾನ ಆಗಿದೆ. ಪಂಚಾಯತ್ ವ್ಯಾಪ್ತಿಯಲ್ಲಿ 7,710 ಪುರುಷ ಹಾಗೂ 8,354 ಮಹಿಳಾ ಮತದಾರರು ಇದ್ದು, ಈ ಪೈಕಿ 5002 ಪುರುಷರು ಹಾಗೂ 5626 ಮಹಿಳಾ ಮತದಾರರು ತಮ್ಮ ಸಾಂವಿಧಾನಿಕ ಹಕ್ಕನ್ನು ಚಲಾಯಿಸಿದ್ದಾರೆ. ಮುಂಜಾನೆ ಮಂದಗತಿಯಲ್ಲಿ ಆರಂಭಗೊಂಡ ಕೋಟೆಕಾರ್ ಪಟ್ಟಣ ಪಂಚಾಯಿತಿ ಚುನಾವಣೆ 11 ಗಂಟೆಯ ಬಳಿಕ ಬಿರುಸಿನಿಂದ ಸಾಗಿತ್ತು.

ಪುರುಷರಿಗಿಂತ ಮಹಿಳೆಯರೇ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡಿ ದಾಖಲೆ ಸೃಷ್ಟಿಸಿದ್ದಾರೆ. 8ನೇ ವಾರ್ಡಿನ ಕೋಟೆಕಾರು ಸರಕಾರಿ ಪ್ರೌಢಶಾಲೆಯ ಮತಗಟ್ಟೆಯಲ್ಲಿ ಇಂದು ಅಡ್ಕ ಭಗವತಿ ಸಭಾಂಗಣದಲ್ಲಿ ನಾಗೇಶ್ ಅವರೊಂದಿಗೆ ಹಸೆಮಣೆ ಏರಿದ ನೂತನ ವಧು ಶ್ರದ್ಧಾ ಅವರು ಮದುವೆ ಮಂಟಪದಿಂದಲೇ ಮತಗಟ್ಟೆಗೆ ತೆರಳಿ ತಮ್ಮ ಹಕ್ಕು ಚಲಾಯಿಸಿ ಗಮನಸೆಳೆದರು. ಮಾಡೂರು, ಉಚ್ಚಿಲ, ಅಜ್ಜಿನಡ್ಕ, ಪಾನೀರ್, ಕೋಟೆಕಾರ್ ಪಟ್ಟಣ ಪಂಚಾಯಿತಿ ಮತಗಟ್ಟೆ ಗಳಲ್ಲಿ ಹಿರಿಯ ನಾಗರಿಕರು ಹೆಚ್ಚು ಮತ ಚಲಾವಣೆ ಮಾಡಿದ್ದಾರೆ. ಹಿರಿಯ ನಾಗರಿಕರಿಗಾಗಿ ವಾಹನ ಹಾಗೂ ಗಾಲಿ ಕುರ್ಚಿ ವ್ಯವಸ್ಥೆ ಮಾಡಲಾಗಿತ್ತು.

6 ಮತ್ತು 12 ನೇ ವಾರ್ಡಿನಲ್ಲಿ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳು ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಂಡಿದ್ದು ಇದಕ್ಕೆ ಸ್ಥಳೀಯರ ತೀವ್ರ ವಿರೋಧ ವ್ಯಕ್ತವಾಗಿತ್ತು. ಇಲ್ಲಿನ ಮತಗಟ್ಟೆಗಳಲ್ಲಿ ಗೊಂದಲ ಉಂಟಾಗುವ ನಿಟ್ಟಿನಲ್ಲಿ ಹೆಚ್ಚಿನ ಪೊಲೀಸ್ ಭದ್ರತೆಯನ್ನು ಒದಗಿಸಲಾಗಿತ್ತು. ವಿರೋಧ ಕೇಳಿಬಂದ ಕಾರಣಕ್ಕೆ ವೈದ್ಯಕೀಯ ವಿದ್ಯಾರ್ಥಿಗಳು ಮತದಾನದಲ್ಲಿ ಪಾಲ್ಗೊಂಡಿಲ್ಲವೆಂದು ತಿಳಿದುಬಂದಿದೆ.

17 ವಾರ್ಡ್ ಗಳ ಚುನಾವಣೆಗೆ 18 ಮತಗಟ್ಟೆಗಳನ್ನು ತೆರೆಯಲಾಗಿದ್ದು, ಎಲ್ಲೆಡೆ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಯಾವುದೇ ಅಹಿತಕರ ಘಟನೆ ನಡೆದ ಬಗೆ ವರದಿ ಆಗಿಲ್ಲ.
ಕೋಟೆಕಾರ್ ಪಟ್ಟಣ ಪಂಚಾಯಿತಿಯಲ್ಲಿರುವ 17 ಸ್ಥಾನಗಳಿಗೆ ನಡೆಯುವ ಚುನಾವಣೆಯಲ್ಲಿ 45 ಮಂದಿ ಸ್ಪರ್ಧಿಸಿದ್ದರು. ಇವುಗಳಲ್ಲಿ ಗೆಲ್ಲುವ ಕುದುರೆ ಯಾವುದು ಎನ್ನುವುದನ್ನು ಮತದಾರರು ನಿರ್ಧರಿಸಿದ್ದಾರೆ. ಅಭ್ಯರ್ಥಿಗಳ ಅದೃಷ್ಟ ಮತ ಪೆಟ್ಟಿಗೆಯಲ್ಲಿ ಭದ್ರವಾಗಿದ್ದು, ಡಿ.30 ರಂದು ತಾಲೂಕು ಪಂಚಾಯಿತಿ ಕಚೇರಿಯಲ್ಲಿ ಮತ ಎಣಿಕೆ ಪ್ರಕ್ರಿಯೆ ನಡೆಯಲಿದೆ.
Mangalore 66.16 of voting in kotekar panchayat today. Newly married couple directly came to the voting centre to cast their votes.
11-06-26 07:36 pm
HK News Staffer
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
11-06-26 11:43 am
HK News Staffer
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm