ಬ್ರೇಕಿಂಗ್ ನ್ಯೂಸ್
31-12-21 09:18 pm Mangalore Correspondent ಕರಾವಳಿ
ಮಂಗಳೂರು, ಡಿ.31 : ಕೊರೊನೋತ್ತರ ಪರಿಣಾಮ, ಕೊರೊನಾ ಮೂರನೇ ಅಲೆಯ ಬಗ್ಗೆ ಮೂಡಿಸಿದ್ದ ಭೀತಿ, ಇದರ ನಡುವೆ ವೈರಸ್ ವಿರುದ್ಧದ ಹೋರಾಟಕ್ಕೆ ಬಂದ ಲಸಿಕೆ, ಎಲ್ಲವೂ ಮುಗಿದು ಹೋಯ್ತು ಎಂದು ಜನಸಾಮಾನ್ಯ ನಿಟ್ಟುಸಿರು ಬಿಡುತ್ತಲೇ ಧುತ್ತನೇ ಎದ್ದುಬಂದ ಓಮಿಕ್ರಾನ್ ಸದ್ದು.. ಹೀಗೆ ದೇಶ, ಭಾಷೆ, ಜನರ ಮಧ್ಯೆ ಹಲವು ಏಳು- ಬೀಳುಗಳಿಗೆ ಸಾಕ್ಷಿಯಾದ 2021ನೇ ಕ್ರಿಸ್ತ ಶಕೆ ನೋಡ ನೋಡುತ್ತಲೇ ಸರಿದು ಹೋಗಿದೆ. ಡಿಸೆಂಬರ್ 31ರ ಕೊನೆಯ ಸೂರ್ಯಾಸ್ತ ಬಾನೆತ್ತರಲ್ಲಿ ಮುಗಿಲು ಹಾಸಿದ್ದು, ಹೊಸ ವರ್ಷದಲ್ಲಿ ಹೊಸ ನಿರೀಕ್ಷೆಯೊಂದಿಗೆ ಹುಟ್ಟಲು ಹೊರಟಿದ್ದಾನೆ.
ಪಶ್ಚಿಮ ದಿಗಂತದಲ್ಲಿ ಮುಳುಗಿದ ಸೂರ್ಯ ಜನವರಿ ಒಂದರ ಹೊಸ ಸೂರ್ಯೋದಯಕ್ಕೆ ಸಾಕ್ಷಿಯಾಗಲಿದ್ದಾನೆ. ಇತ್ತ ಮುಳುಗಿದರಷ್ಟೇ ಅತ್ತ ಎದ್ದು ಬರಲು ಸಾಧ್ಯ ತಾನೇ. ಅತ್ತ ದುಃಖ ಆವರಿಸಿದರಷ್ಟೇ ಮತ್ತೊಂದು ಕಡೆ ಸಂತಸದ ಬೆಳಕು ಮೂಡಲು ಸಾಧ್ಯ ಎನ್ನುವ ರೀತಿ ಸೂರ್ಯನ ಅಸ್ತ ಮತ್ತು ಉದಯವೂ ಅಷ್ಟೇ. ಭೂಮಿಯ ಪಾಲಿಗೆ ನೇಸರನ ರವಿಯೇ ಬೆಳಕು. ಅವನಿಲ್ಲದೆ ಈ ಭುವಿಯ ಚರಾಚರವೂ ನಿಶ್ಚಲ ಅನ್ನುವುದೂ ಸತ್ಯ. ಪ್ರತಿದಿನವೂ ಅಸ್ತವಾಗುತ್ತಲೇ ಮರುದಿನವೇ ಉದಯವಾಗಿ ಭುವಿಯ ರಕ್ಷಣೆಗೆ ನಿಲ್ಲುವ ಸೂರ್ಯ ಭೂಮಿಯ ಸಕಲ ಜೀವಿಗಳಿಗೂ ಸೋಜಿಗದ ವಸ್ತು.



ಕೆಂಪಗಿನ ದಿಗಂತ ನೋಡುತ್ತಲೇ 2021ರ ಶಕೆ ಕೊನೆಯಾಗುತ್ತಾ ಬಂದಿದೆ. ಹೊಂಬಣ್ಣ ಬೀರಿದ್ದ ನೇಸರ ಡಿಸೆಂಬರ್ 31ರ ಕೊನೆಯಾಗುತ್ತಿದ್ದಂತೆ ಕೆಂಬಣ್ಣ ಬೀರುತ್ತಾ ತನ್ನ ಕಿರಣಗಳನ್ನು ಕ್ಷೀಣಗೊಳಿಸುತ್ತಾ ಹಾದಿ ಸವೆಸಿದ್ದಾನೆ. ಸಮುದ್ರ ತೀರದಲ್ಲಿ ಸೇರಿದ್ದ ಜನರು 2021ರ ಕೊನೆಯ ಸೂರ್ಯಾಸ್ತವನ್ನು ಕಣ್ತುಂಬಿಕೊಳ್ಳುತ್ತಾ ಹೊಸ ಸೂರ್ಯೋದಯದತ್ತ ಕಣ್ಣು ನೆಟ್ಟಿದ್ದಾರೆ.



ಈ ಬಾರಿಯೂ ಕೊರೊನಾ ಭೀತಿಯು ಜನರನ್ನು ಮಕಾಡೆ ಮಲಗಿಸಿದ್ದರೂ, ಹಿಂದಿನ ವರ್ಷಕ್ಕಿಂತ ವಾಸಿ ಎನ್ನುವಂತಿತ್ತು. ಸರಕಾರದ ವಾರ್ನಿಂಗ್ ನಡುವೆಯೇ ನೇಸರನ ಕೊನೆಯ ಕಿರಣವನ್ನು ಕಂಡು ಪ್ರವಾಸಿಗರು ಸಮುದ್ರದಲ್ಲಿ ಮಿಂದೆದ್ದು ಮುಂದಿನ ವರ್ಷದತ್ತ ದಿಗಂತ ನೋಡುತ್ತಾ ನಡೆದಿದ್ದಾರೆ. ಸೂರ್ಯ ಟಾಟಾ ಹೇಳುತ್ತಾ ಕೆಂಬಣ್ಣ ಬೀರುತ್ತಾ ದಿಗಂತದಲ್ಲಿ ಲೀನವಾಗಿದ್ದಾನೆ. 2022ರ ಹೊಸ ವರ್ಷವು ನಮ್ಮೆಲ್ಲ ಓದುಗರಿಗೂ ಶುಭವ ನೀಡಲಿ ಎನ್ನುವ ಹಾರೈಕೆಯೊಂದಿಗೆ ಗುಡ್ ಲಕ್ ಹೇಳುತ್ತಾ, ಹೊಸ ದಿಗಂತದಲ್ಲಿ ಮೂಡಿಬರಲಿರುವ ಸೂರ್ಯನ ಕಿರಣ ಕೊರೊನಾ ವೈರಸಿನ ಅಟ್ಟಹಾಸಕ್ಕೆ ಇತಿಶ್ರೀ ಹಾಡಲಿ ಎಂದೂ ಹಾರೈಸುವ.
Children in the beach sea the last sun set of 2021 in Mangalore wins heart. Farewell 2021.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
07-09-26 01:22 pm
HK News Staffer
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
07-09-26 04:09 pm
HK News Staffer
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm
ಪರವಾನಗಿ ಇಲ್ಲದೆ ಔಷಧಿ ದಾಸ್ತಾನು ; ಬೆಂಗಳೂರಿನ ಅಮೆಜ...
06-09-26 10:28 pm
ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಆರೋಪ ; ಹೈಕೋರ್ಟಿಗೆ...
06-09-26 06:11 pm