ಬ್ರೇಕಿಂಗ್ ನ್ಯೂಸ್
01-01-22 04:03 pm HK Desk news ಕರಾವಳಿ
ಉಡುಪಿ, ಜ.1 : ಕೊರಗ ಸಮುದಾಯದ ಮೆಹಂದಿ ಪಾರ್ಟಿ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿ, ದೈಹಿಕ ದೌರ್ಜನ್ಯ ನಡೆಸಿರುವ ಘಟನೆ ಸಂಬಂಧಿಸಿ ರಾಷ್ಟ್ರೀಯ ಮಹಿಳಾ ಆಯೋಗ ಉಡುಪಿ ಜಿಲ್ಲಾಡಳಿತದಿಂದ ವರದಿ ಕೇಳಿದೆ.
ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಅವರಿಂದ ಘಟನೆ ಬಗ್ಗೆ ಮಾಹಿತಿ ಕೇಳಿ ಆಯೋಗ ಸೂಚನೆ ನೀಡಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಹಿಳಾ ಆಯೋಗದ ಸದಸ್ಯೆ ಶ್ಯಾಮಲಾ ಕುಂದರ್, ಪೊಲೀಸರು ಅಮಾಯಕ ಕೊರಗ ಸಮುದಾಯದ ಮೇಲೆ ಹಲ್ಲೆ ನಡೆಸಿರುವುದರಿಂದ ಜಿಲ್ಲೆಯ ಜನತೆಗೆ ಪೊಲೀಸರ ಮೇಲೆ ನಂಬಿಕೆ ಕುಸಿಯುವಂತಾಗಿದೆ. ಜನರನ್ನು ರಕ್ಷಣೆ ಮಾಡಬೇಕಾದವರು ಈ ರೀತಿ ವರ್ತಿಸಿದ್ದು ಸಮಾಜಕ್ಕೆ ತದ್ವಿರುದ್ಧ ಸಂದೇಶ ಹೋಗುವಂತಾಗಿದೆ. ಈ ಬಗ್ಗೆ ಎಸ್ಪಿ ಬಳಿ ವರದಿ ಕೇಳಿದ್ದೇವೆ. ಘಟನೆ ಬಗ್ಗೆ ಪರಾಮರ್ಶೆ ನಡೆಸಿ, ನಾವು ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.


ಡಿ.27ರಂದು ರಾತ್ರಿ ಕೋಟತ್ತಟ್ಟು ಗ್ರಾಮದ ಕೊರಗ ಸಮುದಾಯದ ಮನೆಯೊಂದರಲ್ಲಿ ಮೆಹಂದಿ ಕಾರ್ಯಕ್ರಮಕ್ಕೆ ಡಿಜೆ ಹಾಕಿದ್ದಾರೆಂದು ನೀಡಿದ್ದ ಸಾರ್ವಜನಿಕ ದೂರು ಆಧರಿಸಿ ತೆರಳಿದ್ದ ಕೋಟ ಠಾಣೆ ಪೊಲೀಸರು ಮದುಮಗ ಸೇರಿದಂತೆ ಕೊರಗ ಕಾಲನಿಯ ನಿವಾಸಿಗಳ ಮೇಲೆ ಲಾಠಿಚಾರ್ಜ್ ನಡೆಸಿದ್ದರು. ಈ ವೇಳೆ, ಮಹಿಳೆಯರು, ವೃದ್ಧರ ಮೇಲೂ ಲಾಠಿ ಏಟು ಬಿದ್ದಿತ್ತು ಎಂದು ಆರೋಪಿಸಲಾಗಿತ್ತು.

ಘಟನೆ ಭಾರೀ ವಿವಾದ ಪಡೆಯುತ್ತಲೇ ಎಸ್ಪಿ ವಿಷ್ಣುವರ್ಧನ್ ಸ್ಥಳಕ್ಕೆ ತೆರಳಿ, ತನಿಖೆ ನಡೆಸಿದ್ದರು. ಎಸ್ಪಿ ನೀಡಿದ ವರದಿ ಆಧರಿಸಿ ಪಶ್ಚಿಮ ವಲಯ ಐಜಿಪಿ ದೇವಜ್ಯೋತಿ ರೇ, ಕೋಟ ಠಾಣೆ ಎಸ್ಐ ಸಂತೋಷ್ ಅವರನ್ನು ಅಮಾನತು ಮಾಡಿದ್ದರು. ಘಟನೆ ರಾಜ್ಯದ ಗಮನ ಸೆಳೆದಿದ್ದು, ಸಿದ್ದರಾಮಯ್ಯ ಕೂಡ ಪ್ರತಿಕ್ರಿಯೆ ನೀಡಿದ್ದರು. ಸಚಿವ ಕೋಟ ಶ್ರೀನಿವಾಸ ಪೂಜಾರಿ ಊರಲ್ಲೇ ಈ ರೀತಿ ನಡೆದಿದ್ದನ್ನು ಟೀಕಿಸಿದ್ದರು.
ನಂದಿಗುಡ್ಡೆ ಕೊರಗಜ್ಜನ ಕ್ಷೇತ್ರ ಅಪವಿತ್ರ ಯತ್ನ ; ಭಾರೀ ಆಕ್ರೋಶ
ಕೊಂಡಾಣ ದೈವಸ್ಥಾನದ ಕಾಣಿಕೆ ಹುಂಡಿಯಲ್ಲೂ ಅಪಮಾನ ಕೃತ್ಯ ! ಕಾಂಡೋಮ್ ಪತ್ತೆ
ಕೊರಗಜ್ಜನ ಕಾಣಿಕೆ ಹುಂಡಿಗೆ ಕಾಂಡೋಮ್, ಸಿಎಂ ಬಿಎಸ್ವೈ ಭಾವಚಿತ್ರಕ್ಕೆ ಶಿಲುಬೆ ಹಾರ !! ಉಳ್ಳಾಲದಲ್ಲಿ ಕಿಡಿಗೇಡಿ ಕೃತ್ಯ
The lathi-charge and subsequent physical harassment in police station, done by Kota police on the Koraga community of Kotathattu gram panchayat limits, has drawn the attention of National Commission for Women (NCW). The commission has sought explanation from SP Vishnuvardhan of the district on the issue
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 06:20 pm
Mangalore Correspondent
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm