ಬ್ರೇಕಿಂಗ್ ನ್ಯೂಸ್
01-01-22 04:03 pm HK Desk news ಕರಾವಳಿ
ಉಡುಪಿ, ಜ.1 : ಕೊರಗ ಸಮುದಾಯದ ಮೆಹಂದಿ ಪಾರ್ಟಿ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿ, ದೈಹಿಕ ದೌರ್ಜನ್ಯ ನಡೆಸಿರುವ ಘಟನೆ ಸಂಬಂಧಿಸಿ ರಾಷ್ಟ್ರೀಯ ಮಹಿಳಾ ಆಯೋಗ ಉಡುಪಿ ಜಿಲ್ಲಾಡಳಿತದಿಂದ ವರದಿ ಕೇಳಿದೆ.
ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಅವರಿಂದ ಘಟನೆ ಬಗ್ಗೆ ಮಾಹಿತಿ ಕೇಳಿ ಆಯೋಗ ಸೂಚನೆ ನೀಡಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಹಿಳಾ ಆಯೋಗದ ಸದಸ್ಯೆ ಶ್ಯಾಮಲಾ ಕುಂದರ್, ಪೊಲೀಸರು ಅಮಾಯಕ ಕೊರಗ ಸಮುದಾಯದ ಮೇಲೆ ಹಲ್ಲೆ ನಡೆಸಿರುವುದರಿಂದ ಜಿಲ್ಲೆಯ ಜನತೆಗೆ ಪೊಲೀಸರ ಮೇಲೆ ನಂಬಿಕೆ ಕುಸಿಯುವಂತಾಗಿದೆ. ಜನರನ್ನು ರಕ್ಷಣೆ ಮಾಡಬೇಕಾದವರು ಈ ರೀತಿ ವರ್ತಿಸಿದ್ದು ಸಮಾಜಕ್ಕೆ ತದ್ವಿರುದ್ಧ ಸಂದೇಶ ಹೋಗುವಂತಾಗಿದೆ. ಈ ಬಗ್ಗೆ ಎಸ್ಪಿ ಬಳಿ ವರದಿ ಕೇಳಿದ್ದೇವೆ. ಘಟನೆ ಬಗ್ಗೆ ಪರಾಮರ್ಶೆ ನಡೆಸಿ, ನಾವು ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.
ಡಿ.27ರಂದು ರಾತ್ರಿ ಕೋಟತ್ತಟ್ಟು ಗ್ರಾಮದ ಕೊರಗ ಸಮುದಾಯದ ಮನೆಯೊಂದರಲ್ಲಿ ಮೆಹಂದಿ ಕಾರ್ಯಕ್ರಮಕ್ಕೆ ಡಿಜೆ ಹಾಕಿದ್ದಾರೆಂದು ನೀಡಿದ್ದ ಸಾರ್ವಜನಿಕ ದೂರು ಆಧರಿಸಿ ತೆರಳಿದ್ದ ಕೋಟ ಠಾಣೆ ಪೊಲೀಸರು ಮದುಮಗ ಸೇರಿದಂತೆ ಕೊರಗ ಕಾಲನಿಯ ನಿವಾಸಿಗಳ ಮೇಲೆ ಲಾಠಿಚಾರ್ಜ್ ನಡೆಸಿದ್ದರು. ಈ ವೇಳೆ, ಮಹಿಳೆಯರು, ವೃದ್ಧರ ಮೇಲೂ ಲಾಠಿ ಏಟು ಬಿದ್ದಿತ್ತು ಎಂದು ಆರೋಪಿಸಲಾಗಿತ್ತು.
ಘಟನೆ ಭಾರೀ ವಿವಾದ ಪಡೆಯುತ್ತಲೇ ಎಸ್ಪಿ ವಿಷ್ಣುವರ್ಧನ್ ಸ್ಥಳಕ್ಕೆ ತೆರಳಿ, ತನಿಖೆ ನಡೆಸಿದ್ದರು. ಎಸ್ಪಿ ನೀಡಿದ ವರದಿ ಆಧರಿಸಿ ಪಶ್ಚಿಮ ವಲಯ ಐಜಿಪಿ ದೇವಜ್ಯೋತಿ ರೇ, ಕೋಟ ಠಾಣೆ ಎಸ್ಐ ಸಂತೋಷ್ ಅವರನ್ನು ಅಮಾನತು ಮಾಡಿದ್ದರು. ಘಟನೆ ರಾಜ್ಯದ ಗಮನ ಸೆಳೆದಿದ್ದು, ಸಿದ್ದರಾಮಯ್ಯ ಕೂಡ ಪ್ರತಿಕ್ರಿಯೆ ನೀಡಿದ್ದರು. ಸಚಿವ ಕೋಟ ಶ್ರೀನಿವಾಸ ಪೂಜಾರಿ ಊರಲ್ಲೇ ಈ ರೀತಿ ನಡೆದಿದ್ದನ್ನು ಟೀಕಿಸಿದ್ದರು.
ನಂದಿಗುಡ್ಡೆ ಕೊರಗಜ್ಜನ ಕ್ಷೇತ್ರ ಅಪವಿತ್ರ ಯತ್ನ ; ಭಾರೀ ಆಕ್ರೋಶ
ಕೊಂಡಾಣ ದೈವಸ್ಥಾನದ ಕಾಣಿಕೆ ಹುಂಡಿಯಲ್ಲೂ ಅಪಮಾನ ಕೃತ್ಯ ! ಕಾಂಡೋಮ್ ಪತ್ತೆ
ಕೊರಗಜ್ಜನ ಕಾಣಿಕೆ ಹುಂಡಿಗೆ ಕಾಂಡೋಮ್, ಸಿಎಂ ಬಿಎಸ್ವೈ ಭಾವಚಿತ್ರಕ್ಕೆ ಶಿಲುಬೆ ಹಾರ !! ಉಳ್ಳಾಲದಲ್ಲಿ ಕಿಡಿಗೇಡಿ ಕೃತ್ಯ
The lathi-charge and subsequent physical harassment in police station, done by Kota police on the Koraga community of Kotathattu gram panchayat limits, has drawn the attention of National Commission for Women (NCW). The commission has sought explanation from SP Vishnuvardhan of the district on the issue
14-07-25 10:44 pm
Bangalore Correspondent
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 09:55 pm
Mangalore Correspondent
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm