ಬ್ರೇಕಿಂಗ್ ನ್ಯೂಸ್
01-01-22 05:33 pm Mangalore Correspondent ಕರಾವಳಿ
ಉಡುಪಿ, ಜ.1 : ಮದುವೆ ಮನೆಯಲ್ಲಿ ಪೊಲೀಸ್ ದೌರ್ಜನ್ಯ ಪ್ರಕರಣ ಹಿನ್ನೆಲೆಯಲ್ಲಿ ಘಟನೆ ನಡೆದಿರುವ ಕೋಟತಟ್ಟು ಗ್ರಾಮದ ಕೊರಗರ ಕಾಲನಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ ನೀಡಿದ್ದಾರೆ.
ಲಾಠಿಚಾರ್ಜ್ ಘಟನೆ ನಡೆದ ಮನೆಗೆ ಭೇಟಿ ನೀಡಿದ ಸಚಿವ ಆರಗ ಮತ್ತು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕಾಲನಿ ನಿವಾಸಿಗಳ ಅಹವಾಲು ಆಲಿಸಿದರು. ಪೊಲೀಸರ ಕಾರ್ಯ ವೈಖರಿ ಬಗ್ಗೆ ನೋವು ವ್ತಕ್ತಪಡಿಸಿದ ಮದುವೆ ಮನೆಯ ಕುಟುಂಬಸ್ಥರು, ಮಕ್ಕಳು, ಮಹಿಳೆಯರು, ವೃದ್ಧರು ಎನ್ನುವ ಭೇದ ಇಲ್ಲದೆ ಲಾಠಿ ಏಟು ನೀಡಿದ್ದಾರೆ. ನಾವು ಏನು ತಪ್ಪು ಮಾಡಿದ್ದೇವೆ, ಯಾಕಾಗಿ ಹೊಡೆಯುತ್ತೀರಿ ಎಂದು ಕೇಳಿದ್ದಕ್ಕೆ ಉತ್ತರ ಇರಲಿಲ್ಲ. ಮದುಮಗನಿಗೂ ಹೊಡೆದಿದ್ದಾರೆ ಎಂದು ಹೇಳಿದರು.
ಮರುದಿನ ನಮ್ಮನ್ನು ಠಾಣೆಗೆ ಕರೆದೊಯ್ದು ಬರಿಮೈಯಲ್ಲಿ ನಿಲ್ಲಿಸಿ ಹೊಡೆದಿದ್ದಾರೆ. ನಾವು ಮದ್ಯವ್ಯಸನಿಗಳು ಎಂದು ಆರೋಪಿಸಿ ಹೊಡೆದಿದ್ದಾರೆ. ನಾನು ಜೀವಮಾನದಲ್ಲಿ ಕುಡಿದವನೇ ಅಲ್ಲ. ಕಾಲನಿಯ ನಿವಾಸಿಗಳು ಮದ್ಯ ಕುಡಿಯದಂತೆ ಜಾಗೃತಿ ಮಾಡುತ್ತಿದ್ದೇವೆ.ವಿದ್ಯಾರ್ಥಿಗಳು ಶಿಕ್ಷಣ ಪಡೆಯುವಂತೆ ಅಭಿಯಾನ ಮಾಡಿದ್ದೇವೆ. ನಾವು ಕಾಲನಿ ನಿವಾಸಿಗಳು ಯಾವುದೇ ಪೊಲೀಸ್ ಕೇಸು ಮಾಡಿಕೊಂಡವರೂ ಅಲ್ಲ. ನಮಗೆ ಬದುಕುವ ಹಕ್ಕು ಇಲ್ಲವೇ.. ನನ್ನ ತಮ್ಮ ಸರಕಾರಿ ಕೆಲಸದಲ್ಲಿದ್ದು ಅವನೇ ಕಾಲನಿ ನಿವಾಸಿಗಳಿಗೆ ಸ್ಫೂರ್ತಿ ಎಂದು ಮದುಮಗನ ಅಣ್ಣ ಗೃಹ ಸಚಿವರ ಬಳಿ ಅಲವತ್ತುಕೊಂಡರು.
ಪೊಲೀಸ್ ದೌರ್ಜನ್ಯದ ಬಗ್ಗೆ ವಿಷಾದ ವ್ಯಕ್ತಪಡಿಸಿದ ಸಚಿವ ಆರಗ ಜ್ಞಾನೇಂದ್ರ, ಪೊಲೀಸರ ಅತಿರೇಕದ ವರ್ತನೆಯಿಂ ಬೇಸರವಾಗಿದೆ. ಘಟನೆ ಬಗ್ಗೆ ಸಮಗ್ರ ತನಿಖೆ ನಡೆಸುವ ಸಲುವಾಗಿ ಪ್ರಕರಣವನ್ನು ಸಿಓಡಿಗೆ ಒಪ್ಪಿಸುತ್ತೇವೆ. ಸಿಓಡಿ ಸಂಸ್ಥೆಯ ಮೂಲಕ ಸಮಗ್ರ ತನಿಖೆ ಮಾಡುತ್ತೇವೆ ಎಂದು ಹೇಳಿದರು.
ಪೊಲೀಸರ ಪ್ರತಿ ದೂರಿನ ಬಗ್ಗೆಯೂ ತನಿಖೆ ಮಾಡುತ್ತೇವೆ. ಸಂತ್ರಸ್ತ ಸಮುದಾಯಕ್ಕೆ ಯಾವುದೇ ತೊಂದರೆಯಾಗದಂತೆ ಕ್ರಮ ಕೈಗೊಳ್ಳುತ್ತೇವೆ. ಕೊರಗ ಕುಟುಂಬದ ಜೊತೆ ರಾಜ್ಯ ಸರಕಾರ ಇದೆ. ಈ ಬಗ್ಗೆ ಯಾವುದೇ ಬೇಸರ ನಿಮಗೆ ಬೇಡ ಎಂದ ಗೃಹ ಸಚಿವರು, ದೌರ್ಜನ್ಯಕ್ಕೆ ಒಳಗಾದ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ನೀಡುವುದಾಗಿ ಹೇಳಿದರು. ಅಲ್ಲದೆ, ಸ್ಥಳದಲ್ಲೇ ಸಂತ್ರಸ್ತ 6 ಕುಟುಂಬಗಳಿಗೆ 50 ಸಾವಿರದ ಚೆಕ್ ಹಸ್ತಾಂತರ ಮಾಡಿದರು.
ಕೊರಗರ ಜೊತೆ ಅಕ್ಕಿ ಮೂಟೆ ಹೊರುತ್ತಿದ್ದೆ..
ಇದೇ ವೇಳೆ, ತನ್ನ ಹಳೆಯ ಜೀವನವನ್ನು ನೆನಪಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ, ನಾನು ಕೂಡಾ ಕೊರಗ ಸಮುದಾಯದ ಜೊತೆ ಬೆಳೆದಿದ್ದವನು. ಅಕ್ಕಿ ಗಿರಣಿಯಲ್ಲಿ ಕೊರಗ ಸಮುದಾಯದವರೊಂದಿಗೆ ಮೂಟೆ ಹೊರುತ್ತಿದ್ದೆ. ಅವರ ನೋವು, ನಲಿವು ನನಗೆ ಗೊತ್ತಿದೆ. ತಳಸ್ತರದ ಮುಗ್ದ ಸಮುದಾಯ ಇಂತಹ ಕಾರ್ಯಕ್ರಮ ಮಾಡಿದ್ದೇ ಅಪರೂಪ. ಈ ಘಟನೆಯಿಂದ ಸಮುದಾಯಕ್ಕೆ ನೋವಾಗಿದೆ. ಕುಟುಂಬಕ್ಕೆ ಆಘಾತವಾಗಿದೆ ಎಂದು ಹೇಳಿದರು.
ಕೋಟದಲ್ಲಿ ಪೊಲೀಸ್ ದೌರ್ಜನ್ಯ ; ಡಿಎಸ್ಪಿ ನೇತೃತ್ವದಲ್ಲಿ ತನಿಖೆಗೆ ಆದೇಶ - ಎಸ್ಪಿ ವಿಷ್ಣುವರ್ಧನ್
ಮೆಹಂದಿ ಕಾರ್ಯಕ್ರಮಕ್ಕೆ ನುಗ್ಗಿದ ಪೊಲೀಸರಿಂದ ಲಾಠಿಚಾರ್ಜ್ ! ಸಚಿವ ಕೋಟ ಊರಲ್ಲೇ ಬಡವರ ಮೇಲೆ ಪೊಲೀಸರ ದೌರ್ಜನ್ಯ !
ಕೊರಗ ಕಾಲನಿಯಲ್ಲಿ ಲಾಠಿಚಾರ್ಜ್ ; ಘಟನೆ ಬಗ್ಗೆ ಎಸ್ಪಿಯಿಂದ ವರದಿ ಕೇಳಿದ ರಾಷ್ಟ್ರೀಯ ಮಹಿಳಾ ಆಯೋಗ
Udupi Kota Police atrocity on Koraga community Home Minister Araga Dnyanendra Visits spot orders compensation for those hit by police.
02-09-25 11:04 pm
Bangalore Correspondent
Sowjanya Case, Dharmasthala: ಸೌಜನ್ಯಾ ಪ್ರಕರಣ ;...
02-09-25 08:37 pm
ಮಕ್ಕಳ ಕಳ್ಳರು ಹೀಗೂ ಮಾಡುತ್ತಾರೆ..! ಶಾಲಾ ವಾಹನ ಎಂದ...
02-09-25 08:00 pm
Ranya Rao: ಚಿನ್ನ ಸ್ಮಗ್ಲರ್ ರನ್ಯಾ ರಾವ್ ಗೆ ಮತ್ತೆ...
02-09-25 06:22 pm
Dharmasthala ED: ಧರ್ಮಸ್ಥಳ ಪ್ರಕರಣದಲ್ಲಿ ಇಡಿ ಎಂಟ...
02-09-25 02:37 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
02-09-25 10:26 pm
Mangalore Correspondent
Mangalore Mukka Accident: ಮುಕ್ಕ ಜಂಕ್ಷನ್ನಲ್ಲಿ...
02-09-25 04:44 pm
Bribe Puttur, Tahsildar Absconding, Lokayukta...
02-09-25 02:17 pm
ಮಗನಿಗೆ ಇಲ್ಲ ಉದ್ಯೋಗ ; ಮುಂಬೈನಿಂದ ಉಡುಪಿಗೆ ಬಂದು ಆ...
02-09-25 01:05 pm
ಧರ್ಮಸ್ಥಳ ಚಲೋ ಬೆನ್ನಲ್ಲೇ ಸೌಜನ್ಯಾ ಮನೆಗೆ ಭೇಟಿಯಿತ್...
01-09-25 10:01 pm
02-09-25 07:09 pm
Mangalore Correspondent
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm