ಬ್ರೇಕಿಂಗ್ ನ್ಯೂಸ್
27-12-21 08:51 pm Mangalore Correspondent ಕರಾವಳಿ
Photo credits : Headline Karnataka
ಪುತ್ತೂರು, ಡಿ.27 : ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿರುವ ಮೂಲತಃ ಮೂಡುಬಿದ್ರೆ ಮೂಲದ ಅಬ್ದುಲ್ ನಜೀರ್ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆಶ್ಲೇಷ ಬಲಿ ಸೇವೆ ನೆರವೇರಿಸಿದ್ದಾರೆ.
ಜಸ್ಟಿಸ್ ಅಬ್ದುಲ್ ನಜೀರ್ ಅವರು ಭಾನುವಾರವೇ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿ, ಉಳಿದುಕೊಂಡಿದ್ದರು. ಸೋಮವಾರ ಬೆಳಗ್ಗೆ ದೇವಸ್ಥಾನದಲ್ಲಿ ಕ್ಷೇತ್ರದ ವಿಶೇಷ ಸೇವೆ ಆಶ್ಲೇಷ ಬಲಿ ನಡೆಸಿದ್ದಾರೆ.
ಅಬ್ದುಲ್ ನಜೀರ್ ಅವರು ಕುಟುಂಬ ಸಮೇತರಾಗಿ ಕುಕ್ಕೆಗೆ ಬಂದಿದ್ದು ವಿಶೇಷ ಸೇವೆಯಲ್ಲಿ ಪಾಲ್ಗೊಂಡಿದ್ದಾರೆ. ಸೇವೆಯ ಸಂದರ್ಭ ಯಾವುದೇ ಸಂಕಲ್ಪ ಹೇಳಿಕೊಂಡಿಲ್ಲ. ನಿಶ್ಚಿತ ಉದ್ದೇಶಕ್ಕಾಗಿ ಪೂಜೆ ಕೈಗೊಂಡಿದ್ದರೆ ಅದರ ಬಗ್ಗೆ ಉಲ್ಲೇಖ ಮಾಡುವ ಪದ್ಧತಿ ಇದೆ.
ಆದರೆ ನಜೀರ್ ಅವರು ಯಾವುದೇ ಪೂಜಾ ಸಂಕಲ್ಪ ಇರುವ ಬಗ್ಗೆ ಹೇಳಿಲ್ಲ ಎಂದು ದೇವಸ್ಥಾನದ ಮೂಲಗಳು ತಿಳಿಸಿವೆ. ನಜೀರ್ ಅವರನ್ನು ದೇವಸ್ಥಾನದ ಸಿಬಂದಿ ಸ್ವಾಗತಿಸಿದರು. ಆಶ್ಲೇಷ ಬಲಿ ಸೇವೆ ನೆರವೇರಿಸಿ ಕುಕ್ಕೆ ಸುಬ್ರಹ್ಮಣ್ಯದಿಂದ ನಿರ್ಗಮಿಸಿದ್ದಾರೆ ಎನ್ನುವ ಮಾಹಿತಿಯಿದೆ.
ಅಯೋಧ್ಯೆ ಶ್ರೀರಾಮ ಜನ್ಮಭೂಮಿ ವ್ಯಾಜ್ಯದಲ್ಲಿ ತೀರ್ಪು ನೀಡಿದ ನಾಲ್ವರು ನ್ಯಾಯಾಧೀಶರಲ್ಲಿ ಅಬ್ದುಲ್ ನಜೀರ್ ಕೂಡ ಒಬ್ಬರಾಗಿದ್ದು ಅವರಿಗೆ ಹೆಚ್ಚುವರಿ ಭದ್ರತೆ ಒದಗಿಸಲಾಗಿತ್ತು.
Supreme Court judge Abdul Nazeer performed Aslesha Bali puja at Kukke Subramaya temple in Dakshina Kannada along with his family in Mangalore.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
12-07-26 10:13 pm
HK News Staffer
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಕೊನೆಗೂ ಎನ್ಐ...
12-07-26 02:16 pm
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm