ಬ್ರೇಕಿಂಗ್ ನ್ಯೂಸ್
01-01-22 10:27 pm Mangalore Correspondent ಕರಾವಳಿ
Photo credits : Headline Karnataka
ಮಂಗಳೂರು, ಜ.1 : ಎರಡು ಮಕ್ಕಳ ತಾಯಿಯೊಬ್ಬಳು ಪಕ್ಕದ ಮನೆಯಾತನ ಜೊತೆ ಪ್ರೇಮ ಸಂಬಂಧ ಇರಿಸಿಕೊಂಡು ಅದೇ ಅಕ್ರಮ ಸಂಬಂಧಕ್ಕೆ ಕಟ್ಟುಬಿದ್ದು ಸಾವಿಗೆ ಶರಣಾದ ಘಟನೆ ನಗರದಲ್ಲಿ ನಡೆದಿದೆ.
ತೊಕ್ಕೊಟ್ಟಿನ ಕುತ್ತಾರು ಬಳಿಯ ಮುನ್ನೂರು ಗ್ರಾಮದ ಸುಬಾಷ್ ನಗರ ನಿವಾಸಿ ಭಾರತಿ (36) ಮಂಗಳೂರಿನ ಬಂದರಿನ ಲಾಡ್ಜ್ ಒಂದರಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಡಿ.29ರಂದು ಮಹಿಳೆ ನಾಪತ್ತೆಯಾಗಿದ್ದು, ಈ ಬಗ್ಗೆ ಆಕೆಯ ಗಂಡ ಉಳ್ಳಾಲ ಪೊಲೀಸರಿಗೆ ದೂರು ನೀಡಿದ್ದರು. ಬಳಿಕ ತಪಾಸಣೆ ನಡೆಸಿದಾಗ ಪಕ್ಕದ ಮನೆಯ ಸಂದೀಪ್ ಎಂಬಾತನೂ ನಾಪತ್ತೆಯಾಗಿದ್ದ.
ಮರುದಿನ ಸಂದೀಪ್ ತನ್ನ ಮನೆಗೆ ಮರಳಿದ್ದು, ಮಹಿಳೆಯ ಬಗ್ಗೆ ಪೊಲೀಸರು ಪ್ರಶ್ನೆ ಮಾಡಿದಾಗ ಬಂದರಿನ ಲಾಡ್ಜ್ ಹೆಸರು ಹೇಳಿದ್ದ. ಪೊಲೀಸರು ಅಲ್ಲಿಗೆ ತೆರಳಿ ನೋಡಿದಾಗ, ಮಹಿಳೆ ಕೊಠಡಿಯಲ್ಲಿ ವಿಷ ಕುಡಿದು ಮೃತಪಟ್ಟಿರುವುದು ಕಂಡುಬಂದಿತ್ತು. ಮಹಿಳೆ ಮತ್ತು ಸಂದೀಪ್ ನಡುವೆ ಅಕ್ರಮ ಸಂಬಂಧ ಇತ್ತು ಎನ್ನಲಾಗುತ್ತಿದ್ದು, ಇದೇ ನೆಪದಲ್ಲಿ ಆಕೆ ತನ್ನನ್ನು ಮದುವೆಯಾಗಲು ಒತ್ತಾಯಿಸಿ ನಿರಾಕರಿಸಿದ್ದಕ್ಕೆ ಸಾವಿಗೆ ಶರಣಾಗಿದ್ದಾಳೆ ಎನ್ನಲಾಗುತ್ತಿದೆ.
ಸಂದೀಪ್ ಗೆ ಬೇರೆ ಮದುವೆಯಾಗಿದ್ದು, ತಿಂಗಳ ಹಿಂದಷ್ಟೇ ಮಗುವಾಗಿ ಇತ್ತೀಚೆಗೆ ತನ್ನ ಮನೆಯಲ್ಲಿ ತೊಟ್ಟಿಲು ಹಾಕುವ ಕಾರ್ಯವೂ ನಡೆದಿತ್ತು. ಇವರಿಬ್ಬರ ಮನೆಯೂ ಹತ್ತಿರದಲ್ಲೇ ಇದ್ದು ಪೊಲೀಸರು ಆತ್ಮಹತ್ಯೆಗೆ ಪ್ರಚೋದನೆ ಹೆಸರಲ್ಲಿ ಕೇಸು ದಾಖಲಿಸಿ ಆರೋಪಿ ಸಂದೀಪ್ (39) ನನ್ನು ಬಂಧಿಸಿದ್ದಾರೆ. ಮೃತ ಮಹಿಳೆಗೆ ಇಬ್ಬರು ಗಂಡು ಮಕ್ಕಳಿದ್ದು, ಮಕ್ಕಳು ಮತ್ತು ಗಂಡನನ್ನು ಬಿಟ್ಟು ಸಾವಿಗೆ ಶರಣಾಗಿದ್ದಾಳೆ.
ಮೃತ ಮಹಿಳೆಯ ಗಂಡ ಮತ್ತು ಸಂದೀಪ್ ಗೆಳೆಯರಾಗಿದ್ದು, ಒಡನಾಟ ಇರಿಸಿಕೊಂಡಿದ್ದರು. ಸಂದೀಪ್ ಕುತ್ತಾರು ಕೊರಗಜ್ಜನ ಕಟ್ಟೆಯ ಬಳಿ ಫ್ಯಾಬ್ರಿಕೇಶನ್ ಅಂಗಡಿ ನಡೆಸುತ್ತಿದ್ದ. ಗಂಡನ ಪರಿಚಯದಲ್ಲಿ ಮನೆಗೆ ಬರುತ್ತಿದ್ದ ಸಂದೀಪ್ ಮತ್ತು ಮಹಿಳೆಯ ನಡುವೆ ಹತ್ತಿರದ ಸಂಬಂಧ ಬೆಳೆದಿತ್ತು. ಇದೇ ಸಂಬಂಧ ಈಗ ಮಹಿಳೆಯ ಸಾವಿಗೆ ಕಾರಣವಾದರೆ, ಸಂದೀಪ್ ನನ್ನು ಜೈಲು ಕಂಬಿ ಎಣಿಸುವಂತೆ ಮಾಡಿದೆ.
Mangalore illicit affair 36 year old woman from Kuthar who was missing since 29th December has been found in a lodge at Bunder where she has committed suicide. The deceased is a mother of two.
11-06-26 07:36 pm
HK News Staffer
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
11-06-26 11:43 am
HK News Staffer
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm