ಬ್ರೇಕಿಂಗ್ ನ್ಯೂಸ್
01-01-22 06:49 pm Mangalore Correspondent ಕರಾವಳಿ
ಕುಂದಾಪುರ, ಜ.1 : ರೌಡಿಗಳನ್ನು ಕಂಟ್ರೋಲ್ ಮಾಡಲು ಪೊಲೀಸರನ್ನು ನೇಮಕ ಮಾಡಿರುವುದು. ಪೊಲೀಸರೇ ರೌಡಿಗಳಾದರೆ ಯಾರು ಏನು ಮಾಡೋದು ? ಘಟನೆ ನಡೆದ ಎರಡು ದಿನಗಳ ನಂತರ ಒಬ್ಬ ಪೊಲೀಸ್ ಆಸ್ಪತ್ರೆ ದಾಖಲಾಗ್ತಾನೆ. ಕೌಂಟರ್ ಕೇಸ್ ಕೊಡ್ತಾನಂದ್ರೆ ಅದು ಸುಳ್ಳು ಕೇಸು ಅನ್ನೋದು ಗೊತ್ತಾಗತ್ತೆ. ಇದು ಅಪರಾಧ. ಕೋಟ ಪಿಎಸ್ಐ ಆಗಿದ್ದ ವ್ಯಕ್ತಿ ಪೊಲೀಸ್ ಇಲಾಖೆಗೆ ಫಿಟ್ಟೋ, ಅನ್ ಫಿಟ್ಟೋ ಅನ್ನೋದನ್ನು ನಮ್ಮ ಸರಕಾರ ನಿರ್ಧರಿಸುತ್ತದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅಬ್ಬರಿಸಿದ್ದಾರೆ.
ಕೋಟತಟ್ಟು ಗ್ರಾಮದ ಕೊರಗರ ಕಾಲನಿಗೆ ಭೇಟಿ ನೀಡಿ, ಅಲ್ಲಿನ ಜನರ ಅಹವಾಲು ಆಲಿಸಿದ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಸಚಿವರು, ರಾಜ್ಯದಲ್ಲಿ ಒಂದು ಲಕ್ಷ ಪೊಲೀಸ್ ಸಿಬಂದಿ ಇದ್ದಾರೆ. ಕೋಟ ಪಿಎಸ್ಐ ಇಡೀ ಪೊಲೀಸ್ ಇಲಾಖೆಗೆ ಕೆಟ್ಟ ಹೆಸರು ತಂದಿದ್ದಾನೆ. ಆತ ಒಂದು ದಾರ್ಷ್ಟ್ಯದ ವ್ಯಕ್ತಿ ಅಂತ ಕಾಣುತ್ತದೆ. ಯಾವುದೇ ವಿಚಾರ ಇದ್ದರೂ ಪೊಲೀಸರು ತಮ್ಮ ಮೇಲಧಿಕಾರಿಗಳಿಗೆ ಮಾಹಿತಿ ಕೊಡೋದು ಪದ್ಧತಿ. ಇಲ್ಲಿ ಆತ ಯಾರಿಗೂ ಮಾಹಿತಿ ಕೊಟ್ಟಿಲ್ವಂತೆ. ತಾನೇ ಸುಪ್ರೀಂ ಅಂತ ವರ್ತಿಸಿದ್ದಾನೆ. ಸರ್ಕಲ್, ಡಿವೈಎಸ್ಪಿ, ಎಸ್ಪಿಗೆ ಯಾರಿಗೂ ಮಾಹಿತಿ ಕೊಟ್ಟಿಲ್ಲ. ಆತನ ಅತಿರೇಕದ ವರ್ತನೆಯಿಂದಾಗಿ ಪೊಲೀಸ್ ಇಲಾಖೆಯ ಪರವಾಗಿ ನಾನು ತಲೆತಗ್ಗಿಸುವ ಸ್ಥಿತಿ ಬಂದಿದೆ.
ರಾಜ್ಯದಲ್ಲಿ ಒಳ್ಳೊಳ್ಳೆ ಪೊಲೀಸ್ ಅಧಿಕಾರಿಗಳು, ಸಿಬಂದಿ ಇದ್ದಾರೆ. ಇಂಥ ಘಟನೆಯಿಂದ ಅವರೆಲ್ಲ ತಲೆ ತಗ್ಗಿಸಬೇಕಾಗುತ್ತದೆ. ನಮ್ಮ ಇಲಾಖೆಯಲ್ಲಿ ಕೆಟ್ಟವರು ಇಲ್ಲ ಎನ್ನೋದಿಲ್ಲ. ಆದರೆ ಹೆಚ್ಚಿನವರು ಒಳ್ಳಯವರಿದ್ದಾರೆ. ಒಳ್ಳೆಯ ವ್ಯಕ್ತಿಗಳಿಂದಾಗಿ, ಪೊಲೀಸರಿಂದಾಗಿ ನಾವು ನೆಮ್ಮದಿಯಿಂದ ಮಲಗುವಂತಾಗಿದೆ. ಆದರೆ ತಪ್ಪು ಮಾಡಿದವರಿಗೆ ಏನು ಶಿಕ್ಷೆ ಕೊಡಬೇಕೋ ಅದನ್ನು ಕೊಡುತ್ತೇವೆ ಎಂದು ಆರಗ ಹೇಳಿದರು.
ಪೊಲೀಸ್ ಕಾನ್ಸ್ ಟೇಬಲ್, ಎರಡು ದಿನಗಳ ನಂತರ ದೂರು ಕೊಟ್ಟು ತಪ್ಪು ಮಾಡಿದ್ದಾನೆ. ಇದೊಂದು ದೊಡ್ಡ ಅಪರಾಧ. ಜನಸಾಮಾನ್ಯರು ಈ ರೀತಿ ಮಾಡ್ತಾರೆ. ಆದರೆ ಜನರನ್ನು ರಕ್ಷಣೆ ಮಾಡಬೇಕಾದ ಪೊಲೀಸರು ಇಂಥ ಕೆಲಸ ಮಾಡಬಾರದು. ಪಿಎಸ್ಐ ಅಮಾನತು ಮಾಡಿದ್ದೇವೆ. ಐವರು ಪೊಲೀಸರನ್ನು ವರ್ಗಾವಣೆ ಮಾಡಿದ್ದೇವೆ. ತನಿಖೆಯ ಬಳಿಕ ಅವರ ತಪ್ಪಿಗೂ ಶಿಕ್ಷೆ ಆಗುತ್ತದೆ. ಪೊಲೀಸರು ಕೌಂಟರ್ ಕೇಸ್ ಕೊಟ್ಟಿದ್ದಾರೆಂದು ಕಾಲನಿ ನಿವಾಸಿಗಳು ಯಾರು ಕೂಡ ಹೆದರಬೇಕಾಗಿಲ್ಲ. ಜನರ ಜೊತೆ ರಾಜ್ಯ ಸರಕಾರ ನಿಲ್ಲುತ್ತದೆ ಎಂದು ಗೃಹ ಸಚಿವರು ಹೇಳಿದರು.
ಕೋಟದಲ್ಲಿ ಪೊಲೀಸ್ ದೌರ್ಜನ್ಯ ; ಡಿಎಸ್ಪಿ ನೇತೃತ್ವದಲ್ಲಿ ತನಿಖೆಗೆ ಆದೇಶ - ಎಸ್ಪಿ ವಿಷ್ಣುವರ್ಧನ್
ಮೆಹಂದಿ ಕಾರ್ಯಕ್ರಮಕ್ಕೆ ನುಗ್ಗಿದ ಪೊಲೀಸರಿಂದ ಲಾಠಿಚಾರ್ಜ್ ! ಸಚಿವ ಕೋಟ ಊರಲ್ಲೇ ಬಡವರ ಮೇಲೆ ಪೊಲೀಸರ ದೌರ್ಜನ್ಯ !
ಕೊರಗ ಕಾಲನಿಯಲ್ಲಿ ಲಾಠಿಚಾರ್ಜ್ ; ಘಟನೆ ಬಗ್ಗೆ ಎಸ್ಪಿಯಿಂದ ವರದಿ ಕೇಳಿದ ರಾಷ್ಟ್ರೀಯ ಮಹಿಳಾ ಆಯೋಗ
Atrocity on Koraga community SI suspended, home minister Araga Dnyanendra states we will investigate wether case is true or false
02-09-25 11:04 pm
Bangalore Correspondent
Sowjanya Case, Dharmasthala: ಸೌಜನ್ಯಾ ಪ್ರಕರಣ ;...
02-09-25 08:37 pm
ಮಕ್ಕಳ ಕಳ್ಳರು ಹೀಗೂ ಮಾಡುತ್ತಾರೆ..! ಶಾಲಾ ವಾಹನ ಎಂದ...
02-09-25 08:00 pm
Ranya Rao: ಚಿನ್ನ ಸ್ಮಗ್ಲರ್ ರನ್ಯಾ ರಾವ್ ಗೆ ಮತ್ತೆ...
02-09-25 06:22 pm
Dharmasthala ED: ಧರ್ಮಸ್ಥಳ ಪ್ರಕರಣದಲ್ಲಿ ಇಡಿ ಎಂಟ...
02-09-25 02:37 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
02-09-25 10:26 pm
Mangalore Correspondent
Mangalore Mukka Accident: ಮುಕ್ಕ ಜಂಕ್ಷನ್ನಲ್ಲಿ...
02-09-25 04:44 pm
Bribe Puttur, Tahsildar Absconding, Lokayukta...
02-09-25 02:17 pm
ಮಗನಿಗೆ ಇಲ್ಲ ಉದ್ಯೋಗ ; ಮುಂಬೈನಿಂದ ಉಡುಪಿಗೆ ಬಂದು ಆ...
02-09-25 01:05 pm
ಧರ್ಮಸ್ಥಳ ಚಲೋ ಬೆನ್ನಲ್ಲೇ ಸೌಜನ್ಯಾ ಮನೆಗೆ ಭೇಟಿಯಿತ್...
01-09-25 10:01 pm
02-09-25 07:09 pm
Mangalore Correspondent
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm